ವಿದ್ಯಾರ್ಥಿನಿ ಸಾವು: ಭುಗಿಲೆದ್ದ ಆಕ್ರೋಶ

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಡಿವೈಎಸ್ಪಿ ಹರಿಬಾಬು ನೇತೃತ್ವದಲ್ಲಿ ತನಿಖಾ ತಂಡ

Team Udayavani, Apr 21, 2019, 1:00 PM IST

Udayavani Kannada Newspaper

ರಾಯಚೂರು: ನಗರದ ನವೋದಯ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಸಾವಿನ ಪ್ರಕರಣ ದಿನೇದಿನೆ ಕಾವು ಪಡೆಯುತ್ತಿದ್ದು, ಕಿಡಿಗೇಡಿಗಳ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ತಮ್ಮ ಮಗಳದ್ದು ಆತ್ಮಹತ್ಯೆಯಲ್ಲ. ವ್ಯವಸ್ಥಿತ ಕೊಲೆ ಎಂದು ಆಕೆಯ ಪೋಷಕರು ಹೇಳಿದ್ದು, ಪ್ರಕರಣದ ವಿಶೇಷ ತನಿಖೆ ನಡೆಸಲು ಡಿವೈಎಸ್ಪಿ ಹರಿಬಾಬು ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ.

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳೂ ನಡೆದಿವೆ. ಈ ಪ್ರಕರಣ ಈಗಾಗಲೇ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ. ನಾವು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಕೆಲವರು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಆದರೆ, ತಪ್ಪು ಯಾರೇ ಮಾಡಿರಲಿ ಅವರಿಗೆ ತಕ್ಕ ಶಿಕ್ಷೆಯಂತೂ ಆಗಲಿದೆ. ಯಾರನ್ನು ರಕ್ಷಿಸುವ ಉದ್ದೇಶವಿಲ್ಲ ಎಂದು ಬಳ್ಳಾರಿ ಡಿಐಜಿ ಎಂ.ನಂಜುಂಡಸ್ವಾಮಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ
ಆರಂಭದಲ್ಲಿ ಅವರ ಪಾಲಕರು ನೀಡಿದ ಮಾಹಿತಿ ಮೇರೆಗೆ ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಅವರು ಅತ್ಯಾಚಾರ ಮತ್ತು ಕೊಲೆ ಎಂದು ಹೇಳಿದ್ದರಿಂದ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿ ಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು ಹೇಳಿದರು.

ಡಿವೈಎಸ್ಪಿ ಹರಿಬಾಬು ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಲಭ್ಯ ಮಾಹಿತಿ ಆಧರಿಸಿ ತನಿಖೆ ಕೈಗೊಳ್ಳಲಾಗುತ್ತಿದೆ. ಇನ್ನೂ ಶವಪರೀಕ್ಷೆ ವರದಿ ಬಂದಿಲ್ಲ. ಅದು ಬಂದ ಮೇಲೆ ನಿಖರ ಕಾರಣ ತಿಳಿದು ಬರಲಿದೆ. ತಕ್ಷಣಕ್ಕೆ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧವೂ ವಿದ್ಯಾರ್ಥಿನಿ ಪಾಲಕರು ಆರೋಪಿಸಿದ್ದಾರೆ. ಈ ಕುರಿತು ಸಂಬಂಧಿಸಿದ ಪೊಲೀಸರ ವಿಚಾರಣೆ ಮಾಡಲಾಗುವುದು ಎಂದು ತಿಳಿಸಿದರು.

ವ್ಯವಸ್ಥಿತ ಕೊಲೆ: ಮಗಳದ್ದು ಆತ್ಮಹತ್ಯೆಯಲ್ಲ. ಅದು ವ್ಯವಸ್ಥಿತ ಕೊಲೆ. ಅಲ್ಲದೇ, ಆರೋಪಿ ಸುದರ್ಶನ ಯಾದವ್‌ ಜತೆಗೆ ಇನ್ನೂ ಹಲವರು ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಕೂಡಲೇ ಅವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ವಿದ್ಯಾರ್ಥಿನಿ ಪಾಲಕರು ಒತ್ತಾಯಿಸಿದರು.

ಆರೋಪಿ ಸುದರ್ಶನ್‌ ಯಾದವ್‌ ಕಿರಿಕಿರಿ ಮಾಡುತ್ತಿದ್ದಾನೆ ಎಂದು ಆತನ ಸಹೋದರಿಗೂ ನಮ್ಮ ಮಗಳು ತಿಳಿಸಿದ್ದಳು. ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಮಗಳ ಬಗ್ಗೆ ಇಲ್ಲ ಸಲ್ಲದ ವಿಷಯ ಹರಡಲಾಗುತ್ತಿದೆ. ದಯವಿಟ್ಟು ಅಂಥ ಪೋಸ್ಟ್‌ಗಳನ್ನು ಹಾಕದಂತೆ ಮನವಿ ಮಾಡಿದ ಅವರು, ಇಂಟರ್ನಲ್‌ ಪರೀಕ್ಷೆಗೆ ತೆರಳಿದ ಮಗಳು ಪುನಃ ಬರಲೇ ಇಲ್ಲ. ಸಂಜೆಯೇ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದರೆ ದೂರು ಸ್ವೀಕರಿಸಲಿಲ್ಲ. ಮರುದಿನ ಬೆಳಗ್ಗೆ ಅವರೇ ಕರೆದು ನಮ್ಮ ಮಗಳ ಮೊಬೈಲ್‌ ಮತ್ತು ಬೈಕ್‌ ಕೀಲಿ ನೀಡಿದ್ದಾರೆ ಎಂದು ವಿವರಿಸಿದರು.

ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಗುರು ವಿಶ್ವಕರ್ಮ
ಮಾತನಾಡಿ, ಮಗಳು ಕಾಣೆಯಾದ ಕೂಡಲೇ ಹೆತ್ತವರು ದೂರು ನೀಡಿದರೆ ಪೊಲೀಸರು ಪರಿಗಣಸಿಲ್ಲ. ವಿನಾಕಾರಣ ಕಾಲಹರಣ ಮಾಡಿದ್ದಾರೆ. ಬಂಧಿ ತ ಆರೋಪಿ ಆರು ತಿಂಗಳಿನಿಂದ ಮೃತ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ. ವಿದ್ಯಾರ್ಥಿನಿ ತಂದೆ ಬುದ್ಧಿವಾದ ಹೇಳಿದ್ದರೂ ಕೇಳಿಲ್ಲ. ಆರೋಪಿ ಮೇಲೆ ಸಂಶಯ ಹೆಚ್ಚಾಗಿದೆ. ಘಟನೆ ಖಂಡಿಸಿ ವಿಶ್ವಕರ್ಮ ಸಮಾಜ ಹಾಗೂ ವಿವಿಧ ಸಂಘಟನೆಗಳಿಂದ ಏ. 25ರಂದು ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತದೆ. ಯುವತಿ ಶವ ಪತ್ತೆಯಾದ ಸ್ಥಳದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.

ಹರ್ಷಿಕಾ-ಭುವನ್‌ ಆಕ್ರೋಶ: ರಾಯಚೂರು ಶಾಂತಿಗೆ ಹೆಸರಾದ ನಾಡು. ಇಂಥ ಸ್ಥಳದಲ್ಲಿ ಕ್ರೂರ ಕೃತ್ಯ ಎಸಗಿರುವುದು ನಿಜಕ್ಕೂ ನಂಬಲಸಾಧ್ಯ. ಮೃತ ಯುವತಿ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಮಾನವೀಯತೆ ಮರೆತು ಇಂಥ ಹೇಯ ಕೃತ್ಯ ಎಸಗಿದವರಿಗೆ ಶಿಕ್ಷೆ ಆಗಲೇಬೇಕು ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದರು.

ನಟ ಭುವನ್‌ ಮಾತನಾಡಿ, ಇದೊಂದು ಕ್ರೂರವಾದ
ಕೃತ್ಯ. ಹೆಣ್ಣು ಮಗಳಿಗೆ ಆಗಿರುವ ಅನ್ಯಾಯ ಮರೆ ಆಗಬಾರದು. ಜಿಲ್ಲಾಡಳಿತ, ಸರ್ಕಾರದ ಮೇಲೆ ಒತ್ತಡ
ಹಾಕಲೆಂದೇ ನಾವು ಇಲ್ಲಿಗೆ ಬಂದಿದ್ದೇವೆ ಎಂದರು.

ಟಾಪ್ ನ್ಯೂಸ್

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.