ಲೋಕಾ ಸಮರದ ಫ‌ಲಿತಾಂಶದತ್ತ ಮತದಾರರ ಚಿತ್ತ


Team Udayavani, Apr 20, 2019, 12:06 PM IST

12

ಮಾಗಡಿ: ಮತದಾನದ ಪ್ರಕ್ರಿಯೆ ಮುಗಿದಿದೆ. ಇನ್ನೂ ಫ‌ಲಿತಾಂಶದತ್ತ ಮತದಾರರ ಚಿತ್ತ ಎಂಬಂತಾಗಿದೆ. ತಾಲೂಕಿಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಪಕ್ಷದ ಅಭ್ಯರ್ಥಿಗಳ ಅಭಿಮಾನಿಗಳು ಸೋಲು- ಗೆಲುವಿನ ಲೆಕ್ಕಾಚಾರದ ಬೆಟ್ಟಿಂಗ್‌ಗೆ ಇಳಿದಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್‌ ಮತ್ತು ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣ ನಡುವೆ ಕಳೆದ 15 ದಿನಗಳಿಂದಲೂ ಅವರವರ ಸಾಧನೆ, ಪ್ರಣಾಳಿಕೆ ಕುರಿತು ಮತಯಾಚಿಸಿದ್ದರು. ಮತಕ್ಕಾಗಿ ಇನ್ನಿಲ್ಲದ ಕಸರತ್ತುಗಳು ನಡೆದು ಹೋದವು. ಅವರವರ ಪಕ್ಷದ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಗೆಲುವಿಗೆ ಮನೆ ಮನೆಗೆ ತೆರಳಿ ಮತಯಾಚಿಸಿದ್ದರು. ಮತಕ್ಕಾಗಿ ಇಲ್ಲಸಲ್ಲದ ಆರೋಪದ ನಡುವೆಯೂ ಮತದಾನದ ಪ್ರಕ್ರಿಯೆ ಗುರುವಾರ ಮುಕ್ತಯವಾಗಿದೆ.

ಮಾಗಡಿಯಲ್ಲಿ ಶೇ.70ರಷ್ಟು ಮತದಾನ: ಮಾಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟಾರೆ ಶೇ.70ರಷ್ಟು ಮತದಾನವಾಗಿದೆ. ಬಹುತೇಕ ಮಂದಿ ಮತದಾರರಿಂದ ಈ ಬಾರಿ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್‌ ಗೆಲ್ಲುತ್ತಾರೆ ಎಂಬ ಲೆಕ್ಕಾಚಾರದ ಮಾತುಗಳು ಕೇಳುಬರುತ್ತಿದೆ. ಮತ್ತೂಂದೆಡೆ ಮೋದಿ ಪ್ರಧಾನಿಯಾಗಬೇಕು ಎಂಬ ಚಿಂತನೆಯಿಂದಲೇ ವಿಶೇಷವಾಗಿ ಹೆಚ್ಚು ಯುವಕರು, ಮಹಿಳೆಯರು ಬಿಜೆಪಿ ಅಭ್ಯರ್ಥಿಗೆ ಮತಹಾಕಿದ್ದಾಗಿ ಹೇಳಿಕೊಳ್ಳುತ್ತಾ, ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣ ಅಲ್ಪಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂಬ ಲೆಕ್ಕಾಚಾರ ಹಾಕಿಕೊಂಡು ಬೆಟ್ಟಿಂಗ್‌ ಕಟ್ಟಿ ಎಂದು ನೋಡಿ ಎಂದು ಬೆಟ್ಟಿಂಗ್‌ ದಂಧೆಗೆ ಇಳಿದಿದ್ದಾರೆ. ಕಲ್ಯಾಗೇಟ್‌ನಲ್ಲಿ ಒಬ್ಬರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣ ಗೆಲ್ಲುತ್ತಾರೆ ಎಂದು 3 ಸಾವಿರ ಬೆಟ್ಟಿಂಗ್‌ ಕಟ್ಟಿದ್ದಾರೆ. ಅಶ್ವತ್ಥನಾರಾಯಣ ಗೆದ್ದರೆ 10 ಸಾವಿರ ಬರುತ್ತದೆ. ಸೋತರೆೆ 3 ಸಾವಿರ ಹೋಗುತ್ತದೆ ನೋಡೇ ಬಿಡೋಣ ಎಂದು ಬೆಟ್ಟಿಂಗ್‌ ಕಟ್ಟಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಮತ್ತೂಬ್ಬರು ಡಿ.ಕೆ.ಸುರೇಶ್‌ ಡಿಕೆಸು ಚಾರಿಟಬಲ್ ಟ್ರಸ್ಟ್‌ನಿಂದ ಶುದ್ಧ ಕುಡಿಯುವ ನೀರಿನ ಘಟನ ಸ್ಥಾಪನೆ, ಹೇಮಾವತಿ ನೀರಾವರಿ,ಯೋಜನೆ, ಹನಿ ನೀರಾವರಿ, ನರೇಗಾ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಿದ್ದಾರೆ. ಮತ್ತೂಮ್ಮೆ ಅವರೇ ಗೆಲ್ಲಬೇಕು ಎಂದು ಹೆಚ್ಚಿನ ಮತದಾರರು ಡಿ.ಕೆ.ಸುರೇಶ್‌ಗೆ ಮತಹಾಕಿದ್ದಾರೆ. ಕನಿಷ್ಠ 1 ಲಕ್ಷದ ಅಧಿಕ ಅಂತರದಲ್ಲಿ ಡಿ.ಕೆ.ಸುರೇಶ್‌ ಗೆಲುವು ಸಾಧಿಸುತ್ತಾರೆ ಎಂದು ಒಂದು ಲಕ್ಷದವರೆಗೆ ಬೆಟ್ಟಿಂಗ್‌ ಕಟ್ಟಿಕೊಂಡಿದ್ದಾರೆ.

ಕ್ಷೇತ್ರ ಬಿಟ್ಟ ನಾಯಕರು: ಗುರುವಾರವಷ್ಟೆ ಮತದಾನ ಪ್ರಕ್ರಿಯೆ ಮುಗಿದಿದೆ. ಕಳೆದ 15 ದಿನಗಳಿಂದಲೂ ಮತದಾರರನ್ನು ಎಡ ತಾಕುತ್ತಿದ್ದ ಶಾಸಕ ಎ.ಮಂಜು ಮತ್ತು ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ,ಬಹುತೇಕ ಜಿಪಂ ಸದಸ್ಯರು ಮತದಾನ ಮುಗಿದ ಕೂಡಲೇ ಕ್ಷೇತ್ರದಲ್ಲಿ ಎಲ್ಲೂ ಕಾಣಿಸಿಕೊಂಡಿಲ್ಲ. ಕ್ಷೇತ್ರ ಬಿಟ್ಟು ಬೇರೆಡೆ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲು ಹೋಗಿದ್ದಾರಂತೆ. ಮುಖಂಡರು ಸಹ ಕ್ಷೇತ್ರ ಬಿಟ್ಟು ಪ್ರವಾಸ ತೆರಳಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಚುನಾವಣೆ ಗುಂಗಿನಲ್ಲಿದ್ದ ಮಹುತೇಕ ಮತದಾರರು ಸಹ ಮೌನಕ್ಕೆ ಶರಣಾಗಿದ್ದಾರೆ. ಕೆಲವು ಮತದಾರರೂ ಮೂರು ದಿನ ರಜಾ ಇರುವುದರಿಂದ‌ ಪುಣ್ಯ ಕ್ಷೇತ್ರಗಳತ್ತ ಪ್ರವಾಸ ಕೈಗೊಂಡಿದ್ದಾರಂತೆ.

ಏನೇ ಆದರೂ ಚುನಾವಣೆ ಕಾವು ಮುಗಿಯುತ್ತಿದ್ದಂತೆ ಕ್ಷೇತ್ರದಲ್ಲಿ ಫ‌ಲಿತಾಂಶದ ಚರ್ಚೆಗಳ ಲೆಕ್ಕಾಚಾರದ ಗುಂಗಿಲ್ಲಿರುವುದಂತು ಸತ್ಯ. ಏನೇ ಆದರೂ ಅಭ್ಯರ್ಥಿಗಳ ಸೋಲು, ಗೆಲುವಿನ ಲೆಕ್ಕಚಾರದ ಫ‌ಲಿತಾಂಶಕ್ಕಾಗಿ ಮೇ 23ರವರೆವಿಗೆ ಕಾಯಲೇಬೇಕಿದೆ. ಸದ್ಯಕ್ಕೆ ಮತಯಂತ್ರದಲ್ಲಿ ತಾವು ಹಾಕಿರುವ ಮತದಾನ ಅಡಕವಾಗಿದೆ.

ಟಾಪ್ ನ್ಯೂಸ್

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

ಹೊಸ ಸೇರ್ಪಡೆ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.