ದೀದಿಗೆ ಈಗ ನಿದ್ದೆ ಬರ್ತಿಲ್ಲ!: ಮೋದಿ

ಬಿಹಾರ, ಪಶ್ಚಿಮ ಬಂಗಾಲದಲ್ಲಿ ಪ್ರಧಾನಿ ರ್ಯಾಲಿ

Team Udayavani, Apr 21, 2019, 6:00 AM IST

34

ಪಶ್ಚಿಮ ಬಂಗಾಲದಲ್ಲಿ ಶನಿವಾರ ನಡೆದ ಚುನಾವಣಾ ಪ್ರಚಾರ ರ್ಯಾಲಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಜೆಪಿ ನಾಯಕರು ಅಭಿನಂದಿಸಿದರು.

ಹೊಸದಿಲ್ಲಿ: ಪಶ್ಚಿಮ ಬಂಗಾಲದಲ್ಲಿ ಲೋಕಸಭೆಗೆ ಎರಡು ಸುತ್ತಿನ ಮತದಾನವಾದ ಅನಂತರ ಸಿಎಂ ಮಮತಾ ಬ್ಯಾನರ್ಜಿಗೆ ನಿದ್ದೆ ಬರು ತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿ ದ್ದಾರೆ. ದಕ್ಷಿಣ ದಿನಜ್‌ಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತ ನಾಡಿದ ಅವರು, ಇಷ್ಟು ದಿನ ಅವರು ತಾಯಿ, ಭೂಮಿ ಹಾಗೂ ಜನರ ಹೆಸರನ್ನು ಹೇಳಿಕೊಂಡು ಮೋಸ ಮಾಡುತ್ತಿದ್ದರು. ಮೊದಲ ಹಾಗೂ ಎರ ಡನೇ ಹಂತದ ಮತದಾನದ ಅನಂತರ ಬಂದ ವರದಿ ನೋಡಿ ಅವರಿಗೆ ನಿದ್ದೆ ಬರುತ್ತಿಲ್ಲ ಎಂದು ಟೀಕಿಸಿದ್ದಾರೆ. ಅಷ್ಟೇ ಅಲ್ಲ, ಬಾಂಗ್ಲಾದೇಶದ ನಟರು ಟಿಎಂಸಿ ಪರ ಪ್ರಚಾರ ನಡೆಸಿದ ವಿವಾದವನ್ನು ಪರೋಕ್ಷವಾಗಿ ಉಲ್ಲೇಖೀಸಿದ ಪ್ರಧಾನಿ ಮೋದಿ, ನೆರೆ ದೇಶದ ಜನರನ್ನೂ ಪ್ರಚಾರಕ್ಕಾಗಿ ಇವರು ಕರೆ ತರುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಓಲೈಸಲು ಅವರು ಈ ರೀತಿ ಮಾಡುತ್ತಿದ್ದಾರೆ. ದೇಶದಲ್ಲಿ ಹಿಂದೆಂದೂ ಇಂತಹ ಕೃತ್ಯ ನಡೆದಿರಲಿಲ್ಲ ಎಂದಿದ್ದಾರೆ.

ನಾನು ತಪ್ಪು ತಿಳಿದಿದ್ದೆ: ನೀವು ದೀದಿ ಮೇಲೆ ವಿಶ್ವಾಸ ಇಟ್ಟಿದ್ದಿರಿ. ಆದರೆ ಅವರು ನಿಮಗೆ ಮೋಸ ಮಾಡಿ ದ್ದಾರೆ. ಇದು ನಿಮ್ಮ ತಪ್ಪು ಮಾತ್ರವಲ್ಲ. ಪ್ರಧಾನಿಯಾಗುವುದಕ್ಕೂ ಮೊದಲು ನಾನೂ ಕೂಡ ಆಕೆ ಸರಳ ವ್ಯಕ್ತಿತ್ವದವರು ಎಂದು ಭಾವಿಸಿದ್ದೆ. ಆದರೆ ಪ್ರಧಾನಿ ಯಾದ ಅನಂತರ ಅವರ ಬಗ್ಗೆ ಹೆಚ್ಚು ಹೆಚ್ಚು ತಿಳಿಯಿತು. ಈಗ ನನಗೆ ಬಂಗಾಲದಲ್ಲಿನ ಜನ ವಿರೋಧಿ ನೀತಿ ಗಳನ್ನು ಕೇಳಿ ನಾಚಿಕೆಯಾಗುತ್ತಿದೆ. ನಾನು ತಪ್ಪು ಮಾಡಿ ಬಿಟ್ಟೆ ಎಂದು ಮೋದಿ ಹೇಳಿದ್ದಾರೆ.

ಮತಬ್ಯಾಂಕ್‌ ರಾಜಕೀಯವೇ ಕೈಗೆ ಹೆಚ್ಚು: ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ದೇಶದ ಹಿತಾಸಕ್ತಿಗಿಂತ ಮತ ಬ್ಯಾಂಕ್‌ ರಾಜಕೀಯವೇ ಕಾಂಗ್ರೆಸ್‌ಗೆ ಪ್ರಮುಖ ವಾಗಿದೆ ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ. ಬಿಹಾರದ ಅರಾರಿಯಾದಲ್ಲಿ ಮಾತನಾಡಿದ ಅವರು ದೇಶದಲ್ಲಿ ಇರುವುದು ಎರಡೇ, ವೋಟ್‌ ಭಕ್ತಿ ಮತ್ತು ದೇಶಭಕ್ತಿ. ಮುಂಬಯಿ ದಾಳಿ ನಡೆದಾಗ ಪಾಕಿಸ್ಥಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಂತೆ ಸೇನೆಯನ್ನು ತಡೆಯಿತು. ಜೊತೆಗೆ ಹಿಂದು ಉಗ್ರರು ಎಂಬ ಪದಗುತ್ಛವನ್ನು ಸೃಷ್ಟಿಸಿತು. ಈ ಮೂಲಕ ಕಾಂಗ್ರೆಸ್‌ ತನ್ನ ವೋಟ್‌ ಭಕ್ತಿಯನ್ನು ಪ್ರದರ್ಶಿಸಿತು. ಆದರೆ ನಾವು ಉರಿ ಹಾಗೂ ಪುಲ್ವಾಮಾದಲ್ಲಿ ದಾಳಿ ನಡೆದಾಗ ಪ್ರತಿದಾಳಿ ನಡೆಸುವ ಮೂಲಕ ದೇಶ ಭಕ್ತಿಯನ್ನು ಪ್ರದರ್ಶಿಸಿದೆವು ಎಂದಿದ್ದಾರೆ. ಅಲ್ಲದೆ “ಭಾರತ್‌ ಮಾತಾ ಕೀ ಜೈ’ ಎನ್ನಲು ಹಿಂಜರಿಯು ವವರು ಮತ್ತು “ಭಾರತ್‌ ತೇರೆ ಟುಕಡೆ ಹೋಂಗೆ’ (ಭಾರತದ ವಿಭಜನೆ ಯಾಗಲಿ) ಎಂದು ಕೂಗುವವರಿಂದ ದೇಶ ಪ್ರಗತಿಯಾಗದು ಎಂದೂ ಅವರು ಟೀಕಿಸಿದ್ದಾರೆ.

ಸೋಲುವ ಫೋಬಿಯಾ: ಪ್ರಧಾನಿ ಮೋದಿ ಹೇಳಿ ಕೆಗೆ ತಿರುಗೇಟು ನೀಡಿರುವ ಮಮತಾ ಬ್ಯಾನರ್ಜಿ, “ಮೋದಿಯವರಿಗೆ ಚುನಾವಣೆಯಲ್ಲಿ ಸೋಲುವ ಫೋಬಿಯಾ ಶುರುವಾಗಿದೆ. ಅದಕ್ಕೆ ಈ ರೀತಿ ವರ್ತಿ ಸುತ್ತಿದ್ದಾರೆ’ ಎಂದಿದ್ದಾರೆ.

ಪಟ್ಟಣಂತಿಟ್ಟದಲ್ಲಿ ಅಮಿತ್‌ ಶಾ ರೋಡ್‌ ಶೋ: ಕೇರಳದ ಪಟ್ಟಣಂತಿಟ್ಟದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಶನಿವಾರ ಭರ್ಜರಿ ರೋಡ್‌ ಶೋ ನಡೆಸಿದ್ದು, ಪಕ್ಷದ ಅಭ್ಯರ್ಥಿ ಕೆ.ಸುರೇಂದ್ರನ್‌ ಪರ ಪ್ರಚಾರ ನಡೆಸಿದರು. ಶಬರಿಮಲೆ ದೇಗುಲ ವಿಚಾರದಲ್ಲಿ ಈ ಜಿಲ್ಲೆಯಲ್ಲೇ ಈ ಹಿಂದೆ ಭಾರಿ ಪ್ರತಿಭಟನೆ ನಡೆದಿತ್ತು. ಶನಿವಾರ ಶಾ ರ್ಯಾಲಿಗೆ ಭಾರಿ ಜನಬೆಂಬಲವೂ ವ್ಯಕ್ತವಾಗಿತ್ತು. ಬಿಜೆಪಿ ಅಭ್ಯರ್ಥಿ ಸುರೇಂದ್ರನ್‌, ಶಬರಿಮಲೆ ವಿಚಾರದಲ್ಲಿ ನಡೆದ ಪ್ರತಿಭಟನೆಯಲ್ಲಿ ಜೈಲಿಗೂ ಹೋಗಿ ಬಂದಿದ್ದಾರೆ. ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಯಿದ್ದು, ಎಲ್‌ಡಿಎಫ್ನ ವೀಣಾ ಜಾರ್ಜ್‌, ಯುಡಿಎಫ್ನ ಆಂಟೋ ಅಂಟೋನಿ ಕೂಡ ಕಣದಲ್ಲಿದ್ದಾರೆ. ಶಬರಿಮಲೆ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡ ಸುರೇಂದ್ರನ್‌ ಈ ಬಾರಿ ಅತ್ಯಂತ ಮಹತ್ವ ಪಡೆದಿದ್ದಾರೆ.

ಗೊಂದಲ ಸೃಷ್ಟಿಸಿದ ರಾಹುಲ್‌ ನಾಮಪತ್ರ
ಉತ್ತರ ಪ್ರದೇಶದ ಅಮೇಠಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಾಮಪತ್ರ ಗೊಂದಲಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಯನ್ನು ಅಮೇಠಿ ರಿಟರ್ನಿಂಗ್‌ ಅಧಿಕಾರಿ ರಾಮ್‌ ಮನೋಹರ ಮಿಶ್ರಾ ಸೋಮವಾರಕ್ಕೆ ಮುಂದೂಡಿದ್ದಾರೆ. ರಾಹುಲ್‌ ಗಾಂಧಿ ಬ್ರಿಟನ್‌ ಪೌರತ್ವ ಹೊಂದಿದ್ದಾರೆ ಹಾಗೂ ಶೈಕ್ಷಣಿಕ ವಿವರಗಳನ್ನು ತಪ್ಪಾಗಿ ನಮೂದಿಸಿದ್ದಾರೆ ಎಂದು ಆರೋಪಿಸಿ ಸ್ವತಂತ್ರ ಅಭ್ಯರ್ಥಿ ಧ್ರುವ್‌ಲಾಲ್‌ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಧ್ರುವ್‌ ಲಾಲ್‌ ವಕೀಲ ರವಿ ಪ್ರಕಾಶ್‌ ಮಾತನಾಡಿ, ರಾಹುಲ್‌ ನಾಮಪತ್ರ ವಿಚಾರದಲ್ಲಿ 3 ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದೇವೆ. ಇಂಗ್ಲೆಂಡ್‌ನ‌ಲ್ಲಿ ನೋಂದಾಯಿತ ಕಂಪೆನಿಯಲ್ಲಿ ರಾಹುಲ್‌ ತನ್ನನ್ನು ಇಂಗ್ಲೆಂಡ್‌ ಪ್ರಜೆ ಎಂದು ಘೋಷಿಸಿಕೊಂಡಿದ್ದಾರೆ. ಭಾರತದ ಜನಪ್ರತಿನಿಧಿ ಕಾಯ್ದೆ ಪ್ರಕಾರ, ವಿದೇಶಿ ಪ್ರಜೆ ಭಾರತದಲ್ಲಿ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಇನ್ನು ಅವರ ಶೈಕ್ಷಣಿಕ ದಾಖಲೆಗಳಲ್ಲಿ ರೌಲ್‌ ವಿಂಚಿ ಎಂಬ ಹೆಸರು ಇದೆ. ರಾಹುಲ್‌ ಗಾಂಧಿ ಹೆಸರಿನ ಸರ್ಟಿಫಿಕೇಟ್‌ಗಳು ಲಭ್ಯವಿಲ್ಲ. ಇಬ್ಬರೂ ಒಂದೇ ವ್ಯಕ್ತಿಯಾಗಿದ್ದಲ್ಲಿ ಅದಕ್ಕೆ ಸೂಕ್ತ ದಾಖಲೆ ಒದಗಿಸುವಂತೆ ನಾವು ಆಗ್ರಹಿಸಿದ್ದೇವೆ ಎಂದು ಹೇಳಿದ್ದಾರೆ.

ಈ ಆರೋಪಿಗಳಿಗೆ ರಾಹುಲ್‌ ಗಾಂಧಿ ಅಥವಾ ಅವರ ವಕೀಲರು ಸ್ಪಷ್ಟನೆ ನೀಡದಿದ್ದಲ್ಲಿ ಅಮೇಠಿ ರಿಟರ್ನಿಂಗ್‌ ಅಧಿಕಾರಿ ನಾಮಪತ್ರ ತಿರಸ್ಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಸೋಮವಾರ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಸ್ಪಷ್ಟನೆ ಕೇಳಿದ ಬಿಜೆಪಿ: ಈ ಮಧ್ಯೆ ಪೌರತ್ವ ಹಾಗೂ ಶೈಕ್ಷಣಿಕ ವಿವಾದಕ್ಕೆ ಸಂಬಂಧಿಸಿ ರಾಹುಲ್‌ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಇವು ಗಂಭೀರ ಆರೋಪಗಳಾಗಿದ್ದು, ತಾನು ಭಾರತೀಯ ನಾಗರಿಕನೇ ಅಥವಾ ಅಲ್ಲವೇ ಎಂಬು ದನ್ನು ರಾಹುಲ್‌ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ವಕ್ತಾರ ಜಿ.ವಿ.ಎಲ್‌ ನರಸಿಂಹರಾವ್‌ ಹೇಳಿದ್ದಾರೆ. ಅಲ್ಲದೆ, ಈ ವಿವಾದಕ್ಕೆ ಪ್ರತಿಕ್ರಿಯಿ ಸಲು ರಾಹುಲ್‌ ಪರ ವಕೀಲರು ಸಮಯ ಕೇಳಿರುವುದು ಇನ್ನಷ್ಟು ಅನುಮಾನ ಮೂಡಿಸಿದೆ ಎಂದೂ ಹೇಳಿದ್ದಾರೆ.

ಪೆಟ್ರೋಲ್‌ ರೀತಿ ಕೆಲಸ ಮಾಡುವ “ನ್ಯಾಯ್‌’
ಕಾಂಗ್ರೆಸ್‌ ಪ್ರಸ್ತಾಪಿಸಿರುವ ಕನಿಷ್ಠ ಆದಾಯ ಯೋಜನೆ “ನ್ಯಾಯ್‌’ ಪೆಟ್ರೋಲ್‌ ರೀತಿ ಕೆಲಸ ಮಾಡಿ, ಆರ್ಥಿಕತೆಯ ಇಂಜಿನ್‌ ಅನ್ನು ಚಲಿಸು ವಂತೆ ಮಾಡುತ್ತದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಛತ್ತೀಸ್‌ಗಢದ ಬಿಲಾಸ್‌ಪುರ ದಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದಾರೆ. ಈ ಯೋಜನೆಯಿಂದಾಗಿ ಜನರು ತಮಗೆ ಅಗತ್ಯ ವಿರುವ ಸಾಮಗ್ರಿಯನ್ನು ಖರೀದಿಸಲು ಸಾಧ್ಯವಾಗುತ್ತದೆ. ಇದರಿಂದ ಉತ್ಪಾದಕತೆಯೂ ಹೆಚ್ಚು ತ್ತದೆ. 2014ರಲ್ಲಿ ದೊಡ್ಡ ದೊಡ್ಡ ಭರವಸೆಗಳನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದರು. ಆದರೆ ಯಾವುದೂ ಈಡೇರಿಕೆಯಾಗಲಿಲ್ಲ. ಬದಲಿಗೆ ಬಡವರಿಂದ ಹಣವನ್ನು ಪಡೆದು ಕೆಲವೇ ಉದ್ಯಮಿಗಳಿಗೆ ಕೊಟ್ಟರು ಎಂದು ರಾಹುಲ್‌ ಆರೋಪಿಸಿದ್ದಾರೆ. ಇನ್ನು ಬಿಹಾರದ ಸುಪೌಲ್‌ನಲ್ಲಿ ಮಾತನಾಡಿದ ರಾಹುಲ್‌, ಚೌಕಿದಾರನನ್ನು ಕೆಲಸದಿಂದ ತೆಗೆದು ಹಾಕಲು ಜನರು ನಿರ್ಧರಿಸಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.