ಸುಳ್ಯ: ಈ ಬಾರಿ ಶೇ. 84.21ರಷ್ಟು ಮತದಾನ

ಕಳೆದ ಲೋಕಸಭೆ ಚುನಾವಣೆಗಿಂತ ಕಡಿಮೆ, ವಿಧಾನಸಭೆ ಚುನಾವಣೆಗಿಂತ ಹೆಚ್ಚು

Team Udayavani, Apr 20, 2019, 6:00 AM IST

c-14

ಸಾಂದರ್ಭಿಕ ಚಿತ್ರ

ಸುಳ್ಯ: 2014ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ 2019ರ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಶೇ. 0.21ರಷ್ಟು ಕಡಿಮೆ ಮತಗಳು ಚಲಾವಣೆಗೊಂಡಿವೆ. ಆದರೆ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಮತದಾನಕ್ಕಿಂತ ಶೇ. 0.18ರಷ್ಟು ಏರಿಕೆ ಕಂಡಿದೆ..!

ಜಿಲ್ಲಾ ಮಟ್ಟದಲ್ಲಿ ವಿಧಾನಸಭಾ ಕ್ಷೇತ್ರ ಗಳಲ್ಲಿ ದಾಖಲಾದ ಶೇಕಡಾವಾರು ಮತ ಪ್ರಮಾಣ ಗಮನಿಸಿದರೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಶೇ. 84.21ರಷ್ಟು ಮತ ಚಲಾವಣೆಗೊಂಡು ಜಿಲ್ಲೆಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಕಳೆದ ಹಲವು ವರ್ಷಗಳಿಂದ ಹಕ್ಕು ಚಲಾವಣೆಯಲ್ಲಿ ಮೊದಲ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಸುಳ್ಯ ಈ ಬಾರಿಯೂ ಅದನ್ನು ಉಳಿಸಿಕೊಂಡಿದೆ.

ಶೇ. 0.21ರಷ್ಟು ಇಳಿಕೆ
2014ರ ಲೋಕಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಶೇ. 84.42 ಮತದಾನ ದಾಖಲಾಗಿತ್ತು. 1,86,015 ಮತದಾರರ ಪೈಕಿ 1,57,025 ಮತದಾರರು ಹಕ್ಕು ಚಲಾಯಿಸಿದ್ದರು.
2018ರಲ್ಲಿ ವಿಧಾನಸಭಾ ಚುನಾವ ಣೆಗೆ ಹೋಲಿಸಿದರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಏರಿಕೆ ಕಂಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಶೇ. 84.03 ಮತದಾನವಾಗಿದ್ದು, 11 ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ. 84.21ರಷ್ಟು ಮತ ಚಲಾವಣೆಗೊಂಡಿದೆ. ಒಂದೇ ವರ್ಷದೊಳಗೆ ಶೇ. 0.18ರಷ್ಟು ಚಲಾಯಿತ ಮತ ಏರಿಕೆ ಕಂಡಿದೆ.

ಬಳ್ಳಕ್ಕದಲ್ಲಿ ಗರಿಷ್ಠ
ಗುತ್ತಿಗಾರು ಬಳ್ಳಕ್ಕ ಹರಿಪುರ ಸ.ಹಿ.ಪ್ರಾ. ಶಾಲಾ ಮತಗಟ್ಟೆಯಲ್ಲಿ ಶೇ. 95.88 ಮತದಾನವಾಗಿದೆ. ಕಡಬ ಸ.ಹಿ.ಪ್ರಾ. ಶಾಲಾ ಉತ್ತರ ಭಾಗದ ಮತಗಟ್ಟೆಯಲ್ಲಿ ಶೇ. 72.81 ಕನಿಷ್ಠ ಮತದಾನ ದಾಖಲಾಗಿದೆ. 231 ಮತಗಟ್ಟೆಗಳ ಪೈಕಿ ಶೇ. 85ಕ್ಕಿಂತ ಅಧಿಕ ಮತಗಟ್ಟೆಗಳಲ್ಲಿ ಶೇ. 80ಕ್ಕಿಂತ ಅಧಿಕ ಮತದಾನವಾಗಿದೆ.

ಶಾಂತಿಯುತ ಮತದಾನ
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತ್ತು ಗರಿಷ್ಠ ಮತದಾನ ಆಗಿದೆ. ಶೇ. 84.21 ಮತಗಳು ಚಲಾವಣೆಗೊಂಡಿವೆ. ಮತಗಟ್ಟೆ ಸಂಖ್ಯೆ 122 ಹರಿಪುರದಲ್ಲಿ ಗರಿಷ್ಠ ಹಾಗೂ ಮತಗಟ್ಟೆ ಸಂಖ್ಯೆ 90 ಕಡಬ ಉತ್ತರದಲ್ಲಿ ಕನಿಷ್ಠ ಮತದಾನವಾಗಿದೆ.
ಡಾ| ಮಂಜುನಾಥ್‌ ಚುನಾವಣಾಧಿಕಾರಿ

ಮತದಾನ ಪ್ರಮಾಣ
2019ರ ಲೋಕಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ. 84.21ರಷ್ಟು ಮತದಾನವಾಗಿದೆ. 2,00,579 ಮತದಾರರ ಪೈಕಿ 1,78,912 ಮಂದಿ ಮತ ಚಲಾಯಿಸಿದ್ದಾರೆ. 1,00,948 ಮಹಿಳಾ ಮತದಾರರ ಪೈಕಿ 94,557 ಮಂದಿ ಹಾಗೂ 99,631 ಪುರುಷ ಮತದಾರರ ಪೈಕಿ 84,355 ಮಂದಿ ತನ್ನ ಹಕ್ಕು ಚಲಾಯಿಸಿದ್ದಾರೆ. ಮಹಿಳಾ ಮತದಾರರ ಪೈಕಿ 6,391 ಮಂದಿ ಹಾಗೂ ಪುರುಷ ಮತದಾರರ ಪೈಕಿ 15,276 ಮಂದಿ ಹಕ್ಕು ಚಲಾಯಿಸಿಲ್ಲ.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.