ಓಟ್ ಮಾಡಿದವರಿಗೆ ಕಾಫಿ, ಟೀ ಫ್ರೀ!
Team Udayavani, Apr 18, 2019, 3:00 AM IST
ಕೆಂಗೇರಿ: ಓಟ್ ಮಾಡಿ, ಆಹಾರದ ಬೆಲೆಯಲ್ಲಿ ರಿಯಾಯಿತಿ ಪಡೆಯಿರಿ! ಇದು ಕೆಂಗೇರಿ ಉಪನಗರದ ಮೊದಲನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ಕೃಷ್ಣ ಗ್ರಾಂಡ್ ಹೋಟೆಲ್ ಮಾಲೀಕರು ಮತದಾನ ಪ್ರಮಾಣ ಹೆಚ್ಚಳಕ್ಕೆ ತಮ್ಮ ಅಳಿಲು ಸೇವೆ ಸಲ್ಲಿಸಲು ನೀಡಿರುವ ಆಫರ್.
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ (ಇಂದು) ನಡೆಯುತ್ತಿದ್ದು, ಓಟ್ ಹಾಕಿದ ಮತದಾರರು ಹೋಟೆಲ್ಗೆ ಬಂದು ಶಾಯಿಯ ಗುರುತು ತೋರಿಸಿದರೆ, ಕಾಫಿ, ಚಹಾ ಉಚಿತವಾಗು ನೀಡಲಾಗುತ್ತದೆ. ಅಲ್ಲದೆ, ತಿಂಡಿ, ಊಟದ ದರದಲ್ಲಿ ಶೇ.5ರಷ್ಟು ರಿಯಾಯಿತಿ ನೀಡುವುದಾಗಿ ಹೋಟೆಲ್ ಮಾಲೀಕ ಪ್ರತಾಪ್ ಶೆಟ್ಟಿ ತಿಳಿಸಿದ್ದಾರೆ.
ಹೋಟೆಲ್ ಪ್ರಾರಂಭವಾದ ದಿನದಿಂದಲೂ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ವಿಕಲಚೇತನರಿಗೆ ಶೇ.5ರಷ್ಟು ಹಾಗೂ ಮಾಜಿ ಯೋಧರಿಗೆ ಶೇ.10ರಷ್ಟು ರಿಯಾಯಿತಿ ನೀಡುತ್ತಿರುವುದು ಶ್ರೀ ಕೃಷ್ಣ ಗ್ರಾಂಡ್ ಹೋಟೆಲ್ನ ವಿಶೇಷ.
“ದೇಶವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುವ ಸರ್ಕಾರ ರಚನೆಗಾಗಿ ಮತದಾನದ ಹಕ್ಕು ಚಲಾಯಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಮತದಾನಕ್ಕೆ ಪ್ರೋತ್ಸಾಹ ನೀಡಲು ಈ ಕೊಡುಗೆ ನೀಡುತ್ತಿದ್ದೇವೆ,’ ಎನ್ನುತ್ತಾರೆ ಹೋಟೆಲ್ ಮಾಲೀಕ ಪ್ರತಾಪ್ ಶೆಟ್ಟಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ