ಕರಾವಳಿಯಲ್ಲಿ ಯೇಸು ಕ್ರಿಸ್ತರ ಕೊನೆಯ ಭೋಜನದ ಸ್ಮರಣೆ
Team Udayavani, Apr 19, 2019, 10:45 AM IST
ಮಂಗಳೂರು/ ಉಡುಪಿ: ಕ್ರೈಸ್ತರು ಪವಿತ್ರ ಗುರುವಾರವನ್ನು ಆಚರಿಸಿ ಯೇಸು ಕ್ರಿಸ್ತರ ಕೊನೆಯ ಭೋಜನದ ದಿನವನ್ನು ಸ್ಮರಿಸಿದರು. ಆ ಪ್ರಯುಕ್ತ ಚರ್ಚ್ಗಳಲ್ಲಿ ಮತ್ತು ಇತರ ಕ್ರೈಸ್ತ ಪ್ರಾರ್ಥನ ಮಂದಿರಗಳಲ್ಲಿ ಗುರುವಾರ ಸಂಜೆ ಬಲಿಪೂಜೆ ಮತ್ತು ವಿಶೇಷ ಪ್ರಾರ್ಥನೆಗಳು ಜರಗಿದವು.
ಮಂಗಳೂರಿನ ರೊಜಾರಿಯೋ ಕೆಥೆಡ್ರಲ್ನಲ್ಲಿ ಬಿಷಪ್ ರೆ| ಡಾ| ಪೀಟರ್ ಪಾವ್ ಸಲ್ಡಾನ್ಹಾ ಬಲಿ ಪೂಜೆ ಮತ್ತು ಪರಮ ಪ್ರಸಾದದ ಮೆರವಣಿಗೆ ನೇತೃತ್ವ ವಹಿಸಿದ್ದರು. ಕೆಥೆಡ್ರಲ್ನ ರೆಕ್ಟರ್ ವಂ| ಜೆ.ಬಿ. ಕ್ರಾಸ್ತಾ ಪರಮ ಪ್ರಸಾದದ ಆರಾಧನೆ ನಡೆಸಿಕೊಟ್ಟರು. ರೊಸಾರಿಯೊ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ| ವಿಕ್ಟರ್ ಡಿ’ಸೋಜಾ ಪ್ರವಚನ ನೀಡಿದರು. ಪದವಿ ಕಾಲೇಜಿನ ಪ್ರಾಂಶುಪಾಲ ವಂ| ರೊಕಿ ಫೆರ್ನಾಂಡಿಸ್, ಕೆಥೆಡ್ರಲ್ನ ಸಹಾಯಕ ಗುರು ವಂ| ಫ್ಲೆವಿಯನ್ ಲೋಬೊ, ಮೈನರ್ ಸೆಮಿನರಿಯ ರೆಕ್ಟರ್ ವಂ| ಅನಿಲ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಯೇಸು ಕ್ರಿಸ್ತರು ತಮ್ಮ ಕೊನೆಯ ಭೋಜನದ ಸಂದರ್ಭದಲ್ಲಿ 12 ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರವನ್ನು ಪ್ರತಿಪಾದಿಸಿದ್ದು, ಅದರ ಸಂಕೇತವಾಗಿ ಕೆಥೆಡ್ರಲ್ನಲ್ಲಿ ಬಿಷಪರು ಮತ್ತು ಇತರ ಚರ್ಚ್ಗಳಲ್ಲಿ ಸಳೀಯ ಧರ್ಮಗುರುಗಳು 12 ಕ್ರೈಸ್ತರ ಪಾದಗಳನ್ನು ತೊಳೆದರು. ಇದರಲ್ಲಿ ಆರು ಮಹಿಳೆಯರು ಇದ್ದರು. ಯುವ ಜನರಿಗೆ, ವಯಸ್ಕರಿಗೆ, ರೋಗಿಗಳಿಗೆ ಮತ್ತು ಧಾರ್ಮಿಕ ವ್ಯಕ್ತಿಗಳಿಗೂ ಪ್ರಾತಿನಿಧ್ಯ ನೀಡಲಾಗಿತ್ತು. ಬಿಷಪ್ ಪೀಟರ್ ಪಾವ್ ಸಲ್ಡಾನ್ಹಾ ಸಂದೇಶ ನೀಡಿ, ಪವಿತ್ರ ಗುರುವಾರ ಎದಂದು ಮೂರು ವಿಷಯಗಳಿಗೆ ಪ್ರಾಮುಖ್ಯ ಇದೆ. ಯೇಸು ಕ್ರಿಸ್ತರು ಪರಮ ಪ್ರಸಾದದ ಸಂಸ್ಕಾರವನ್ನು ಈ ದಿನದಂದು ಆರಂಭಿಸಿದರು ಮತ್ತು ಅದನ್ನು ಪುನರಪಿ ನಡೆಸುವಂತೆ ಸೂಚಿಸಿದರು. ಅದರ ಪ್ರಕಾರ ಪ್ರತಿ ಪವಿತ್ರ ಬಲಿ ಪೂಜೆಯಲ್ಲಿ ಇದನ್ನು ನಡೆಸಲಾಗುತ್ತದೆ. ಗುರು ದೀಕ್ಷೆಯ ಸಂಸ್ಕಾರವನ್ನು ಯೇಸು ಕ್ರಿಸ್ತರು ಇದೇ ದಿನದಂದು ನೆರವೇರಿಸಿದ್ದರು. ತನ್ನ 12 ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರಕ್ಕೆ ನಾಂದಿ ಹಾಡಿದರು. “ನಾನು ನಿಮ್ಮನ್ನು ಪ್ರೀತಿಸಿದಂತೆ ನೀವು ಪರಸ್ಪರ ಪ್ರೀತಿಸಬೇಕು’ ಎಂಬ ಉಪದೇಶವನ್ನು ನೀಡಿದ್ದರು. ಕ್ರೈಸ್ತ ಧರ್ಮ ಸಭೆಯ ಉಗಮ ಈ ದಿನ ಆಯಿತು ಎಂದರು.
ಅವಳಿ ಆಚರಣೆ
ಕ್ರೈಸ್ತರು ಯೇಸು ಕ್ರಿಸ್ತರ ಕೊನೆಯ ಭೋಜನದ ಸ್ಮರಣಾರ್ಥ ಪವಿತ್ರ ಗುರುವಾರ ಆಚರಿಸುವ ಜತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಹಬ್ಬ ಎಂದೇ ಬಣ್ಣಿಸಲಾಗಿರುವ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು