ವೀರಶೈವ ಧರ್ಮದಿಂದ ಸಮಾನತೆ ಸಂದೇಶ


Team Udayavani, Apr 22, 2019, 3:00 AM IST

veerashi

ತಿ.ನರಸೀಪುರ: ವೀರಶೈವ ಧರ್ಮ ಜಗತ್ತಿಗೆ ಸಮಾನತೆ ಸಂದೇಶ ನೀಡಿದೆ ಎಂದು ಮುಡುಕುತೊರೆ ಶ್ರೀ ತೋಪಿನ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ವೀರಶೈವ ಸಮಾಜ ಸೇವಾ ಸಮಿತಿ ಹಮ್ಮಿಕೊಂಡಿದ್ದ ಜಗದ್ಗುರು ಆದಿ ರೇಣುಕಾಚಾರ್ಯರ ಯುಗಮಾನೋತ್ಸವ, ಉಜ್ಜುಯನಿ ಜಗದ್ಗುರುಗಳ ಮೆರವಣಿಗೆ ಮತ್ತು ಮಹದೇವಸ್ವಾಮಿ ಶ್ರೀಗಳ ಸಂಸ್ಮರಣಾ ಮಹೋತ್ಸವ, ರೇಣುಕ ಸಭಾ ಭವನದ ವಾರ್ಷಿಕೋತ್ಸವ ಮತ್ತು ಗುರುರಕ್ಷೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಹುಟ್ಟಿನಿಂದ ಸಾವಿನ ತನಕ ದಶಕರ್ಮಗಳಲ್ಲಿ ಪೂಜೆ ಪುರಸ್ಕಾರ ಮಾಡುವ ಅನುಕೂಲ ಕಲ್ಪಿಸುವ ಧರ್ಮ ವೀರಶೈವ ಧರ್ಮ. ಇದು ಸಮಾನತೆಯ ಸಂಕೇತ. ಇಂದು ಅನೇಕ ಜನರು ಧರ್ಮದ ಚೌಕಟ್ಟನ್ನು ಬಿಟ್ಟು ಹೋಗುತ್ತಿದ್ದಾರೆ. ಧರ್ಮದ ಚೌಕಟ್ಟು ಬಿಟ್ಟು ಹೊರಟವರಿಗೆ ಒಳಿತು ಸಾಧ್ಯವಿಲ್ಲ. ಶಿವ ನಿರಾಕಾರ ಎಂಬುದು ನಿಮಗೆ ತಿಳಿದಿದೆ. ಇಷ್ಟಲಿಂಗ ಪೂಜೆ ಮಾಡಿ ಗುರುವಿನ ಮಂತ್ರ ಪಠಿಸಿದರೆ ನಮ್ಮಲ್ಲಿ ಜಾnನೋದಯವಾಗುತ್ತದೆ ಎಂದು ಹೇಳಿದರು.

ಶ್ರೀಮದ್‌ ಉಜ್ಜುಯನಿ ಸಧರ್ಮ ಸಿಂಹಾಸನ ಮಠದ ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವಾತ್ಪದರು ಹಾಗೂ ವಾಟಾಳು ಸೂರ್ಯ ಸಿಂಹಾಸನ ಮಠದ ಸಿದ್ಧಲಿಂಗಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಮೈಸೂರು ಮರಿಮಲ್ಲಪ್ಪ ಕಾಲೇಜಿನ ಪ್ರಾಂಶುಪಾಲ ಎಸ್‌. ಪ್ರಫ‌ುಲ್ಲ ಚಂದ್ರಕುಮಾರ್‌ ಉದ್ಘಾಟಿಸಿ ಮಾತನಾಡಿದರು. ತ್ರಿಯಿಂಬಕ ಮಠದ ವೀರೇಶ ಶಿವಚಾರ್ಯ ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನಾ ಉಜ್ಜುಯನಿ ಸದ್ಧರ್ಮ ಸಿಂಹಾಸನ ಮಠದ ಸಿದ್ಧಲಿಂಗರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿಗಳ ಪಾದ ಪೂಜೆ ನೆರವೇರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಲಾ ತಂಡಗಳ ಜತೆ ಸ್ವಾಮೀಜಿಗಳ ಮೆರವಣಿಗೆ ನಡೆಸಲಾಯಿತು.

ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ತೊಟ್ಟವಾಡಿ ಮಹದೇವಸ್ವಾಮಿ, ತಾಯೂರು ವಿಠಲಮೂರ್ತಿ, ಸಮಾಜ ಸೇವಕ ಗುರುರಾಜ, ಎಸ್‌. ಶ್ವೇತಾ, ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಎಸ್‌ ಶಾಂತರಾಜು, ಉಪಾಧ್ಯಕ್ಷ ಎನ್‌. ಶಿವಪ್ರಸಾದ್‌, ಕಾರ್ಯದರ್ಶಿ ಸಿ. ವೀರೇಶ್‌, ಖಜಾಂಚಿ ಎನ್‌. ಮೋಹನ್‌, ಸಂಚಾಲಕ ಎಂ. ವೀರೇಶ್‌, ಅಂಗಡಿ ಶೇಖರ್‌, ನಾಗೇಶ, ಸಿದ್ಧಲಿಂಗಮೂರ್ತಿ, ನಾಗಪ್ಪ, ಸಿದ್ಧಲಿಂಗಸ್ವಾಮಿ, ವಕೀಲ ಕೆ.ಬಿ. ಪರಮೇಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.