ಕಾಂಗ್ರೆಸ್ನದ್ದು ಸ್ಮಶಾನ ಸಂಸ್ಕೃತಿ ಬಿಜೆಪಿಯದ್ದು ದೈವ ಸಂಸ್ಕೃತಿ
Team Udayavani, Apr 19, 2019, 4:35 PM IST
ಗಂಗಾವತಿ: ಕಾಂಗ್ರೆಸ್ ಪಕ್ಷದ್ದು ಸ್ಮಶಾನ ಸಂಸ್ಕೃತಿ ಬಿಜೆಪಿಯದ್ದು, ದೈವ ಸಂಸ್ಕೃತಿಯಾಗಿದೆ ಎಂದು ಆನೆಗೊಂದಿ ರಾಜವಂಶದ ರಾಣಿ ಚಂದ್ರಕಾಂತ ದೇವಿ ಹೇಳಿದರು.
ಅವರು ತಾಲೂಕಿನ ಆನೆಗೊಂದಿಯಲ್ಲಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಪರವಾಗಿ ಬಹಿರಂಗ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಕಳೆದ 70 ವರ್ಷಗಳಿಂದ ಆಗಸ್ಟ್ 15, ಜನವರಿ 26ರಂದು ಕಾಂಗ್ರೆಸ್ನವರು ಇಂದಿರಾಗಾಂಧಿ, ಜವಾಹರಲಾಲ್ ನೆಹರೂ, ರಾಜೀವ್ ಗಾಂಧಿ ಸಮಾದಿ ಗಳಿಗೆ ಹೋಗುತ್ತಾರೆ. ದೇವಾಲಯ, ಧಾರ್ಮಿಕ ಕೇಂದ್ರಗಳಿಗೆ ಹೋಗುವುದಿಲ್ಲ.
ಪ್ರಧಾನಮಂತ್ರಿ ದೇವರವನ್ನು ನಂಬಿದ್ದು ಅಧಿ ಕಾರಕ್ಕೆ ಬಂದ ತಕ್ಷಣ ಕಾಶಿ ವಿಶ್ವನಾಥ, ಗಂಗಾ ಆರತಿಯಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೈವ ಭಕ್ತಿ ಪ್ರಾಪ್ತಿ ಮಾಡಿಕೊಂಡಿದ್ದಾರೆ. 70 ವರ್ಷಗಳಲ್ಲಿ ಕಾಂಗ್ರೆಸ್ ಬಡತನ ನಿರ್ಮೂಲನೆ ಮಾಡುವ ಯೋಜನೆ ಅನುಷ್ಠಾನ ಮಾಡಿದರೂ
ಇನ್ನೂ ಯಾಕೆ ಬಡತನ ನಿರ್ಮೂಲನೆಯಾಗಿಲ್ಲ. ವ್ಯಾಪಕ ಭ್ರಷ್ಟಾಚಾರ ನಡೆಸುವ ಮೂಲಕ ಕಾಂಗ್ರೆಸ್ ನಾಯಕರು ಶ್ರೀಮಂತರಾಗಿದ್ದಾರೆ.
ಈಗಾಗಲೇ ಪ್ರಧಾನಿ ಮೋದಿ ಅವರು ವಿಶ್ವದ ಮಾನ್ಯತೆ ಪಡೆದಿದ್ದಾರೆ. ವಿದೇಶಾಂಗ ವ್ಯವಹಾರ ಉತ್ತಮವಾಗಿದ್ದರಿಂದ ರಷ್ಯಾದಂತಹ ದೇಶಗಳು ಬಹುಮಾನ ನೀಡುತ್ತಿವೆ. ಕಾದಂಬರಿಕಾರ ಎಲ್.ಎಲ್. ಭೈರಪ್ಪ ಹೇಳುವಂತೆ ಸತತವಾಗಿ ಮೋದಿಯವರು ಪ್ರಧಾನಿಯಾಗುತ್ತಿದ್ದರೆ ಭಾರತಕ್ಕೆ ವಿಶ್ವಗುರು ಸ್ಥಾನ ಖಂಡಿತ ಬರುತ್ತದೆ ಎಂದರು.
ಸಂಸದ ಕರಡಿ ಸಂಗಣ್ಣ ಮಾತನಾಡಿ, ಐದು ವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶ್ವವೇ ಮೆಚ್ಚು ಕಾರ್ಯ ಮಾಡಿದ್ದಾರೆ. ಜನಧನ್ ಖಾತೆ, ಸ್ವತ್ಛ ಭಾರತ, ಉಜ್ವಲಾ ಯೋಜನೆ ಸಣ್ಣ ಸಣ್ಣ ಯೋಜನೆಗಳಾದರೂ ಜನರಿಗೆ ಅತ್ಯಂತ ಉಪಯುಕ್ತವಾಗುವ ಯೋಜನೆಗಳಾಗಿವೆ. ಕಾಂಗ್ರೆಸ್ನವರು ಇವುಗಳನ್ನು ಗೇಲಿ ಮಾಡುವ ಮೂಲಕ ಜನರನ್ನು ಅವಮಾನಿಸುತ್ತಿದ್ದಾರೆ.
ರೈತರು ಬೆಳೆದ ಬೆಳೆ ನಷ್ಟವಾದ ಸಂದರ್ಭದಲ್ಲಿ ವಿಮೆ ದೊರಕಿಸಲು ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ ಅನುಷ್ಠಾನ ಮಾಡಿದರೂ ರಾಜ್ಯ ಸರಕಾರದ ಅಸಹಕಾರದಿಂದ ಬೆಳೆವಿಮೆ ರೈತರಿಗೆ ತಲುಪಿಲ್ಲ. ಮತ್ತೂಮ್ಮೆ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ತುಂಗಭದ್ರಾ ಡ್ಯಾಮ್ಗೆ ಕೃಷ್ಣಾ ನದಿ ನೀರನ್ನು ತರಲಾಗುತ್ತದೆ. ಜತೆಗೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳು ಪೂರ್ಣಗೊಳ್ಳಲಿವೆ ಎಂದರು.
ಶಾಸಕ ಪರಣ್ಣ ಮುನವಳ್ಳಿ, ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ, ತಿಪ್ಪೇರುದ್ರಸ್ವಾಮಿ, ಸಿಂಗನಾಳ ವಿರೂಪಾಕ್ಷಪ್ಪ, ಕೃಷ್ಣಾದೇವರಾಯ, ಹರಿಹರದೇವರಾಯ, ಎಚ್.ಸಿ. ಯಾದವ್, ಗೌರೀಶ ಬಾಗೋಡಿ, ಸಿದ್ದರಾಮಯ್ಯ, ಜೋಗದ ಹನುಮಂತಪ್ಪ ನಾಯಕ, ವೀರಭದ್ರಪ್ಪ ನಾಯಕ, ದೇವಪ್ಪ ಕಾಮದೊಡ್ಡಿ, ರಾಜೇಶ್ವರಿ ಸುಚಿತ್ರಾ, ಸಿರಿಗೇರಿ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ