ಹಾಸನದಲ್ಲಿ ಜೆಡಿಎಸ್‌, ಬಿಜೆಪಿ ಗೆಲುವಿನ ಲೆಕ್ಕಾಚಾರ

2 ರಿಂದ 3 ಲಕ್ಷ ಅಂತರದ ಗೆಲುವು: ರೇವಣ್ಣ ವಿಶ್ವಾಸ 7 ಲಕ್ಷ ಮತಗಳ ಗಳಿಕೆ ಎ.ಮಂಜು ನಂಬಿಕೆ

Team Udayavani, Apr 20, 2019, 4:09 PM IST

Udayavani Kannada Newspaper

ಹಾಸನ: ಮತದಾನ ಮುಗಿದ ಮರುದಿನ ಹಾಸನ ಲೊಕಸಭಾ ಕ್ಷೇತ್ರದ ಅಭ್ಯರ್ಥಿಗಳು ತಮ್ಮದೇ ಗೆಲುವಿನ ಲೆಕ್ಕಾಚಾರ ಹಾಕಿಕೊಂಡು ವಿಜಯದ
ಉತ್ಸಾಹ ತೋರಿದರು.

ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ತಂದೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರು, ಪ್ರಜ್ವಲ್‌ ರೇವಣ್ಣ ಅವರಿಗೆ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲೂ ಬಹುಮತ ಬರಲಿದೆ. ವಿಶೇಷವಾಗಿ
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಬಹುಮತ ಪ್ರಜ್ವಲ್‌ಗೆ ಬರಲಿದ್ದು, ದುದ್ದ ಮತ್ತು ಶಾಂತಿಗ್ರಾಮ ಹೋಬಳಿಯಲ್ಲೇ ತಲಾ 15 ರಿಂದ 20 ಸಾವಿರ ಬಹುಮತ ಬರಲಿದೆ. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ನಂತರ
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಬಹುಮತ ಬರಲಿದ್ದು, ಆನಂತರದ ಹೆಚ್ಚು ಬಹುಮತ ಅರಸೀಕೆರೆ ಮತ್ತು ಹಾಸನ ವಿಧಾನಸಭಾ
ಕ್ಷೇತ್ರದಲ್ಲಿ ಬರಲಿದೆ ಎಂದು ಲೆಕ್ಕಾಚಾರ ಮಂಡಿಸಿದರು.

ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಕಲೇಶಪುರ ತಾಲೂಕಿನಲ್ಲಿ ಜೆಡಿಎಸ್‌ಗೆ ಹಿನ್ನಡೆಯಾದರೂ ಆಲೂರು ತಾಲೂಕಿನಲ್ಲಿ ಸ್ಪಲ್ಪ
ಬಹುಮತ ಬರಬಹುದು. ಕಟ್ಟಾಯ ಹೋಬಳಿಯಲ್ಲೇ 15 ಸಾವಿರಕ್ಕೂ ಹೆಚ್ಚು ಬಹುಮತ ಜೆಡಿಸ್‌ಗೆ ಬರುವುದು ಖಚಿತ ಎಂದು ಹೇಳಿದ ರೇವಣ್ಣ
ಅವರು, ಕಳೆದ ಚುನಾವಣೆಯಲ್ಲಿ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ಗೆ 17 ಸಾವಿರ ಮತಗಳ ಹಿನ್ನಡೆಯಾಗಿತ್ತು. ಆದರೆ ಈ ಬಾರಿ ಆ ಕ್ಷೇತ್ರದಲ್ಲಿಯೂ ಜೆಡಿಎಸ್‌ಗೆ ಬಹುಮತ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಅರಕಲಗೂಡು ಕ್ಷೇತ್ರದಲ್ಲಿಯೂ ಬಹುಮತ ಜೆಡಿಎಸ್‌ಗೆ ಬರಲಿದೆ. ವಿಶೇಷವಾಗಿ ಅಲ್ಪ ಸಂಖ್ಯಾತ
ಸಮುದಾಯದವರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಮತಗಳು ಈ ಬಾರಿ ಜೆಡಿಎಸ್‌ಗೆ ಹೆಚ್ಚು ಬಂದಿವೆ. ಹಾಗಾಗಿ ಪ್ರಜ್ವಲ್‌ ರೇವಣ್ಣ 2 ರಿಂದ 3 ಲಕ್ಷ ಮತಗಳ ಅಂತರದಿಂದ
ಗೆಲ್ಲಲಿದ್ದಾರೆ ಎಂದು ಲೆಕ್ಕಾಚಾರ ಮಂಡಿಸಿದರು.

ಎ.ಮಂಜು ಲೆಕ್ಕಾಚಾರ: ಎ.ಮಂಜು ಅವರೂ ತಮ್ಮ ಗೆಲುವಿನ ಲೆಕ್ಕಾಚಾರ ಮಂಡಿಸಿ ತಮಗೆ ಸುಮಾರು 7 ಲಕ್ಷ ಮತಗಳು ಬರಲಿವೆ ಎಂದು ಹೇಳಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ
ಜಿಲ್ಲೆಯ 7 ಕ್ಷೇತ್ರಗಳಳಲ್ಲಿ ಬಿಜೆಪಿ 3 ಲಕ್ಷ ಮತಗಳನ್ನು ಪಡೆದಿತ್ತು. ಈ ಬಾರಿ ಹೊಸ ಮತದಾರರು 82 ಸಾವಿರ
ಇದ್ದು, ಅವರಲ್ಲಿ ಬಹುಪಾಲು ಪ್ರಧಾನಿ ನರೇಂದ್ರಮೋದಿ ಅವರು ಪ್ರಧಾನಿ
ಆಗಬೇಕೆಂಬ ಬಯಕೆ ವ್ಯಕ್ತಪಡಿಸಿ ನನಗೆ ಮತ ನೀಡಿದ್ದಾರೆ. ಹಾಗಾಗಿಯೇ ಕಳೆದ ಬಾರಿಯ ಲೋಕಸಭಾ ಚುನಾವಣೆಗಿಂತ ಈ ಬಾರಿ ಮತದಾನದಲ್ಲಿ ಶೇ.4 ರಷ್ಟು ಹೆಚ್ಚು ಮತದಾನವಾಗಿದೆ ಎಂದರು.

ಇನ್ನು ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ನನಗೆ 4.9 ಲಕ್ಷ ಮತಗಳು ಬಂದಿದ್ದವು. ಅವುಗಳಲ್ಲಿ ಈ ಬಾರಿ ಶೇ. 65 ರಿಂದ 70 ರಷ್ಟು ಮತಗಳು ಬರಲಿವೆ. ವಿಶೇಷವಾಗಿ
ಪರಿಶಿಷ್ಟ ಜಾತಿಯ ಮತದಾರರು ನನಗೆ ಹೆಚ್ಚು ಮತ ನೀಡಿದ್ದಾರೆ. ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಹುಮತ ಕೊಡಿಸುವುದಾಗಿ ಶಾಸಕ ಬೆಳ್ಳಿಪ್ರಕಾಶ್‌ ಹೇಳಿದ್ದು, ಅ ನಿಟ್ಟಿನಲ್ಲಿ ಅವರು ಪ್ರಯತ್ನವನ್ನೂ ನಡೆಸಿದ್ದಾರೆ. ಹಾಗಾಗಿ ನನ್ನ ಗೆಲುವು ಖಚಿತ ಎಂದೂ
ಎ.ಮಂಜು ಅವರು ಲೆಕ್ಕಾಚಾರ ಮಾಡಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.