ಅವನತಿಯತ್ತ ಸಾಗುತ್ತಿದೆ ತರಬೇತಿ ಕೇಂದ್ರ


Team Udayavani, Apr 20, 2019, 12:04 PM IST

11

ಚನ್ನಪಟ್ಟಣ: ಗ್ರಾಮೀಣ ಭಾಗದ ನಿರುದ್ಯೋಗಿಗಳನ್ನು ಸ್ವಾವಲಂಬಿಗಳನ್ನಾಗಿಸಲು ಶತಮಾನದ ಹಿಂದೆ ಆರಂಭಿಸಲಾದ ಇಲ್ಲಿನ ಕುಶಲಕರ್ಮಿ ತರಬೇತಿ ಸಂಸ್ಥೆಯು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅವನತಿಯ ಹಾದಿ ಹಿಡಿದಿದೆ.

ಮೈಸೂರು ಸಂಸ್ಥಾನದ ಕೃಷ್ಣರಾಜೇಂದ್ರ ಒಡೆಯರ್‌ ಅವರಿಂದ ಆರಂಭಗೊಂಡ ಈ ಸಂಸ್ಥೆಯು ಆಟಿಕೆ ತಯಾರಿಕೆ, ಆಟೋ ಮೊಬೈಲ್, ಮರಗೆಲಸ, ಕಮ್ಮಾರಿಕೆ, ಜನರಲ್ ಇಂಜಿನಿಯರಿಂಗ್‌ ಸೇರಿದಂತೆ ಹಲವು ವಿಭಾಗಗಳಲ್ಲಿ ತರಬೇತಿ ನೀಡಿ, ಸಾವಿರಾರು ನಿರುದ್ಯೋಗಿಗಳಿಗೆ ಬದುಕು ಕಟ್ಟಿಕೊಟ್ಟಿದ್ದು ಈಗ ಇತಿಹಾಸ.

ಅಧಿಕೃತ ಬಾಗಿಲು ಮುಚ್ಚುವುದು ಬಾಕಿ: ಸರ್ಕಾರದ ಸುಪರ್ದಿಯಲ್ಲಿದ್ದ ಸಂಸ್ಥೆಯನ್ನು 1987ರಲ್ಲಿ ಜಿಪಂ ವ್ಯಾಪ್ತಿಗೆ ಸೇರ್ಪಡೆ ಮಾಡಿದ್ದರಿಂದ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಸಿಗದೆ, ಇದೀಗ ಸಂಸ್ಥೆ ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಅಧಿಕೃತವಾಗಿ ಬಾಗಿಲು ಮುಚ್ಚುವುದೊಂದೇ ಬಾಕಿ ಉಳಿದುಕೊಂಡಿದೆ. ತರಬೇತಿ ಸಮಯದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ನೀಡಲಾಗುತ್ತಿದ್ದ ಶಿಷ್ಯವೇತನಕ್ಕೆ ಜಿಪಂ ಅನುದಾನ ನೀಡದಿರುವುದು, ಹಳೆಯ ಕಾಲದ ಶಿಷ್ಯವೇತನ ನಿಗದಿಗೊಳಿಸಿದ್ದು ಹಾಗೂ ಆಧುನೀಕತೆಗೆ ತಕ್ಕಂತೆ ಹೊಸ ತರಬೇತಿಗಳನ್ನು ನೀಡದಿರುವುದು ಪ್ರಶಿಕ್ಷಣಾರ್ಥಿಗಳು ಸಂಸ್ಥೆಯತ್ತ ಸುಳಿಯದಿರಲು ಪ್ರಮುಖ ಕಾರಣವಾಗಿದೆ. ತರಬೇತಿಯ ನಂತರ ಸ್ವ- ಉದ್ಯೋಗ ಕಲ್ಪಿಸಿಕೊಳ್ಳಲು ಬ್ಯಾಂಕ್‌ಗಳು ಹಾಗೂ ಸರ್ಕಾರಿ ಸಂಸ್ಥೆಗಳು ಹಣಕಾಸು ನೀಡಲು ಹಿಂದೇಟು ಹಾಕಿದ್ದು ಅವನತಿಗೆ ನಾಂದಿಹಾಡಿದೆ.

ಖಾಸಗಿ ತರಬೇತಿ ಸಂಸ್ಥೆಗಳು ತರಬೇತಿಯ ನಂತರ ತಮ್ಮ ಸಂಸ್ಥೆಯಲ್ಲಿಯೇ ಕೆಲಸ ನೀಡುತ್ತಿರುವುದು ಹಾಗೂ ಬಹುರಾಷ್ಟ್ರೀಯ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡು, ಅಲ್ಲಿ ಉದ್ಯೋಗ ಕಲ್ಪಿಸುತ್ತಿರುವುದು ನಿರುದ್ಯೋಗಿಗಳನ್ನು ಸೆಳೆಯುತ್ತಿರುವ ಪರಿಣಾಮ ಸರ್ಕಾರಿ ಸ್ವಾಮ್ಯದ ಕುಶಲಕರ್ಮಿ ತರಬೇತಿ ಸಂಸ್ಥೆಗಳು ಮುಚ್ಚುವ ಹಂತ ತಲುಪಿವೆ.

ಕೇಂದ್ರದ ಯೋಜನೆಗಳೂ ಸ್ಥಗಿತ: ಕೇಂದ್ರ ಸರ್ಕಾರ ಪ್ರಾಯೋಜಿತ ಪ್ರಧಾನಮಂತ್ರಿ ರೋಜ್‌ಗಾರ್‌ ಯೋಜನೆಯಡಿ ವಾರ್ಷಿಕ 1000 ಮಂದಿಗೆ ತರಬೇತಿ ನೀಡಿ ಸಹಾಯಧನ ನೀಡಲು ಈ ಹಿಂದೆ ಅವಕಾಶ ಇತ್ತು. ಆದರೂ ಯೋಜನೆಯನ್ನು ಪಿಎಂಎಜಿ ಎಂದು ಬದಲಾವಣೆ ಮಾಡಿ, ಒಂದು ವಿಭಾಗಕ್ಕೆ ಕೇವಲ 4-5 ಮಂದಿಗೆ ಮಾತ್ರ ಸಹಾಯಧನ ನಿಗದಿಗೊಳಿಸಿದ್ದರಿಂದ ಸಂಸ್ಥೆಗೆ ಮತ್ತಷ್ಟು ಹಿನ್ನಡೆಯಾಯಿತು.

ಸರ್ಕಾರಿ ಇಲಾಖೆ ನಿರ್ಲಕ್ಷ್ಯ: ಎರಡು ಸಚಿವಾಲಯ ಹೊಂದಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ತನ್ನದೇ ಕೂಸಾದ ತರಬೇತಿ ಸಂಸ್ಥೆಯ ಬೆಳವಣಿಗೆಗೆ ನಿರ್ಲಕ್ಷ್ಯ ತೋರಿದ್ದು, ತರಬೇತಿ ಸಂಸ್ಥೆಗೆ ಪ್ರತ್ಯೇಕ ಅನುದಾನ ಮೀಸಲು ಇಟ್ಟಿಲ್ಲ. ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರ್ಪಡೆ ಮಾಡಿ ಕೈ ತೊಳೆದುಕೊಂಡಿದೆ. ಹೊಸ ಕೌಶಲ್ಯಗಳ ಬಗ್ಗೆ ತರಬೇತಿ ನೀಡುವುದು, ಸ್ವ- ಉದ್ಯೋಗ ಕಲ್ಪಿಸಿಕೊಳ್ಳಲು ಸಹಾಯಧನ ನೀಡುವುದು ಹಾಗೂ ಶಿಷ್ಯವೇತನವನ್ನು ಪರಿಷ್ಕರಿಸುವ ಗೋಜಿಗೆ ಹೋಗದ ಇಲಾಖೆ, ಬಹುರಾಷ್ಟ್ರೀಯ ಕಂಪನಿಗಳು, ಕೈಗಾರಿಕೆಗಳಿಗೆ ಮಣೆ ಹಾಕುತ್ತಾ, ತರಬೇತಿ ಸಂಸ್ಥೆಯಿಂದ ತನಗೇನು ಪ್ರಯೋಜನ ಎಂಬಂತೆ ಸಂಸ್ಥೆಯನ್ನೇ ಮುಚ್ಚುವ ನಿರ್ಧಾರ ಮಾಡಿದೆ. ತರಬೇತಿ ಸಂಸ್ಥೆ ಮುಚ್ಚಿ ಜಾಗವನ್ನು ಐಟಿಐ ಕಾಲೇಜಿಗೆ ನೀಡಲು ಇಲಾಖೆ ಉತ್ಸಾಹ ತೋರುತ್ತಿದೆ. ಸಿಬ್ಬಂದಿಯನ್ನು ಸಹ ಕಾಲೇಜಿಗೆ ನಿಯೋಜನೆ ಮಾಡಿ, ತರಬೇತಿ ಪರಿಕರಗಳು, ಯಂತ್ರಗಳನ್ನು ಹರಾಜು ಹಾಕುವ ಮಹತ್ಕಾರ್ಯಕ್ಕೆ ವೇದಿಕೆ ಸಿದ್ಧಮಾಡುತ್ತಿದೆ. ಈಗಾಗಲೇ ಪಾಳು ಬಂಗಲೆಯಂತಾಗಿರುವ ಸಂಸ್ಥೆ ಮುಂದಿನ ದಿನಗಳಲ್ಲಿ ಪಳೆಯುಳಿಕೆಯಾಗುವುದು ನಿಶ್ಚಿತವಾಗಿದೆ.

ಮುಚ್ಚುವ ಮುನ್ನ ಯೋಚಿಸಿ: ಶತಮಾನದ ಕಾಲ ಸಹಸ್ರಾರು ನಿರುದ್ಯೋಗಿಗಳಿಗೆ ಬದುಕು ಕಲ್ಪಿಸಿದ್ದ ತರಬೇತಿ ಸಂಸ್ಥೆಯನ್ನು ಮುಚ್ಚುವ ಮುನ್ನ ಇಲಾಖೆ ಮತ್ತೂಮ್ಮೆ ಪರಿಶೀಲನೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಸಂಸ್ಥೆಯನ್ನೊಮ್ಮೆ ಮುಚ್ಚಿದರೆ ಅದನ್ನು ಪುನಃ ಆರಂಭಿಸಲು ಅಸಾಧ್ಯ. ಈ ಬಗ್ಗೆ ಇಲಾಖೆ ಗಮನಹರಿಸಿ ಪುನಶ್ಚೇತನಗೊಳಿಸಲು ಮುಂದಾಗಲಿ ಎಂಬುದು ಪ್ರಜ್ಞಾವಂತರ ಆಶಯವಾಗಿದೆ.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.