ಸೇಕ್ರೇಡ್ ಹಾರ್ಟ್ ಚರ್ಚ್: ಶುಭ ಶುಕ್ರವಾರ ಆಚರಣೆ
Team Udayavani, Apr 20, 2019, 6:10 AM IST
ಉಡುಪಿ : ಯೇಸುಕ್ರಿಸ್ತರು ಶಿಲುಬೆಗೆ ಏರಿ ಮರಣ ಹೊಂದಿದ ದಿನವಾದ ಶುಭ ಶುಕ್ರವಾರ ಅಥವಾ ಗುಡ್ಫ್ರೈಡೆಯನ್ನು ಕೊಳಲಗಿರಿಯ ಸೇಕ್ರೇಡ್ ಹಾರ್ಟ್ ಚರ್ಚಿನಲ್ಲಿ ಪ್ರಾರ್ಥನಾ ವಿಧಿಯ ಮೂಲಕ ವಿಶಿಷ್ಠ ರೀತಿಯಲ್ಲಿ ಆಚರಿಸಲಾಯಿತು.
ಚರ್ಚಿನ ಧರ್ಮಗುರು ಅನಿಲ್ ಪ್ರಕಾಶ್ ಡಿ ಸಿಲ್ವಾ , ಸಹಾಯಕ ಧರ್ಮಗುರು ಜೆರಾಲ್ಡ… ಸಂದೀಪ್ ನೇತೃತ್ವದಲ್ಲಿ ಐಸಿವೈಎಂ ಸಂಘಟನೆಯ ಸಹಭಾಗಿತ್ವದೊಂದಿಗೆ ಯುವಕರು ಮತ್ತು ಇತರರು ಸೇರಿ ಒಟ್ಟು 50 ಮಂದಿ ಕಲಾವಿದರು ಯೇಸು ಕ್ರಿಸ್ತರು ಮರಣದಂಡನೆಗೆ ಗುರಿಯಾಗುವಲ್ಲಿಂದ ಆರಂಭಿಸಿ ಶಿಲುಬೆ ಹೊತ್ತು ಕಲ್ವಾರಿ ಬೆಟ್ಟಕ್ಕೆಸಾಗಿ ಅಲ್ಲಿ ಶಿಲುಬೆಗೆ ಏರಿ ಮರಣವನ್ನಪ್ಪುವ ಘಟನೆಗಳನ್ನು 14 ಭಾಗಗಳಾಗಿ ವಿಂಗಡಿಸಿ ಪ್ರತಿಯೊಂದು ಭಾಗವನ್ನು ಅವಲೋಕಿಸಿ ಪ್ರಾರ್ಥಿಸುತ್ತಾ ಸಾಗುವ ಶಿಲುಬೆಯ ಹಾದಿಯ ಪ್ರಕ್ರಿಯೆಯನ್ನು ನಟನೆಯ ಮೂಲಕ ಚರ್ಚಿನ ಮೈದಾನದಲ್ಲಿ ನಡೆಸಿಕೊಟ್ಟರು.
ಈ ಮೂಲಕ ಕ್ರೈಸ್ತ ಭಕ್ತಾದಿಗಳಿಗೆ ಯೇಸು ಶಿಲುಬೆಯ ಹಾದಿಯಲ್ಲಿ ಅನುಭವಿಸಿದ ಕಷ್ಟ , ನೋವು, ಯಾತನೆ, ಮರಣವನ್ನು ತೋರಿಸಿಕೊಡುವ ವಿಶಿಷ್ಟ ಪ್ರಯತ್ನ ಮಾಡಲಾಯಿತು. ಜಿÇÉೆಯ ಎÇÉಾ ಚರ್ಚುಗಳಲ್ಲಿ ಬಲಿಪೂಜೆಯ ಬದಲು ಯೇಸುವಿನ ಶಿಲುಬೆಯ ಹಾದಿಯನ್ನು ಸಂಪೂರ್ಣವಾಗಿ ಪರಿಚಯಿಸುವ ಹೊಸ ಒಡಂಬಡಿಕೆಯ ಪವಿತ್ರ ಬೈಬಲಿನ ಪಠಣಗಳು ಕೂಡ ನಡೆಸಲಾಯಿತು.
ಸುಮಾರು 350 ಕ್ಕೂ ಅಧಿಕ ಭಕ್ತಾದಿಗಳು ಉರಿ ಬಿಸಿಲಿನ ದಣಿವಿನ ಅರಿವಿಲ್ಲದೆ ಭಕ್ತಿ ಕಾರ್ಯಕ್ರಮದಲ್ಲಿ
ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ