ಕಾರ್ಖಾನೆಗಳನ್ನು ಬಂದ್‌ ಮಾಡಿದ್ದಕ್ಕೆ ಖರ್ಗೆಗೆ ಬೆಂಬಲಿಸಬೇಕೆ?


Team Udayavani, Apr 21, 2019, 4:39 PM IST

Udayavani Kannada Newspaper

ಕಲಬುರಗಿ: ಕಳೆದ ಐದು ದಶಕಗಳಿಂದ ಅಧಿಕಾರದಲ್ಲಿದ್ದರೂ ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡದಿರುವ ಹಾಗೂ ಇರುವ ಕಾರ್ಖಾನೆಗಳನ್ನು ಮುಚ್ಚಿಸಿದ ಸಲುವಾಗಿ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ ಹಾಕಬೇಕೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಲೋಕಸಭಾ ಕ್ಷೇತ್ರದ ಉಸ್ತುವಾರಿ ಎನ್‌. ರವಿಕುಮಾರ ಪ್ರಶ್ನಿಸಿದರು.

ಎಂಎಸ್‌ಕೆ ಮಿಲ್‌, ಕುರುಕುಂಟಾ ಸಿಮೆಂಟ್‌ ಕಾರ್ಖಾನೆಗಳು ಬಂದ್‌ ಆದವು. ಇದರಿಂದ ಸಾವಿರಾರು ಕಾರ್ಮಿಕರು ಬೀದಿಗೆ ಬಿದ್ದರು. ಹೊಸ ಕಾರ್ಖಾನೆ ಸ್ಥಾಪನೆ ಮಾಡದಿರುವ ಕುರಿತು ಒತ್ತಟ್ಟಿಗಿರಲಿ. ಇದ್ದ ಕಾರ್ಖಾನೆಗಳನ್ನು ಉಳಿಸಿಕೊಳ್ಳಲಿಕ್ಕಾಗಲಿಲ್ಲ. ಇದೇನಾ? ಖರ್ಗೆ ಅಭಿವೃದ್ಧಿ. ಹಿರಿಯ ನಾಯಕರನ್ನು ಹೊರಗಿಟ್ಟು ಮಗನನ್ನು ಮಂತ್ರಿ ಮಾಡಿದ್ದಕ್ಕೆ, ಕಾರ್ಖಾನೆಗಳು ಬಂದ್‌ ಆಗಿದ್ದಕ್ಕೆ ಅಭಿವೃದ್ಧಿ ಸೂಚ್ಯಂಕದಲ್ಲಿ ಕೊನೆ ಸ್ಥಾನದಲ್ಲಿ ನಿಲ್ಲಿಸಿದ್ದಕ್ಕೆ ಖರ್ಗೆ ಅವರನ್ನು ಬೆಂಬಲಿಸಬೇಕೆ? ಎಂದು ಪ್ರಶ್ನಿಸಿದರು.

ಅಭಿವೃದ್ಧಿ ಮಾಡಲಾಗಿದೆ ಎಂದು ಪ್ರಚಾರಸಭೆಗಳಲ್ಲಿ ಕಾಂಗ್ರೆಸ್‌ ಹೇಳುತ್ತಾ ಬರುತ್ತಿದೆ. ಒಂದು ವೇಳೆ ಈ ಭಾಗದ ಬಗ್ಗೆ ಕಳಕಳಿ ಹೊಂದಿ ಅಭಿವೃದ್ಧಿ ಮಾಡಿದ್ದೇ ಆದರೆ ಏಕೆ? ಈ ಭಾಗ ಹಿಂದುಳಿಯಿತು. ಇದೆಲ್ಲ ಮತದಾರರಿಗೆ ಮನವರಿಕೆ ಆಗಿದ್ದರಿಂದ ಒಂದೊಂದು ಸಮುದಾಯ ದೂರಾಗಿ ಮತಬ್ಯಾಂಕ್‌ಗೆ ಹೊಡೆತ ಬಿದ್ದಿದ್ದರಿಂದ ನಿದ್ರೆಯಿಲ್ಲದೇ ಕ್ಷೇತ್ರ ಸುತ್ತು ಹಾಕುತ್ತಿದ್ದಾರೆ. ಮಠ ಮಂದಿರಗಳಿಗೆ ಸುತ್ತು ಹಾಕುತ್ತಿದ್ದಾರೆ. ಸಮುದಾಯಗಳ ಸಮಾವೇಶ ನಡೆಸುತ್ತಿದ್ದಾರೆ. ಖರ್ಗೆ ಜೀವನದಲ್ಲಿ ಇಷ್ಟೊಂದು ಗಂಭೀರವಾಗಿ ಒಮ್ಮೆಯೂ ಚುನಾವಣೆ ಎದುರಿಸಿಲ್ಲ ಎಂದರು.

ವೀರಶೈವ ಲಿಂಗಾಯತ ಸಮುದಾಯ ಬಗ್ಗೆ ಒಮ್ಮೆಯೂ ತಲೆಕೆಡಿಸಿಕೊಂಡಿಲ್ಲ. ಧರ್ಮದ ಹೋರಾಟ ನಡೆದಾಗ ಒಂದು ವಾಕ್ಯದ ಹೇಳಿಕೆ ನೀಡಿಲ್ಲ. ಚುನಾವಣೆ ಬಂದಾಗ ಸಮಾವೇಶದ ನೆನಪಾಗುತ್ತದೆಯೇ? ಅದೇ ರೀತಿ ಇತರ ಸಮುದಾಯಗಳ ಸಭೆ ನಡೆಸಿದ್ದಾರೆ. ಇದನ್ನೆಲ್ಲ ಮತದಾರರು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು,
ತಕ್ಕಪಾಠ ಕಲಿಸಲು ತುದಿಗಾಲ ಮೇಲೆ ನಿಂತಿದ್ದು, 23ರಂದು ಸೂಕ್ತ ನಿರ್ಧಾರ ಕೈಗೊಂಡು ಸೋಲಿನ ರುಚಿ ತೋರಿಸುತ್ತಾರೆ ಎಂದರು.

ಕೋಲಿ ಸಮಾಜದ ಎಸ್‌ಟಿಗೆ ಸೇರಿಸಬೇಕೆಂಬ ಬೇಡಿಕೆ ಇಂದು ನಿನ್ನೆಯದಲ್ಲ. 10 ವರ್ಷಗಳ ಕಾಲ ಇದ್ದ ಯುಪಿಎ ಸರ್ಕಾರದಲ್ಲೇಕೆ ಕೋಲಿ ಸಮಾಜ ಎಸ್‌ಟಿಗೆ
ಸೇರಿಸಲಿಲ್ಲ. ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್‌
ಸರ್ಕಾರ ಇತ್ತು. ಆವಾಗ ಮಲ್ಲಿಕಾರ್ಜುನ ಖರ್ಗೆ ಮಲಗಿಕೊಂಡಿದ್ದರೇ? ಈಗ ಎಸ್‌ಟಿಗೆ ಸೇರಿಸಲು
ಪ್ರಯತ್ನಿಸಲಾಗುವುದು ಎಂದು ಹೇಳುತ್ತಿದ್ದಾರೆ. ಕೋಲಿ ಸಮಾಜದ ಚಿಂಚನಸೂರ ಹೊರಗಡೆ ಹಾಕುವಾಗ ಸಮಾಜ ನೆನಪಿಗೆ ಬರಲಿಲ್ಲವೇ? ಸೋಲಿನ ಭಯದಿಂದ ವಿವಿಧ ಸಮುದಾಯ ಸಮಾವೇಶಗಳನ್ನು ಮಾಡುತ್ತಿದ್ದಾರೆ. ಸೋಲಿನ ಭಯದಿಂದ ಎಧ್ದೋ ಬಿಧ್ದೋ ಓಡಾಡುತ್ತಿದ್ದಾರೆ. ಇದಕ್ಕೆಲ್ಲ ಮತದಾರ ತಕ್ಕ ಉತ್ತರ ನೀಡುತ್ತಾನೆ.
ಎನ್‌. ರವಿಕುಮಾರ,
ಬಿಜೆಪಿ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.