ಬಹಿರಂಗ ಪ್ರಚಾರಕ್ಕೆ ಇಂದೇ ಕೊನೆ ದಿನ
Team Udayavani, Apr 21, 2019, 11:58 AM IST
ಧಾರವಾಡ: ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ ಪ್ರಚಾರ ರವಿವಾರ (ಏ.21) ಸಂಜೆ 6:00 ಗಂಟೆಗೆ ಅಂತ್ಯಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಬಹಿರಂಗ ಪ್ರಚಾರ ಅಂತ್ಯಗೊಂಡ ಬಳಿಕ ವಿವಿಧೆಡೆಗಳಿಂದ ಆಗಮಿಸಿರುವ ರಾಜಕೀಯ ಕಾರ್ಯಕರ್ತರು, ಕ್ಷೇತ್ರದ ಮತದಾರರಲ್ಲದವರು ಧಾರವಾಡ ಕ್ಷೇತ್ರದಲ್ಲಿ ಇರುವಂತಿಲ್ಲ. ಕೂಡಲೇ ಅಂತಹವರು ಮತಕ್ಷೇತ್ರದಿಂದ ನಿರ್ಗಮಿಸಬೇಕು. ಬೇರೆ ಬೇರೆ ಕ್ಷೇತ್ರದಿಂದ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ರಾಜಕೀಯ ವ್ಯಕ್ತಿಗಳು, ಇತರರು ಜಿಲ್ಲೆಯ ವಿವಿಧ ಲಾಡ್ಜ್, ಫಾರಂಹೌಸ್, ಹೋಟೆಲ್ ಮತ್ತು ಇತರ ಸ್ಥಳಗಳಲ್ಲಿ ತಂಗಿರುವ ಸಾಧ್ಯತೆಗಳಿದ್ದು, ಅಂತಹವರು ಕೂಡಲೇ ಅಲ್ಲಿಂದ ನಿರ್ಗಮಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅಭ್ಯರ್ಥಿಗಳು/ಏಜೆಂಟರಿಗೆ ಸೂಚನೆ: ಏ.23ರಂದು ಯಾವುದೇ ಪಕ್ಷ, ಅಭ್ಯರ್ಥಿಗಳು, ಏಜೆಂಟರು ಅಥವಾ ಅಭ್ಯರ್ಥಿಗಳ ಪರ ಮತದಾರರನ್ನು ಮತಗಟ್ಟೆಗಳಿಗೆ ಕರೆದುಕೊಂಡು ಬರಲು-ಹೋಗಲು ವಾಹನದ ವ್ಯವಸ್ಥೆ ಮಾಡುವಂತಿಲ್ಲ. ಅಲ್ಲದೆ ಉಪಾಹಾರ ಅಥವಾ ಊಟದ ವ್ಯವಸ್ಥೆ ಮಾಡಬಾರದೆಂದು ಸೂಚಿಸಿದ್ದಾರೆ.
ಮತಗಟ್ಟೆ ಏಜೆಂಟರು ಆದಷ್ಟು ನಿಗದಿತ ಸಮಯದೊಳಗೆ ಮತಗಟ್ಟೆಗಳಿಗೆ ಹಾಜರಾಗಬೇಕು. ಬೆಳಿಗ್ಗೆ 6:00 ಗಂಟೆಗೆ ಮತಗಟ್ಟೆಗಳಲ್ಲಿ ಸಿಬ್ಬಂದಿಗಳು ಅಣಕು ಮತದಾನ (ಮಾಕ್ ಪೋಲಿಂಗ್) ನಡೆಸುವರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಏಜೆಂಟರು ಹಾಜರಿರಬೇಕು. ಮತಗಟ್ಟೆಗಳಲ್ಲಿ ಏಜೆಂಟರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕು. ಡಿ-ಮಸ್ಟರಿಂಗ್ ಕೇಂದ್ರದಿಂದ ಭದ್ರತಾ ಕೊಠಡಿಗೆ ಇವಿಎಂಗಳನ್ನು ಸಾಗಿಸುವಾಗ ಅಭ್ಯರ್ಥಿಗಳು ಕೂಡ ಜತೆಯಲ್ಲಿ ಬರಲು ಅವಕಾಶವಿದ್ದು, ಮತದಾನಕ್ಕೆ ಉಪಯೋಗಿಸಿದ ಇವಿಎಂ ಗಳನ್ನು ಭದ್ರತಾ ಕೊಠಡಿಯಲ್ಲಿಡುವಾಗ, ಅಭ್ಯರ್ಥಿಗಳು ಹಾಜರಿದ್ದು, ಕೊಠಡಿಗಳನ್ನು ಸೀಲ್ ಮಾಡುವಾಗ ತಮ್ಮ ಮೊಹರು ಮಾಡಬಹುದಾಗಿದೆ. ಅಭ್ಯರ್ಥಿಗಳು ಅಥವಾ ಅವರ ನಿಯೋಜಕರು ಭದ್ರತಾ ಕೊಠಡಿಗಳ ಬಳಿ ಮತ ಎಣಿಕೆಯವರೆಗೆ ಇರಬಹುದಾಗಿದೆ ಎಂದು ಹೇಳಿದ್ದಾರೆ.
ಲಾಡ್ಜ್ ಹೋಟೆಲ್ಗಳಿಗೆ ಸೂಚನೆ : ರಾಜ್ಯದ ಎರಡನೇ ಹಂತದಲ್ಲಿ ಧಾರವಾಡ ಸೇರಿದಂತೆ ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಅಂದು ಸಾರ್ವತ್ರಿಕ ರಜೆ ಘೋಷಣೆಯಾಗಿರುತ್ತದೆ. ಹೀಗಾಗಿ ಮತದಾರರು ಮತದಾನ ಮಾಡದೆ ಪ್ರವಾಸ ಕೈಗೊಳ್ಳಬಾರದು. ಇದರಿಂದ ಶೇಕಡಾವಾರು ಮತದಾನ ಕಡಿಮೆಯಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಹೋಟೆಲ್ಗಳು ಅಥವಾ ಲಾಡ್ಜ್ ನವರು ಕೊಠಡಿ ಕೋರಿ ಬರುವ ಪ್ರವಾಸಿಗರಿಗೆ ಹಾಗೂ ಇತರೆಯವರಿಗೆ ಕೊಠಡಿ ಕಾಯ್ದಿರಿಸುವ ಮೊದಲು ಅವರ ಎಪಿಕ್ ಕಾರ್ಡ್ ಹಾಗೂ ವಿಳಾಸ ಪರಿಶೀಲಿಸಬೇಕು. ಈ ವೇಳೆ ಮತದಾರರು ಚುನಾವಣೆ ನಡೆಯುವ ಕ್ಷೇತ್ರಗಳ ಪ್ರವಾಸಿಗರೆ ಅಥವಾ ಚುನಾವಣೆ ಇಲ್ಲದ ಕ್ಷೇತ್ರದ ಪ್ರವಾಸಿಗರೆ ಎಂಬುದನ್ನು ತಿಳಿದು ಚುನಾವಣೆ ಇಲ್ಲದ ಜಿಲ್ಲೆಯ ಪ್ರವಾಸಿಗರಿಗೆ ಆದ್ಯತೆ ನೀಡಿ, ಕೊಠಡಿ ಕಾಯ್ದಿರಿಸುವ ಮೂಲಕ ಲೋಕಸಭಾ ಚುನಾವಣೆಯ ಮತದಾನದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡುವಂತೆ ಕೋರಲಾಗಿದೆ.
ಎಲ್ಲ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಚುನಾವಣಾ ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಚುನಾವಣೆಗಳನ್ನು ಮುಕ್ತ-ಶಾಂತ ರೀತಿಯಿಂದ ಕೈಗೊಳ್ಳಲು ಸಹಕರಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
• ಮತಗಟ್ಟೆಗಳಲ್ಲಿ ಏಜೆಂಟರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕು
• ಮತಗಟ್ಟೆಗಳಿಗೆ ಹೋಗಲು-ಬರಲು ವಾಹನ ವ್ಯವಸ್ಥೆ ಮಾಡುವಂತಿಲ್ಲ
• ಉಪಾಹಾರ-ಊಟದ ವ್ಯವಸ್ಥೆಯನ್ನೂ ಮಾಡುವಂತಿಲ್ಲ
• ಕ್ಷೇತ್ರದ ಮತದಾರರಲ್ಲದವರು ಕೂಡಲೇ ಕ್ಷೇತ್ರದಿಂದ ನಿರ್ಗಮಿಸಬೇಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್