ಮೋದಿ ಸಾಧನೆ ಇಲ್ಲದೆ ಮತ ಕೇಳ್ಳೋದು ನಾಚಿಕೆಗೇಡು

ಮೋದಿ ಚೌಕಿದಾರನಲ್ಲ, ಸಾಲಗಾರರು ಓಡಿ ಹೋಗಲು ಸಹಕರಿಸಿದ ಭಾಗಿದಾರ

Team Udayavani, Apr 20, 2019, 3:51 PM IST

20-April-23

ಸಿರುಗುಪ್ಪ: ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ್‌ ಹಿಟ್ನಾಳ್‌ಪರವಾಗಿ ನಡೆದ ಪ್ರಚಾರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಸಿರುಗುಪ್ಪ: ಐದು ವರ್ಷಗಳಲ್ಲಿ ಮಾಡಿದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತ ಕೇಳುವುದು ನ್ಯಾಯ ಸಮ್ಮತ. ಆದರೆ ಮೋದಿಯವರು ಯಾವುದೇ ಸಾಧನೆ ಮಾಡದೆ ಮತ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿರುಗುಪ್ಪದಲ್ಲಿ ಶುಕ್ರವಾರ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ್‌ ಹಿಟ್ನಾಳ್‌ ಪರವಾಗಿ ಆಯೋಜಿಸಿದ್ದ ಚುನಾವಣಾ ಪ್ರಚಾರ
ಸಭೆಯಲ್ಲಿ ಮಾತನಾಡಿದ ಅವರು, ‘ಹೊಸಗ್ಲಾಸು, ಹಳೇ ಮದ್ಯ’ ಎಂಬ ಗಾದೆ ಮಾತಿನಂತೆ ಮತ್ತೆ ಮತ್ತೆ ಹೇಳಿದ್ದನ್ನೇ ಪ್ರಧಾನಿ ಮೋದಿಯವರು ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಮೋದಿ
ಚೌಕಿದಾರನಲ್ಲ, ಸಾಲಗಾರರು ಓಡಿ ಹೋಗಲು ಸಹಕರಿಸಿದ ಭಾಗಿದಾರ. ಜನರ ಮನಸ್ಸಿನಲ್ಲಿ ಭ್ರಮಲೋಕ ಸೃಷ್ಟಿಸಿದ ದುರಾತ್ಮ. ಇಂತಹ ವ್ಯಕ್ತಿಗೆ ಓಟು ಹಾಕಬೇಡಿ. ಭೀಕರ ಬಲಗಾಲದಿಂದ ರಾಜ್ಯದಲ್ಲಿ ರೈತರು ತತ್ತರಿಸಿದ್ದು, ರೈತರ ಸಾಲಮನ್ನಾ ಮಾಡುವಂತೆ ಅಂಗಲಾಚಿ ಬೇಡಿಕೊಂಡರು ಮನ್ನಾ
ಮಾಡದ ಮೋದಿಯವರು ರೈತರಿಗೆ ಏನು ಉಪಕಾರ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ರೈತರ ಸಾಲಮನ್ನಾ ಮಾಡುವಂತೆ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರೆ, ಸಾಲಮನ್ನಾ ಮಾಡಲು
ನನ್ನ ಬಳಿ ನೋಟು, ಮುದ್ರಣ ಮಾಡುವ ಯಂತ್ರವಿಲ್ಲ ಎಂದು ಹೇಳಿದ್ದರು. ರೈತ ವಿರೋಧಿ ಆಡಳಿತ ನಡೆಸಿದ್ದರೂ, ರೈತರ ಪರ ಸರ್ಕಾರ ಎಂದು ಹಸಿರುಶಾಲು ಹಾಕಿಕೊಂಡು ಯಡಿಯೂರಪ್ಪ
ಸೋಗು ಮಾಡುತ್ತಿದ್ದಾರೆ. ಬಿಜೆಪಿಗೆ ಈ ಚುನಾವಣೆಯಲ್ಲಿ ಜನರ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ತಾವೊಬ್ಬರೇ ದೇಶಭಕ್ತ ಎಂದು ಎದೆಯುಬ್ಬಿಸುವ ಮೋದಿಯವರು ಸರ್ಜಿಕಲ್‌ ಸ್ಟ್ರೈಕ್‌ ಆದಾಗ ಸ್ಟೆನ್‌ಗನ್‌ ತಗೊಂಡು ಹೋಗಿದ್ದರ? ಸ್ವತಂತ್ರ
ಭಾರತದಲ್ಲಿ 12 ಸರ್ಜಿಕಲ್‌ ಸ್ಟ್ರೈಕ್‌ ಆಗಿದೆ ಎಂಬುದು ಮೋದಿಗೆ ಗೊತ್ತಲ್ಲ ಎಂದಾವರು ರೈತರ ಸಾಲಮನ್ನಾ ಮಾಡದ, ಯುವಜನರಿಗೆ ಉದ್ಯೋಗ
ಕಲ್ಪಿಸದ, ಮೋದಿಯವರು, ಬಿಜೆಪಿಯನ್ನು ಮನೆಗೆ ಕಳಿಸಿ ಎಂದು ಕರೆ ನೀಡಿದರು.

ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಕೊಪ್ಪಳ ಉಸ್ತುವಾರಿ ಸಚಿವ ಈ.ತುಕಾರಾಂ ಮಾತನಾಡಿ, ಮೇಕ್‌ಇನ್‌ ಇಂಡಿಯಾ ಎನ್ನುವ ಮೋದಿಯವರು ಸರ್ದಾರ್‌ ವಲ್ಲಭ ಭಾಯಿ ಪಾಟೀಲ್‌ ಅವರ ಪ್ರತಿಮೆಯನ್ನು ಚೀನಾದಿಂದ ತಂದಿದ್ದಾರೆ ಎಂದು ಆರೋಪಿಸಿದರು. ಮಾಜಿ ಸಚಿವ ಶಿವರಾಜ್‌ ತಂಗಡಿಗಿ, ಬಸವರಾಜ ರಾಯರೆಡ್ಡಿ, ಮಾಜಿ ಸಂಸದರಾದ ಶಿವರಾಮೆಗೌಡ, ವಿರೂಪಾಕ್ಷಪ್ಪ, ಮಾಜಿ ಶಾಸಕರಾದ ಬಿ.ಎಂ.ನಾಗರಾಜ, ಟಿ.ಎಂ.
ಚಂದ್ರಶೇಖರಯ್ಯಸ್ವಾಮಿ, ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ, ಸಿಂಧನೂರು ಮಾಜಿ ಶಾಸಕ ಬಾದರ್ಲಿ ಹಂಪನಗೌಡ ಮಾತನಾಡಿದರು.

ನಗರಸಭೆ ಅಧ್ಯಕ್ಷ ಸವಿತಾ ಅರುಣಪ್ರತಾಪರೆಡ್ಡಿ, ಮುಖಂಡರಾದ ಮುರಳಿಕೃಷ್ಣ, ವೆಂಕಟರಾಮರೆಡ್ಡಿ,
ಮಲ್ಲಿಕಾರ್ಜುನ ಬಾಲಪ್ಪ, ಎಚ್‌. ಕೆ.ಮಲ್ಲಿಕಾರ್ಜುನಯ್ಯಸ್ವಾಮಿ, ತಿಮ್ಮಪ್ಪ,
ಗೋಪಾಲರೆಡ್ಡಿ ಮತ್ತು ತಾಲೂಕಿನ ವಿವಿಧ ಗ್ರಾಮಗಳ ಕಾರ್ಯಕರ್ತರು, ಇನ್ನಿತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.