ದೇಶದ ಸುರಕ್ಷತೆ-ವಿಕಾಸ ಪರಿಗಣಿಸಿ ಮತ ನೀಡಿ


Team Udayavani, Apr 21, 2019, 11:27 AM IST

hub-2

ಹುಬ್ಬಳ್ಳಿ: ದೇಶದಲ್ಲಿ ಕಳೆದ 5 ವರ್ಷಗಳಲ್ಲಿ ರಾಷ್ಟ್ರೀಯ ಸುರಕ್ಷತೆ, ದೇಶದ ವಿಕಾಸ ಹಾಗೂ ಜನರ ಕಲ್ಯಾಣವನ್ನು ಪರಿಗಣಿಸಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಹೇಳಿದರು.

ಗೋಕುಲ ಗಾರ್ಡನ್‌ನಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಮಹಾನಗರ ಜಿಲ್ಲಾ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 2008ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ 166 ಜನರು ಜೀವ ಕಳೆದುಕೊಂಡರು. ಆದರೆ ಆಗ ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಲಿಲ್ಲ. ಆದರೆ ಪುಲ್ವಾಮಾದಲ್ಲಿ ಉಗ್ರರು ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದಾಗ ಸರ್ಜಿಕಲ್ ಸ್ಟ್ರೆ ೖಕ್‌ ಮೂಲಕ ಪ್ರತ್ಯುತ್ತರ ನೀಡಿದ್ದು ಪ್ರಧಾನಿ ಮೋದಿ. ಅಂತಾರಾಷ್ಟ್ರೀಯ ಸಮುದಾಯ ಪಾಕಿಸ್ತಾನದ ಮೇಲೆ ಒತ್ತಡ ಹೇರುವಂತೆ ಮಾಡಲಾಯಿತು ಎಂದರು.

ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ನಮ್ಮ ಸೈನಿಕರು ದಾಳಿ ನಡೆಸಿದ್ದನ್ನು ಜಗತ್ತಿನ ಬಹುತೇಕ ರಾಷ್ಟ್ರಗಳು ಶ್ಲಾಘಿಸಿವೆ. ಮೋದಿಯವರ ಜನಪರ ಯೋಜನೆಗಳನ್ನು ತಿಳಿದುಕೊಂಡ ಹಲವು ಇಸ್ಲಾಂ ದೇಶಗಳು ಪ್ರಧಾನಿ ಮೋದಿ ಅವರಿಗೆ ಉನ್ನತ ನಾಗರಿಕ ಸನ್ಮಾನ ಮಾಡಿವೆ ಎಂದು ಹೇಳಿದರು.

ಪಾಕಿಸ್ತಾನದ ವಿರೋಧದ ಹೊರತಾಗಿಯೂ ಇಸ್ಲಾಮಿಕ್‌ ರಾಷ್ಟ್ರಗಳ ಸಂಘಟನೆ (ಐಒಸಿ) ಶೃಂಗಸಭೆಯಲ್ಲಿ ಭಾರತ ಪಾಲ್ಗೊಳ್ಳಲು ಅವಕಾಶ ನೀಡಿತು. ಪಾಕಿಸ್ತಾನವೇ ಸಭೆಯಲ್ಲಿ ಪಾಲ್ಗೊಳ್ಳದೆ ಗೈರು ಉಳಿಯುವ ಸ್ಥಿತಿ ಬಂದೊದಗಿತು. ಭಾರತದ ಬಗ್ಗೆ ಇಸ್ಲಾಂ ದೇಶಗಳ ಮನೋಭಾವ ಬಿಂಬಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಹಿಂದುಳಿದ ಜಾತಿ, ಹಿಂದುಳಿದ ಜನಾಂಗದ ಮೀಸಲಾತಿಗೆ ಧಕ್ಕೆಯಾಗದಂತೆ ಸವರ್ಣೀಯರಲ್ಲಿನ ಬಡವರಿಗೆ ಶೇ.10 ಮೀಸಲಾತಿ ನೀಡಲಾಗಿದೆ. ಹಜ್‌ ಯಾತ್ರೆಗೆ ತೆರಳುವವರಿಗೆ ಸಹಾಯ ಧನವನ್ನು 2 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಮುದ್ರಾ ಯೋಜನೆಯಲ್ಲಿ 17 ಕೋಟಿ 16 ಲಕ್ಷ ಜನರಿಗೆ ಸಾಲ ಸೌಲಭ್ಯ ನೀಡಿ ಸ್ವ ಉದ್ಯೋಗ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ ಮತ್ತೂಮ್ಮೆ ಸಂಸದರಾಗಬೇಕು ಹಾಗೂ ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು. ಪ್ರಹ್ಲಾದ ಜೋಶಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕಾರ್ಯ ಕೈಗೊಂಡಿದ್ದಾರೆ. ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷೀr್ರಯ ವಿಮಾನ ನಿಲ್ದಾಣವನ್ನಾಗಿಸಲು ಪ್ರಯತ್ನಿಸಿದ್ದಾರೆ. ಹಲವು ಹೊಸ ರೈಲುಗಳ ಸೇವೆ ಆರಂಭಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.

ಅಭ್ಯರ್ಥಿ ಪ್ರಹ್ಲಾದ ಜೋಶಿ ಪ್ರಾಸ್ತಾವಿಕ ಮಾತನಾಡಿ, ರಾಜ್ಯದ ಸಂಸದರಲ್ಲಿ ಕ್ರಿಯಾಶೀಲವಾಗಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಂಸದರಲ್ಲಿ ನಾನು ಅಗ್ರ ಸ್ಥಾನದಲ್ಲಿರುವುದಕ್ಕೆ ಸುಷ್ಮಾ ಸ್ವರಾಜ್‌ ಅವರ ಪ್ರೋತ್ಸಾಹವೇ ಕಾರಣ. ಅವರನ್ನು ನೋಡಿ ನಾನು ಸಂಸತ್‌ನಲ್ಲಿ ವಿಷಯ ಚರ್ಚೆ ಮಾಡುವುದನ್ನು ಕಲಿತುಕೊಂಡಿದ್ದೇನೆ. ಅವರಿಗೆ ನಾನು ಋಣಿಯಾಗಿದ್ದೇನೆ ಎಂದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ನಾಗೇಶ ಕಲಬುರ್ಗಿ ಇದ್ದರು.

ಸುಷ್ಮಾಗೆ ಅಭಿನಂದನೆ

ಪಾಕಿಸ್ತಾನದ ಯುವತಿಯನ್ನು ಮದುವೆಯಾಗಿ, ಪತ್ನಿಯನ್ನು ಭಾರತಕ್ಕೆ ಕರೆಸಿಕೊಳ್ಳಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರ ನೆರವು ಪಡೆದ ಹುಬ್ಬಳ್ಳಿಯವರಾದ ಡೇನಿಯಲ್ ಕಾರ್ಯಕ್ರಮದ ನಂತರ ಸಚಿವೆಗೆ ಹೂಗುಚ್ಛ ನೀಡಿ ಕೃತಜ್ಞತೆ ಸಲ್ಲಿಸಿದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.