ಬಹಿರಂಗ ಪ್ರಚಾರಕ್ಕೆ ತೆರೆ: ಜನತೆ ನಿರಾಳ


Team Udayavani, Apr 22, 2019, 11:53 AM IST

bag-
ಬಾಗಲಕೋಟೆ: 17ನೇ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ರವಿವಾರ ಸಂಜೆ ತೆರೆ ಬಿದ್ದಿದೆ. ಹದಿನೈದು ದಿನಗಳಿಂದ ರಾಜಕೀಯ ನಾಯಕರ, ಜಾತಿ-ಧರ್ಮ ಹಾಗೂ ವ್ಯಕ್ತಿಗತ ಟೀಕೆ-ನಿಂದನೆಯ ಮಾತು ಕೇಳಿ ಬೇಸರಿಸಿದ್ದ ಬಹುತೇಕರು, ನಿರಾಳರಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ನಿಜ, ಕಳೆದ ಮಾರ್ಚ್‌ 28ರಿಂದ ಜಿಲ್ಲೆಯಲ್ಲಿ ಬಹುತೇಕ ಪ್ರಚಾರ ನಡೆದಿತ್ತು. ಮೊದಲ ವಾರ ಆಯಾ ತಾಲೂಕು ಕೇಂದ್ರಗಳಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರ, ಪ್ರಮುಖರ ಸಭೆ ನಡೆಸುತ್ತಿದ್ದ ಪಕ್ಷದ ನಾಯಕರು, ನಾಮಪತ್ರ ಸಲ್ಲಿಸುವ ಕೊನೆ ದಿನ ಮುಗಿದ ಬಳಿಕ ಬಹಿರಂಗ ಪ್ರಚಾರಕ್ಕೆ ಅತಿಹೆಚ್ಚು ಆದ್ಯತೆ ಕೊಟ್ಟರು.
ಪ್ರಚಾರಕ್ಕೆ ತಮ್ಮ ತಮ್ಮ ಪಕ್ಷಗಳ ಹಲವು ನಾಯಕರು ಬಂದು ಹೋದರೂ,ಯಾರೂ ಸ್ಥಳೀಯ ಗಂಭೀರ ಸಮಸ್ಯೆಗಳ ಬಗ್ಗೆ ಚಕಾರವೆತ್ತಲಿಲ್ಲ. ಕಾಂಗ್ರೆಸ್‌ನವರು ಮೋದಿ, ಶಾ, ಯಡಿಯೂರಪ್ಪ, ಅಭ್ಯರ್ಥಿ ಗದ್ದಿಗೌಡರ ವಿರುದ್ಧ ಮಾತನಾಡಿದರೆ, ಬಿಜೆಪಿಯವರು, ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ರಾಹುಲ್‌ ಗಾಂಧಿ ಬಗ್ಗೆ ಮಾತನಾಡಿದರು. ಯಾವ ನಾಯಕರ ಬಾಯಲ್ಲೂ, ಬಾಗಲಕೋಟೆ ಕ್ಷೇತ್ರದಲ್ಲಿ ಸಮಸ್ಯೆಗಳೇನು, ಅದಕ್ಕೆ ನಾವು ಪರಿಹಾರ ಹೇಗೆ ಕಂಡುಕೊಳ್ಳುತ್ತೇವೆ, ಗೆದ್ದರೆ ಮುಂದಿನ ಐದು ವರ್ಷ ನಮ್ಮ ಆಡಳಿತ ಹೇಗಿರುತ್ತದೆ ಎಂದು ಹೇಳಲಿಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 14 ಜನ ಅಭ್ಯರ್ಥಿಗಳು ಕಣದಲ್ಲಿದ್ದರೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿ ನಡುವೆ ನೇರ ಪೈಪೋಟಿ ನಡೆದಿದೆ.
ಈ ಅಭ್ಯರ್ಥಿಗಳು ತಮ್ಮ ಸಾಧನೆ, ಮುಂದಿನ ಕಾರ್ಯವೈಖ್ಯರಿ ಬಗ್ಗೆ ಜನರಿಗೆ ನೇರವಾಗಿ ಹೇಳುವ ಪ್ರಯತ್ನ ಮಾಡಲಿಲ್ಲ. ಕಾಂಗ್ರೆಸ್‌ ಅಭ್ಯರ್ಥಿ ವೀಣಾ, ಜಿಪಂ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಮಾಡಿದ ಕಾರ್ಯಗಳು ಹೇಳಿಕೊಂಡರೆ, ಬಿಜೆಪಿ ಅಭ್ಯರ್ಥಿ ಗದ್ದಿಗೌಡರ, 15 ವರ್ಷ ಜಿಲ್ಲೆಯಲ್ಲಿ ಏನು ಮಾಡಿದೆ ಎಂದು ಕೆಲವೊಮ್ಮೆ ಹೇಳಿಕೊಂಡರು. ವಿಶೇಷ ಅಂದರೆ, ಕಾಂಗ್ರೆಸ್‌ನವರು ಮಾಧ್ಯಮಗಳ ಬಳಕೆಯಲ್ಲಿ ಹೆಚ್ಚು ಮುಂದಿದ್ದರೆ, ಬಿಜೆಪಿಯ ಅಭ್ಯರ್ಥಿ ಗದ್ದಿಗೌಡರ, ಒಂದೇ ಒಂದು ಸುದ್ದಿಗೋಷ್ಠಿಯನ್ನೂ ನಡೆಸದೇ, ಇಡೀ ಬಹಿರಂಗ ಪ್ರಚಾರ ಮುಗಿಸಿದರು ಎಂಬ ಮಾತು ಕೇಳಿಬಂತು.
ಈ ಬಾರಿ, ನೇರಾನೇರ ಪೈಪೋಟಿ ಎದುರಿಸುತ್ತಿರುವ ಅಭ್ಯರ್ಥಿಗಳು ಲಿಂಗಾಯತ ಸಮುದಾಯಕ್ಕೆ ಸೇರಿದ್ದರಿಂದ, ಇಬ್ಬರೂ ಅಭ್ಯರ್ಥಿಗಳ ಉಪ ಪಂಗಡಗಳ ಹೆಸರಿನಲ್ಲಿ ಜಾತಿ ರಾಜಕೀಯ ಜೋರಾಗಿ ನಡೆದಿದೆ. ಒಟ್ಟಾರೆ, ಪ್ರಸ್ತುತ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಮುಗಿದರೆ ಸಾಕಪ್ಪಾ ಎಂಬ ಮನಸ್ಥಿತಿಗೆ ಅಭ್ಯರ್ಥಿಗಳೂ ಬಂದಂತಿತ್ತು. ಕಾರಣ, ಬಿಸಿಲಿನ ಝಳಕ್ಕೆ ಬೆಂಡಾಗಿದ್ದರು. ಕಾರ್ಯಕರ್ತರೂ, ನಿತ್ಯ ಪ್ರಚಾರ, ಓಡಾಟ, ಜನ ಸೇರಿಸಲು ಹೈರಾಣಾಗಿದ್ದಾರೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.