ಕುಸಿದ ಸೇತುವೆ ಮೇಲೆ ಜನರ ಸರ್ಕಸ್

ನಿತ್ಯ ಭಯದಲ್ಲೇ ಗ್ರಾಮಸ್ಥರ ಸಂಚಾರ10 ತಿಂಗಳಾದರೂ ದುರಸ್ತಿಯಾಗದ ಸೇತುವೆ

Team Udayavani, Apr 18, 2019, 5:30 PM IST

18-April-35

ಬೈಲಹೊಂಗಲ: ಬೇವಿನಕೊಪ್ಪ-ಸಂಗೊಳ್ಳಿ ಮಾರ್ಗದಲ್ಲಿ ಹಾಳಾಗಿರುವ ಸೇತುವೆ ಮೇಲೆ ಸಂಚರಿಸುತ್ತಿರುವ ಬೈಕ್‌ ಸವಾರರು.

ಬೈಲಹೊಂಗಲ: ತಾಲೂಕಿನ ಬೇವಿನಕೊಪ್ಪ-ಸಂಗೊಳ್ಳಿ ಗ್ರಾಮಗಳ ನಡುವೆ ಮಲಪ್ರಭಾ ನದಿಗೆ ನಿರ್ಮಿಸಿದ್ದ ಸೇತುವೆ (ಬಾಂದಾರ್‌) ಕೊಚ್ಚಿ ಹೋಗಿ 10 ತಿಂಗಳಾಗಿದ್ದರೂ ಅ ಧಿಕಾರಿಗಳು ದುರಸ್ತಿ ಮಾಡದಿರುವದರಿಂದ ವಾಹನ ಸಂಚಾರಕ್ಕೆ ಗ್ರಾಮಸ್ಥರು
ಪರದಾಡುವಂತಾಗಿದೆ.

ಕಳೆದ ಬಾರಿ ಖಾನಾಪುರ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ಮಲಪ್ರಭಾ ನದಿಯಲ್ಲಿ ನೀರಿನ ಪ್ರವಾಹ ಹೆಚ್ಚಾಗಿ 2018ರ ಜೂನ್‌ ತಿಂಗಳಲ್ಲಿ ಮಳೆ ನೀರಲ್ಲಿ ಸೇತುವೆ ಕೊಚ್ಚಿಕೊಂಡು ಹೋಗಿತ್ತು. ಸೇತುವೆ ಕೊಚ್ಚಿ ಹೋಗಿದ್ದರಿಂದ ನೀರಾವರಿ ಇಲಾಖೆ
ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಸೇತುವೆ ಕೊಚ್ಚಿ ಹೋದ ಸ್ಥಳದಲ್ಲಿ ಮಾತ್ರ ಮಣ್ಣು ಹಾಕಿ, ಅದಕ್ಕೆ ತೇಪೆ ಹಾಕುವ ಕೆಲಸ ಮಾಡಲಾಗಿತ್ತು. ಇನ್ನೇನು ಸೇತುವೆಗೆ ಸೌಲಭ್ಯ ಸಿಕ್ಕಿತೆಂದು ಅಂದುಕೊಳ್ಳುವಾಗಲೇ 2019ರ ಫೆಬ್ರವರಿ ತಿಂಗಳಲ್ಲಿ ಸೇತುವೆ ಕುಸಿದು ಬಿದ್ದು ಸಂಚರಿಸುತ್ತಿದ್ದ ಕಾರು ಮಲಪ್ರಭಾ ನದಿ ಪಾಲಾಗಿತ್ತು. ಅಲ್ಲಿ ಸ್ಥಳದಲ್ಲಿದ್ದ ಜನ ನೆರವಿಗೆ ಬಂದು ಕಾರಿನಲ್ಲಿದ್ದ ಇಬ್ಬರ ಪ್ರಾಣ ಉಳಿಸಿದ್ದರು. ನಿರಂತರವಾಗಿ ಒಂದಿಲ್ಲೊಂದು ಅವಾಂತರ ನಡೆದರೂ ಅ ಧಿಕಾರಿಗಳು ಎಚ್ಚರಗೊಳ್ಳದ ಕಾರಣ ಈ ಸೇತುವೆಯ ಸಮಸ್ಯೆ ಇನ್ನೂವರೆ‌ಗೆ ಬಗೆಹರಿದಿಲ್ಲ ಎಂದು ಬೇವಿನಕೊಪ್ಪ ಮತ್ತು ಸಂಗೊಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ದೂರಿದ್ದಾರೆ.

ಸಂಚಾರಕ್ಕೆ ಸೇತುವೆ ಆಸರೆ: ಮಲಪ್ರಭಾ ನದಿಯ ಎರಡು ಬದಿಗೆ ಸಂಗೊಳ್ಳಿ ಮತ್ತು ಬೇವಿನಕೊಪ್ಪ ಗ್ರಾಮಗಳಿವೆ. ಎರಡೂ ಕಡೆಗಳಲ್ಲಿ ರೈತರ ಕೃಷಿಭೂಮಿಗಳಿವೆ. ರೈತರು ಮತ್ತು ಗ್ರಾಮಸ್ಥರಿಗೆ ಸಂಚಾರಕ್ಕೆ ಆಸರೆಯಾಗಿರುವುದು ಇದೊಂದೇ ಸೇತುವೆ. ಸಂಗೊಳ್ಳಿ ಗ್ರಾಮಸ್ಥರು ಈ ಸೇತುವೆ ಮುಖಾಂತರವಾಗಿ ಸಂಚರಿಸಿದರೆ,
ಎಂಟೇ ಕಿ.ಮೀ. ದೂರದಲ್ಲಿ ತಾಲೂಕು ಕೇಂದ್ರ ಬೈಲಹೊಂಗಲಕ್ಕೆ ತಲುಪಬಹುದು. ಆದರೆ ಈಗ ಸೇತುವೆ ಮೇಲೆ ಸಂಚಾರ ಸ್ಥಗಿತಗೊಂಡಿರುವ ಕಾರಣ ಬೈಲಹೊಂಗಲಕ್ಕೆ ಹೋಗಲು ಗರ್ಜೂರ ಮತ್ತು ಕೆಂಗಾನೂರ ಮುಖಾಂತರವಾಗಿ ಸುತ್ತು ಬಳಸಿ 18
ಕಿ.ಮೀ. ದೂರ ಪ್ರಯಾಣಿಸಬೇಕಾಗಿದೆ ಎಂದು ಸಂಗೊಳ್ಳಿ ಗ್ರಾಮದ ನಾಗರಿಕ ಉಮೇಶ ಲಾಳ್‌ ಅಳಲು ತೊಂಡಿಕೊಂಡಿದ್ದಾರೆ.

ಸಂಗೊಳ್ಳಿ-ಬೇವಿನಕೊಪ್ಪ ಗ್ರಾಮಗಳ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕೆಲ ತಾಂತ್ರಿಕ ಸಮಸ್ಯೆಗಳಿಂದ ವಿಳಂಬವಾಗಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಎರಡು ಗ್ರಾಮಗಳ ಸಂಚಾರಕ್ಕೆ ಅನುಕೂಲ ಮಾಡಲಾಗುವುದು.‌ ಕಳೆದ ವರ್ಷ ಮಳೆಗಾಲದಲ್ಲೇ ಸೇತುವೆ ಮುಂಭಾಗದ ಮಣ್ಣು ಸಂಪೂರ್ಣ ಕೊಚ್ಚಿ ಹೋಗಿದ್ದು, ಈವರೆಗೂ
ಅಧಿಕಾರಿಗಳು ದುರಸ್ತಿಗೊಳಿಸಿಲ್ಲ. ನಿತ್ಯ ಬೈಕ್‌ ಸವಾರರು ಭಯದಲ್ಲೇ ಈ ಸೇತುವೆ ಮೇಲೆ ಸಂಚರಿಸುವಂತಾಗಿದೆ. ಶೀಘ್ರವೇ
ಸೇತುವೇ ದುರಸ್ತಿಗೊಳಸದಿದ್ದರೆ ಹೋರಾಟ ಮಾಡಲಾಗುವುದು.
ಬಸವರಾಜ ಕೊಡ್ಲಿ,
ಸಂಗೊಳ್ಳಿ ಗ್ರಾಪಂ ಉಪಾಧ್ಯಕ್ಷ

ಸಿ.ವೈ. ಮೆಣಶಿನಕಾಯಿ

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.