ನಗರದಲ್ಲಿ ಶೀಘ್ರ ಇನ್ನೊಮ್ಮೆ ಮತದಾನ!

ಐದು ತಿಂಗಳುಗಳೊಳಗೆ ಪಾಲಿಕೆಗೆ ಚುನಾವಣೆ?

Team Udayavani, Apr 21, 2019, 6:00 AM IST

1904MLR101

ಮಹಾನಗರ: ಲೋಕಸಭಾ ಚುನಾವಣೆಗೆ ಗುರುವಾರವಷ್ಟೇ ಮತದಾನ ಮಾಡಿರುವ ಮಂಗಳೂರಿನ ನಾಗರಿಕರಿಗೆ ಇನ್ನು ಕೆಲವೇ ತಿಂಗಳುಗಳಲ್ಲಿ ಮತ್ತೂಮ್ಮೆ ಮತ ಹಾಕುವ ಪ್ರಮೇಯ ಎದುರಾಗಲಿದೆ. ಯಾಕೆಂದರೆ, ಮಹಾನಗರ ಪಾಲಿಕೆಗೆ ಮುಂದಿನ 5 ತಿಂಗಳುಗಳೊಳಗೆ ಚುನಾವಣೆ ನಡೆಯಲಿದೆ!

ಲೋಕಸಭೆ, ವಿಧಾನಸಭೆಗಳಿಗೆ ನಡೆಯುವ ಚುನಾವಣೆಯಲ್ಲಿ ಕನಿಷ್ಠ ಮತದಾನದ ಮೂಲಕ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ವಿ.ಸಭಾ ಕ್ಷೇತ್ರ ಜಿಲ್ಲೆಯಲ್ಲಿಯೇ ಗುರುತಿಸಿ ಕೊಂಡಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಈ ಎರಡೂ ಕ್ಷೇತ್ರದಲ್ಲಿ ಮತದಾನದ ಪ್ರಮಾಣ ಕಡಿಮೆ. ವಿಶೇಷವೆಂದರೆ, ಈ ಎರಡೂ ಕ್ಷೇತ್ರಗಳಲ್ಲಿ ಪಾಲಿಕೆಯ ವಾರ್ಡ್‌ಗಳು ಇರುವ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆ ವೇಳೆಗೆ ಮತ್ತೂಮ್ಮೆ ಮತದಾರರನ್ನು ಮತಗಟ್ಟೆಗಳಿಗೆ ಕರೆತರುವುದು ಚುನಾವಣ ಆಯೋಗಕ್ಕೆ ಬಹುದೊಡ್ಡ ಸವಾಲಿನ ಕೆಲಸ.

ಸಿಟಿಯ ಜನರು ಮತದಾನಕ್ಕೆ ಬರಲು ಹಿಂದೇಟು ಹಾಕುವ ಪರಿಸ್ಥಿತಿ ಸದ್ಯ ನಿರ್ಮಾಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬ್ಯುಸಿಯಾಗಿರುವ ನಗರವಾಸಿಗಳು ಮತಗಟ್ಟೆಗಳಿಗೆ ಬಂದು ಮತಚಲಾಯಿಸಲು ಮಾತ್ರ ನಿರಾಕರಿ ಸುತ್ತಾರೆ. ಹೀಗಾಗಿಯೇ ಮತದಾನದ ಪ್ರಮಾಣ ಕಡಿಮೆ ಯಾಗುತ್ತಿದೆ ಎಂಬುದು ಕೆಲವರ ಅಭಿಪ್ರಾಯ.

ಮಾ.7ರಂದು ಪಾಲಿಕೆಯ ಪರಿಷತ್‌ನ ಈ ಬಾರಿಯ ಅವಧಿ ಪೂರ್ಣ ಗೊಂಡಿದ್ದು, ಅಧಿಕಾರವು ಆಡಳಿತಾಧಿಕಾರಿಗೆ ಹಸ್ತಾಂತರಗೊಂಡಿದೆ. ಮಂಗಳೂರು ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ನಾರಾಯಣಪ್ಪ ಅವರು ಪ್ರಸ್ತುತ ಮನಪಾ ಆಡಳಿತಾಧಿಕಾರಿ ಜವಾಬ್ದಾರಿ ನಿರ್ವಹಿಸತ್ತಿದ್ದಾರೆ. ಇದಕ್ಕೂ ಮುನ್ನ ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಕಾಂಗ್ರೆಸ್‌ 35 ಸ್ಥಾನಗಳನ್ನು ಪಡೆದು ಸ್ವಷ್ಟ ಬಹುಮತ ಪಡೆದುಕೊಂಡಿತ್ತು. ಉಳಿದಂತೆ ಬಿಜೆಪಿ 20, ಜೆಡಿಎಸ್‌ 2, ಸಿಪಿಎಂ 1, ಪಕ್ಷೇತರ 1, ಎಸ್‌ಡಿಪಿಐ 1 ಸದಸ್ಯರನ್ನು ಹೊಂದಿತ್ತು.

ಸರಕಾರದ ಎಡವಟ್ಟು- ಚುನಾವಣೆ ಲೇಟ್‌!
2013 ಮಾ. 7ರಂದು ಪಾಲಿಕೆ ಚುನಾವಣೆ ನಡೆದಿದ್ದು, ಮುಂದಿನ ಚುನಾವಣೆ ಈ ವರ್ಷದ ಮಾರ್ಚ್‌ ವೇಳೆಗೆ ನಡೆಯಬೇಕಿತ್ತು. ಆದರೆ, ಸರಕಾರ ಪ್ರಕಟಿಸಿದ ಮೀಸಲಾತಿಯು ಸಮರ್ಪಕವಾಗಿ ನಡೆದಿಲ್ಲ ಎಂದು ಆರೋಪಿಸಿ ಕೆಲವರು ಹೈಕೋರ್ಟ್‌ ಮೊರೆ ಹೋಗಿದ್ದರು.

ಇದನ್ನು ಪರಿಶೀಲಿಸಿದ ನ್ಯಾಯಾಲಯ ಮೀಸಲಾತಿ ಮರು ಪರಿಷ್ಕರಿಸುವಂತೆ ಸೂಚಿಸಿತ್ತು. ಆದರೆ, ಆ ವೇಳೆಗಾಗುವಾಗಲೇ ಲೋಕ ಸಭಾ ಚುನಾವಣೆಗೆ ರಾಜಕೀಯ ಲೆಕ್ಕಾ ಚಾರಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮೀಸಲಾತಿ ಮರು ಪರಿಷ್ಕರಣೆಯನ್ನು ಲೋಕಸಭಾ ಚುನಾವಣೆಯ ಬಳಿಕ ನಡೆಸುವ ಬಗ್ಗೆ ಯೋಚಿಸಿತು. ಆ ಸಂದರ್ಭ ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿ ನೀತಿ ಸಂಹಿತೆ ಜಾರಿಗೆ ಬಂತು.

ಮತ ಎಣಿಕೆ ನಡೆಯಲಿರುವ ಮೇ 23ರ ವರೆಗೆ ನೀತಿಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆ ಬಳಿಕ ರಾಜ್ಯಸರಕಾರ ಪರಿಷ್ಕೃತ ಮೀಸಲಾತಿ ಪಟ್ಟಿ ಪ್ರಕಟಿಸಿ ಚುನಾವಣೆ ನಡೆಸಲಿದೆ. ಮುಂದೆ ಮಳೆಗಾಲ ಇರುವ ಕಾರಣದಿಂದ ಸೆಪ್ಟಂಬರ್‌ ವೇಳೆಗೆ ಮನಪಾ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಇನ್ನು ಬಿಜೆಪಿ, ಕಾಂಗ್ರೆಸ್‌ಗೆ ಮನಪಾ ಚುನಾವಣೆಯೇ ಪ್ರತಿಷ್ಠೆಯ ಕಣವಾಗಿದೆ. ಕೈತಪ್ಪಿದ ಪಾಲಿಕೆ ಅಧಿಕಾರವನ್ನು ಮರುಪಡೆಯಲು ಬಿಜೆಪಿ ಹವಣಿಸಿದ್ದರೆ, ಕಾಂಗ್ರೆಸ್‌ ಮತ್ತೂಮ್ಮೆ ಅಧಿಕಾರ ಸೂತ್ರ ಪಡೆಯಲು ಪ್ರಯತ್ನಿಸುತ್ತಿದೆ. ಈ ಸಂಬಂಧ ವಾರ್ಡ್‌ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಚಟುವಟಿಕೆಗಳು ಆರಂಭವಾಗಿವೆ. ಮನಪಾ ಆಡಳಿತ ದೊರೆಯಬೇಕೆಂಬ ಹಠದಿಂದ ಎರಡೂ ಪಕ್ಷಗಳು ಇದೀಗ ರಾಜಕೀಯ ತಾಲೀಮು ಶುರುಮಾಡಿದೆ.

ಚುನಾವಣ ಪ್ರಚಾರ-ಮನಪಾ ಸೀಟು!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌, ಬಿಜೆಪಿಯ ಮಾಜಿ ಕಾರ್ಪೊರೇಟರ್‌ಗಳು ತಮ್ಮ ವಾರ್ಡ್‌ಗಳಲ್ಲಿ ಬಿರುಸಿನ ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಂದು ವೇಳೆ ಪಕ್ಷದ ಪರವಾಗಿ ಮತಯಾಚಿಸದಿದ್ದರೆ ಮುಂದಿನ ಪಾಲಿಕೆ ಚುನಾವಣೆಯ ಟಿಕೆಟ್‌ ಸಿಗುವ ಬಗ್ಗೆ ಆತಂಕ ಅವರಲ್ಲಿತ್ತು. ಹೀಗಾಗಿ ಕೆಲವು ವಾರ್ಡ್‌ ವ್ಯಾಪ್ತಿಯಲ್ಲಿ ಮಾಜಿ ಕಾರ್ಪೊರೇಟರ್‌ಗಳು ಬೆಂಬಲಿಗರನ್ನು ಸೇರಿಸಿಕೊಂಡು ಬಹಳಷ್ಟು ಬಿರುಸಿನ ಪ್ರಚಾ ರ ಮಾಡಿದ್ದರು. ಇಷ್ಟಿದ್ದರೂ, ಕೆಲವು ಮಾಜಿ ಕಾರ್ಪೊರೇಟರ್‌ಗಳು ಮಾತ್ರ ಪ್ರಚಾರದ ಬಗ್ಗೆ ಜಾಸ್ತಿ ತಲೆಕೆಡಿಸಿಕೊಂಡಿಲ್ಲ. ಇನ್ನೂ ಕೆಲವರು ಪಕ್ಷದ ನಾಯಕರನ್ನು ಮೆಚ್ಚಿಸುವ ಕಾರಣಕ್ಕಾಗಿ ಒಂದೆರಡು ಮನೆಗಳಿಗೆ ಭೇಟಿ ನೀಡಿ ಪ್ರಚಾರದ ಫೋಟೋ ತೆಗೆದು ಸಾಮಾಜಿಕ ಜಾಲತಾಣ-ಪಕ್ಷದ ವಾಟ್ಸಾಪ್‌ಗ್ಳಲ್ಲಿ ಹಾಕಿ ಪ್ರಚಾರದಲ್ಲಿ ಇರುವ ಬಗ್ಗೆ ಗೊತ್ತುಪಡಿಸುತ್ತಿದ್ದರು. ಇದೆಲ್ಲದರ ಮಧ್ಯೆ ಮನಪಾ ಸ್ಥಾಯೀ ಸಮಿತಿಯ ಮಾಜಿ ಅಧ್ಯಕ್ಷ ಕಾಂಗ್ರೆಸ್‌ನ ರಾಧಾಕೃಷ್ಣ ಅವರು ಲೋಕಸಭಾ ಚುನಾವಣೆಯ ಪ್ರಚಾರ ಪರಾಕಾಷ್ಟೆಯಲ್ಲಿರುವ ಹಂತದಲ್ಲಿಯೇ ದಿಢೀರ್‌ ಆಗಿ ಪಕ್ಷಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದರು.

ಮನಪಾ; 2013ರಲ್ಲಿ ಶೇ.63.29 ಮತದಾನ
60 ವಾರ್ಡ್‌ಗಳನ್ನು ಹೊಂದಿರುವ ಮಂಗಳೂರು ಪಾಲಿಕೆಗೆ 2013ರ ಮಾ. 7ರಂದು ಚುನಾವಣೆಯಲ್ಲಿ ಶೇ. 63.28ರಷ್ಟು ಮತದಾನವಾಗಿತ್ತು. ಅಂದು ಒಟ್ಟು 3,22,293 ಮತದಾರರಲ್ಲಿ 2,07,070 ಮತದಾರರು ಮತ ಚಲಾಯಿಸಿದ್ದರು. 52ನೇ ಕಣ್ಣೂರು ವಾರ್ಡ್‌ನಲ್ಲಿ ಗರಿಷ್ಠ ಶೇ.75.75 ಮತದಾನವಾದರೆ 38ನೇ ಬೆಂದೂರು ವಾರ್ಡ್‌ನಲ್ಲಿ ಕನಿಷ್ಠ ಶೇ. 47.35 ಮತದಾನವಾಗಿತ್ತು. 2007 ಸೆ. 28ರಂದು ನಡೆದ ಮನಪಾ ಚುನಾವಣೆಯಲ್ಲಿ ಕೇವಲ ಶೇ. 60.85ರಷ್ಟು ಮತದಾನವಾಗಿತ್ತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 38, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 22 ಪಾಲಿಕೆಯ ವಾರ್ಡ್‌ಗಳಿವೆ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.