ಭದ್ರತಾ ಪ್ರಣಾಳಿಕೆ ಪ್ರಕಟಿಸಿದ ಕಾಂಗ್ರೆಸ್
Team Udayavani, Apr 22, 2019, 6:05 AM IST
ಹೊಸದಿಲ್ಲಿ: ದೇಶದ ಭದ್ರತಾ ಪ್ರಣಾಳಿಕೆಯನ್ನು ರವಿವಾರ ಕಾಂಗ್ರೆಸ್ ಪ್ರಕಟಿಸಿತಾದರೂ, ಇದು ಚುನಾವಣೆಯಲ್ಲಿ ಪ್ರಮುಖ ವಿಷಯವಲ್ಲ ಎಂದೂ ಹೇಳಿಕೊಂಡಿದೆ. ಸರ್ಜಿಕಲ್ ದಾಳಿ ನೇತೃತ್ವ ವಹಿಸಿದ್ದ ನಿವೃತ್ತ ಲೆ. ಜ ಡಿ.ಎಸ್.ಹೂಡಾ ನೇತೃತ್ವದಲ್ಲಿ ಈ ಪ್ರಣಾಳಿಕೆಯನ್ನು ಕಾಂಗ್ರೆಸ್ ರೂಪಿಸಿದೆ.
ಇದನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಮತ್ತು ಜೈರಾಮ್ ರಮೇಶ್, ಚುನಾವಣೆಯಲ್ಲಿ ಪ್ರಮುಖ ವಿಷಯವೇ ನಿರುದ್ಯೋಗ, ರೈತರ ಸಂಕಷ್ಟಗಳಾಗಿವೆ. ಅನಂತರದಲ್ಲಿ ಸಮಾಜದಲ್ಲಿನ ದಲಿತರು, ಮಹಿಳೆಯರು ಹಾಗೂ ಇತರ ಸಮುದಾಯದ ಜನರ ಸುರಕ್ಷತೆಯ ವಿಚಾರವಿರುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಾರೆ ಹಾಗೂ ಚುನಾವಣಾ ರ್ಯಾಲಿಗಳಲ್ಲಿ ಮಾತನಾಡುತ್ತಾರೆ.
ದೇಶದ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಮ್ಮ ಯೋಜನೆಗಳನ್ನು ಈ ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ ಎಂದು ಚಿದಂಬರಂ ಹೇಳಿದ್ದಾರೆ. ನಿವೃತ್ತ ಲೆ| ಜ| ಹೂಡಾ ಮಾತನಾಡಿ, ದೇಶದ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲು ಅಗತ್ಯ ಅನುದಾನವನ್ನು ಒದಗಿಸಬೇಕಿದ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ