ದೇಶ ಲೂಟಿ ಮಾಡಿದ ಕಾಂಗ್ರೆಸ್
Team Udayavani, Apr 21, 2019, 4:13 PM IST
ದೋಟಿಹಾಳ: ಸಮೀಪದ ಶಿರಗುಂಪಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಪರವಾಗಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಚುನಾವಣೆ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಕಳೆದ ಐದು ವರ್ಷಗಳ ಅವಧಿಯಲ್ಲಿ ಮೋದಿ ಅವರು ಯಾವುದೇ ಹಗರಣ ಮಾಡಿದೇ ದೇಶವನ್ನು ಸುಭದ್ರವಾಗಿ ನಡೆಸಿದ್ದಾರೆ. ಮತ್ತೂಮ್ಮೆ ಮೋದಿ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕಾದರೆ ಸಂಗಣ್ಣ ಕರಡಿ ಅವರಿಗೆ ಮತಹಾಕಬೇಕು ಎಂದು ಮನವಿ ಮಾಡಿದರು. ಜಿಪಂ ಸದಸ್ಯ ಕೆ. ಮಹೇಶ ಮಾತನಾಡಿ, ದೇಶದಲ್ಲಿ ಸದ್ಯ ಮೋದಿ ಅಲೆ ಇದೆ.
ಈ ಚುನಾವಣೆ ದೇಶದ ಸ್ವಾಭಿಮಾನದ ಚುನಾವಣೆಯಾಗಿದೆ. ವಿಶ್ವವೇ ಭಾತರದ ಕಡೆಗೆ ನೋಡುವಂತೆ ಪ್ರಧಾನಿ ನರೇಂದ್ರ ಮೋದಿ ಆಡಳಿತ ನಡೆಸಿದ್ದಾರೆ. ದೇಶವನ್ನು 60 ವರ್ಷ ಆಳಿದ ಕಾಂಗ್ರೆಸ್ ಸೈನಿಕರಿಗೆ ಬುಲೆಟ್ ಪ್ರುಫ್ ಜಾಕೆಟ್ ಕೊಡಿಸಲು ಆಗಿರಲಿಲ್ಲ, ಇವರು ಮೋದಿ ಬಗ್ಗೆ ಮಾತನಾಡುತ್ತಿದಾರೆ. ಇಂದು ದೇಶದಲ್ಲಿ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವ ಎದೆಗಾರಿಕೆ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ. ದೇಶದಲ್ಲಿ ಮತ್ತೂಮ್ಮೆ ಮೋದಿ ಸರಕಾರ ಬರಲು ಸಂಗಣ್ಣ ಕರಡಿ ಅವರಿಗೆ ಮತ ನೀಡಬೇಕೆಂದರು. ತಾಪಂ ಸದಸ್ಯ ಮಹಾಂತೇಶ ಬಾದಾಮಿ ಮಾತನಾಡಿದರು. ಕುಷ್ಟಗಿ ಸುರೇಶ ಮಂಗಳೂರು, ಶೇಖರಗೌಡ ಮಾಲಿಪಾಟೀಲ್ ಬಳೂಟಗಿ, ಸಿದ್ದಪ್ಪ ಮೇಟಿ, ಮಹೇಶ ಕೋನಸಾಗರ, ಶಿರಗುಂಪಿ-ಬಳೂಟಗಿ ಗ್ರಾಮಗಳ ಜನರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ