ಬಂಡವಾಳಶಾಹಿ ಕಾಂಗ್ರೆಸ್‌-ಬಿಜೆಪಿಗೆ ತಕ್ಕ ಪಾಠ ಕಲಿಸಿ

ಜಿಎಸ್‌ಟಿಯಿಂದಾಗಿ ಸಹಸ್ರಾರು ಸಣ್ಣ ಉದ್ಯಮಗಳು ದಿವಾಳಿ

Team Udayavani, Apr 19, 2019, 1:44 PM IST

19-April-18

ಯಾದಗಿರಿ: ಗಾಂಧಿ ವೃತ್ತದಲ್ಲಿ ನಡೆದ ಎಎಸ್‌ಯುಸಿಐ ಪಕ್ಷದ ರಾಯಚೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಕೆ.ಸೋಮಶೇಖರ ಮಾತನಾಡಿದರು.

ಯಾದಗಿರಿ: ದೇಶದಲ್ಲಿ ಬಂಡವಾಳಶಾಹಿಗಳ ಪರವಾಗಿರುವ ಕಾಂಗ್ರೆಸ್‌ ಮತ್ತು ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಎಸ್‌ಯುಐಸಿ ಪಕ್ಷದ ರಾಜ್ಯ ಸಮಿತಿ ಸದಸ್ಯ ಎಚ್‌.ವಿ. ದಿವಾಕರ್‌ ಹೇಳಿದರು.

ನಗರದ ಗಾಂಧಿ ಧಿವೃತ್ತದಲ್ಲಿ ರಾಯಚೂರು ಲೋಕಸಭೆ ಕ್ಷೇತ್ರದ ಸೋಷಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ ಕಮ್ಯುನಿಸ್ಟ್‌ ಅಭ್ಯರ್ಥಿ ಕೆ. ಸೋಮಶೇಖರ ಪರ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ನೇತೃತ್ವದ ಯುಪಿಎ-2ರ ದುರಾಡಳಿತ, 2ಜಿ ತರಂಗ, ಕಾಮನ್‌ವೆಲ್ತ್ ಗೇಮ್‌ ಹಗರಣ ಹೀಗೆ ಹಲವಾರು ಹಗರಣಗಳಿಂದ ಬೇಸತ್ತ ಜನರು ಆಕ್ರೋಶ ಮತ್ತು ಅಬ್ಬರದ ಪ್ರಚಾರದಿಂದ ಅಚ್ಛೇ
ದಿನ ತರುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ನಂತರ, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಪೊರೇಟ್‌ ಬಂಡವಾಳಶಾಹಿಗಳ ಏಜೆಂಟ್‌ನಂತೆ ವರ್ತಿಸಿದೆ ಎಂದು ದೂರಿದರು.

ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಿರಲಿ, ನೋಟು
ಬ್ಯಾನ್‌ನಿಂದಾಗಿ 4 ಕೋಟಿಗೂ ಅಧಿಕ ಉದ್ಯೋಗ ನಷ್ಟವಾಗಿರುವುದನ್ನು ಮುಚ್ಚಿಡಲಾಗಿದೆ. ಜಿಎಸ್‌ ಟಿಯಿಂದಾಗಿ ಸಹಸ್ರಾರು ಸಣ್ಣ ಉದ್ಯಮಗಳು ದಿವಾಳಿಯಾಗಿವೆ. ನ್ಯಾಷನಲ್‌ ಸ್ಯಾಂಪಲ್‌ ಸರ್ವೆ ಆಫೀಸ್‌ ವರದಿ ಪ್ರಕಾರ 2017-18ರಲ್ಲಿ ನಿರುದ್ಯೋಗ ಪ್ರಮಾಣ ಶೇ. 6.1ರಷ್ಟು ಹೆಚ್ಚಳವಾಗಿವೆ. ಇದು ಕಳೆದ
45 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗ ಪ್ರಮಾಣ ದಾಖಲಾಗಿದೆ ಎಂದು ಹೇಳಿದರು. ಹೋರಾಟದ ಹಿನ್ನೆಲೆ ಇರುವ ದುಡಿಯುವ, ಕಾರ್ಮಿಕ ವರ್ಗದ ನೈಜ ಪ್ರತಿನಿಧಿ ಎಸ್‌ಯುಸಿಐ ಕಮ್ಯನಿಸ್ಟ್‌ದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಅಭ್ಯರ್ಥಿ ಕೆ. ಸೋಮಶೇಖರ ಮಾತನಾಡಿ, ನಮ್ಮ ಪಕ್ಚದ ಹಲವು ಹೋರಾಟಗಳಿಗೆ ದೇಶದ ಸ್ವಾತಂತ್ರ್ಯ  ಹೋರಟಗಾರರು, ಮಹಾನ್‌ ಕ್ರಾಂತಿಕಾರಿಗಳ ಆದರ್ಶವೇ ಸ್ಫೂರ್ತಿ. ಹಾಗಾಗಿ ಪಕ್ಷಕ್ಕೆ ಚುನಾವಣೆ
ಒಂದು ಹೋರಾಟದ ಭಾಗ. ತನ್ನನ್ನು ಗೆಲ್ಲಿಸಿದ್ದಲ್ಲಿ ಈ ಭಾಗದ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಗಟ್ಟಿಯಾಗಿ ಎತ್ತಿ ಬದಲಾವಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು. ಪಕ್ಷದ ಜಿಲ್ಲಾ ಸಮಿತಿ ಸದಸ್ಯೆ ಡಿ.ಉಮಾದೇವಿ, ಶರಣಗೌಡ ಗೂಗಲ್‌, ಶರಣಪ್ಪ ಉದಾºಲ, ಸದಸ್ಯ ರಾಮಲಿಂಗಪ್ಪ ಬಿ.ಎನ್‌., ಸೈದಪ್ಪ ಎಚ್‌.ಪಿ., ಜಮಾಲ್‌ಸಾಬ್‌, ಎಚ್‌.ಜಿ. ದೇಸಾಯಿ, ಸಿದ್ದಲಿಂಗ ಬಾಗೇವಾಡಿ, ಎಚ್‌.ಜಿ. ದೇಸಾಯಿ, ಸುಭಾಷ್‌ಚಂದ್ರ, ಭರತಕುಮಾರ, ಸುನೀಲ, ಶಿವಬಾಳಮ್ಮ, ಮಹಾದೇವಿ ಶೋಭಾ ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.