ಚುನಾವಣೆಗೆ ಬೈಂದೂರು ಕ್ಷೇತ್ರ ಸರ್ವ ಸಿದ್ಧ


Team Udayavani, Apr 21, 2019, 6:30 AM IST

byndoor

ಬೈಂದೂರು: ಎ. 23ರ ಚುನಾವಣೆಗೆ ಬೈಂದೂರು ಕ್ಷೇತ್ರವನ್ನು ತಾಲೂಕು ಆಡಳಿತ ಸಿದ್ಧಗೊಳಿಸಿದೆ. ಸಹಾಯಕ ಚುನಾವಣಾಧಿಕಾರಿ ಕುಸುಮಾಧರ ಅವರ ನೇತೃತ್ವದಲ್ಲಿ ತಹಶೀಲ್ದಾರ್‌ ಬಸಪ್ಪ ಪೂಜಾರ್‌ ಮತ್ತು ಸಿಬಂದಿಯ ಸಹಕಾರದೊಂದಿಗೆ ಸಿದ್ಧತೆಗಳು ನಡೆದಿವೆ.

ಮತಗಟ್ಟೆಗಳಲ್ಲಿ 75 ಸೂಕ್ಷ್ಮ ಮತ್ತು 171 ಸಾಮಾನ್ಯ ಎಂದು ಗುರುತಿಸಲಾಗಿದೆ. ಹೆಮ್ಮಾಡಿಯಲ್ಲಿ 2 ಮತ್ತು ತಲ್ಲೂರಿನಲ್ಲಿ 3 ಸಖೀ ಮತಗಟ್ಟೆಗಳಿರುತ್ತವೆ. ಎಲ್ಲ ಕೇಂದ್ರಗಳಲ್ಲೂ ವಿಶೇಷ ಚೇತನರಿಗೆ, ಅಶಕ್ತರಿಗೆ, ಗರ್ಭಿಣಿಯರಿಗೆ ಮತ್ತು ಹಿರಿಯ ನಾಗರಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. 1088 ಮತಗಟ್ಟೆ ಸಿಬಂದಿ ಮತ್ತು 246 ಸಹಾಯಕ ಸಿಬಂದಿ ಚುನಾವಣೆಯ ಕರ್ತವ್ಯ ನಿರ್ವಹಿಸುವರು. ಸುರಕ್ಷತೆಯ ಹೊಣೆಯನ್ನು ಮೂವರು ಡಿವೈಎಸ್‌ಪಿ ನೇತೃತ್ವದಲ್ಲಿ 103 ಇನ್‌ಸ್ಪೆಕ್ಟರ್‌, 33 ಎಸ್‌ಐ, 149 ಎಎಸ್‌ಐ ಹಾಗೂ 523 ಸಿಬಂದಿ ನೋಡಿಕೊಳ್ಳಲಿದ್ದಾರೆ.

ಎ. 22ರ ಬೆಳಗ್ಗೆ ಬೆ„ಂದೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್‌ ನಡೆಯಲಿದ್ದು, 41 ಬಸ್‌ ಮತ್ತು 45 ವ್ಯಾನ್‌ಗಳ ಮೂಲಕ 86 ರೂಟ್‌ಗಳಿಗೆ ಹೋಗುವ ಸಿಬಂದಿಯ‌ನ್ನು ಸಾಗಿಸುವ ವ್ಯವಸ್ಥೆ ಮಾಡಲಾಗಿದೆ. ಮತದಾನ ಮುಗಿದ ಬಳಿಕ ಡಿಮಸ್ಟರಿಂಗ್‌ ಕೂಡ ಇಲ್ಲಿಯೇ ನಡೆದು, ಮತಪೆಟ್ಟಿಗೆಗಳನ್ನು ಅದೇ ರಾತ್ರಿ ಶಿವಮೊಗ್ಗಕ್ಕೆ ಕಳುಹಿಸಲಾಗುವುದು.

246 ಮತದಾನ ಕೇಂದ್ರ
ಈ ಕ್ಷೇತ್ರದಲ್ಲಿ ಬೈಂದೂರು ತಾಲೂಕಿನ 26, ಕುಂದಾಪುರ ತಾಲೂಕಿನ 39 ಸೇರಿ 65 ಗ್ರಾಮಗಳು ಇವೆ. 1,10,237 ಪುರುಷ, 1,16,349 ಮಹಿಳಾ ಮತ್ತು 1 ಅನ್ಯ ಸೇರಿ ಒಟ್ಟು 2,26,587 ಮತದಾರರು 246 ಮತದಾನ ಕೇಂದ್ರಗಳಲ್ಲಿ ಹಕ್ಕು ಚಲಾಯಿಸಲಿದ್ದಾರೆ.

ಶಿವಮೊಗ್ಗ ಲೋಕಸಭಾ ಚುನಾವಣೆ : ವಾಹನ ವ್ಯವಸ್ಥೆ
ಕುಂದಾಪುರ: ಶಿವಮೊಗ್ಗ ಲೋಕಸಭಾ ಚುನಾವಣೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಮತದಾನ ಕೆಲಸ ನಿರ್ವಹಿಸಲು ಉಡುಪಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಅಧಿಕಾರಿ, ಸಿಬಂದಿ, ಪಿಆರ್‌ಒ, ಎಪಿಆರ್‌ಒ, ಪಿಒಗಳನ್ನು ನಿಯೋಜಿಸ ಲಾಗಿದ್ದು, ನಿಯೋಜಿತ ಮತಗಟ್ಟೆ ಅ ಧಿಕಾರಿ, ಸಿಬಂದಿಯು ಮಸ್ಟರಿಂಗ್‌ ಕೇಂದ್ರವಾದ ಬೈಂದೂರಿನ ಸರಕಾರಿ ಪ.ಪೂ. ಕಾಲೇಜಿಗೆ ಎ. 22 ರಂದು ಹಾಜರಾಗಲು ವಾಹನ ವ್ಯವಸ್ಥೆ ಮಾಡಲಾಗಿದೆ.
ವಿವಿಧ ತಾಲೂಕುಗಳಿಂದ ಚುನಾವಣಾ ಕರ್ತವ್ಯಕ್ಕೆ ಹೊರಡುವ ಸಿಬಂದಿಗೆ ತಾಲೂಕು ಕೇಂದ್ರಗಳಿಂದ ಬೈಂದೂರಿನ ಮಸ್ಟರಿಂಗ್‌ ಕೇಂದ್ರಕ್ಕೆ ಕರೆದುಕೊಂಡು ಹೋಗಲು ಉಡುಪಿ , ಕಾಪು, ಕಾರ್ಕಳ, ಕುಂದಾಪುರ ತಾಲೂಕು ಕೇಂದ್ರಗಳಲ್ಲಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಎ. 22 ರಂದು ಬೆಳಗ್ಗೆ 6.30 ಕ್ಕೆ ಬಸ್‌ ಹೊರಡಲಿದ್ದು, ಅನಂತರ ಬಸ್‌ ವ್ಯವಸ್ಥೆ ಇರುವುದಿಲ್ಲ. ಚುನಾವಣೆ ಮುಗಿದು ಡಿ ಮಸ್ಟರಿಂಗ್‌ ಕೇಂದ್ರದಲ್ಲಿ ಇವಿಎಂ ಮತಯಂತ್ರಗಳನ್ನು ಹಸ್ತಾಂತರಿಸಿದ ಅನಂತರ ವಾಪಸ್‌ ಕೇಂದ್ರ ಸ್ಥಾನಗಳಿಗೆ ಹೋಗಲು ಬಸ್‌ ವ್ಯವಸ್ಥೆ ಮಾಡಲಾಗಿದೆ.

ಹೊರಡುವ ಸ್ಥಳ
ಕುಂದಾಪುರದಲ್ಲಿ ತಾಲೂಕು ಕಚೇರಿ ಬಳಿ, ಉಡುಪಿಯಲ್ಲಿ ತಾಲೂಕು ಕಚೇರಿ ಮತ್ತು ಸಿಟಿ ಬಸ್‌ ನಿಲ್ದಾಣ, ಕಾಪುವಿನಲ್ಲಿ ತಾಲೂಕು ಕಚೇರಿ ಮತ್ತು ಬಸ್‌ ನಿಲ್ದಾಣ, ಕಾರ್ಕಳದಲ್ಲಿ ತಾಲೂಕು ಕಚೇರಿ ಮತ್ತು ಬಂಡಿಮಠದ ಬಸ್‌ ನಿಲ್ದಾಣದಿಂದ ಬಸ್‌ ಹೊರಡಲಿದೆ. ನಿಯೋಜಿತ ಅಧಿಕಾರಿ/ಸಿಬಂದಿ ಪ್ರಯೋಜನ ಪಡೆಯುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.