ಪುಸ್ತಕ ಕೊಂಡು ಓದುವ ಅಭಿರುಚಿ ಬೆಳೆಸಿ


Team Udayavani, Apr 23, 2019, 6:30 AM IST

pustaka

ಮೈಮೇಲೆ ಹರಕು ಬಟ್ಟೆ ಇದ್ದರೂ ಚಿಂತೆಯಿಲ್ಲ, ಕೈಯಲ್ಲೊಂದು ಪುಸ್ತಕವಿರಲಿ ಎಂಬ ಮಾತಿನಂತೆ ಪುಸ್ತಕಗಳ ಓದಿನಿಂದ ಮನುಷ್ಯನಿಗೆ ಜ್ಞಾನ ಸಂಪಾದನೆ ಜತೆಗೆ ಆತನ ಅಸ್ತಿತ್ವದ ಬಗ್ಗೆ ಅರಿವಾಗುತ್ತದೆ. ಪ್ರಸ್ತುತವಾಗಿ ಪುಸ್ತಕ ಓದುವವರ ಸಂಖ್ಯೆ ವಿರಳವಾಗುತ್ತಿದೆ ಎಂಬ ಅಪವಾದ ನಡುವೆ ಇಂದಿನ ಪುಸ್ತಕ ದಿನವೂ ನಮ್ಮೆಲ್ಲರಿಗೂ ಓದಿನ ಅಭಿರುಚಿ ಮೂಡಿಸುವ ದಿನವಾಗಲಿ. ಪುಸ್ತಕ ಓದು, ಮನುಷ್ಯನ ಹವ್ಯಾಸವಷ್ಟೇ ಅಲ್ಲ, ದೈನಂದಿನ ಕಾಯಕವಾಗಲಿ ಎಂಬ ಸದಾಶಯ.

ದೇಶ ಸುತ್ತಿನೋಡು, ಕೋಶ ಓದಿ ನೋಡು ಎನ್ನುವುದು ಪ್ರಚಲಿತವಾದ ಮಾತು. ಜ್ಞಾನ ಸಂಪಾದನೆಗೆ ಅಂದಿನಿಂದ ಇಂದಿನವರೆಗೂ ಪುಸ್ತಕವೇ ಮೂಲವಾಗಿದೆ. ಇ-ಬುಕ್‌ ಇರುವ ಈ ಕಾಲದಲ್ಲೂ ಪುಸ್ತಕಗಳು ತನ್ನ ಮೌಲ್ಯಗಳನ್ನು ಕಳೆದುಕೊಂಡಿಲ್ಲ. ಪುಸ್ತಕ, ಲೇಖಕರು ಮತ್ತು ಪ್ರಕಾಶನಗಳು ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು 1995ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ಯುನೆಸ್ಕೋದ ಸಾಮಾನ್ಯ ಸಭೆಯಲ್ಲಿ ಎಪ್ರಿಲ್‌ 23ರಂದು ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. ಈ ನಿಟ್ಟಿನಲ್ಲಿ ಪ್ರತಿ ವರ್ಷ ವಿಶ್ವಾದ್ಯಂತ ಯುನೆಸ್ಕೋ ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಆಚರಿಸಲಾಗುತ್ತದೆ.

ಆಚರಣೆಯ ಉದ್ದೇಶ
ಒಬ್ಬ ವ್ಯಕ್ತಿಯ ಬೌದ್ಧಿಕ ಪ್ರಬುದ್ಧತೆ ಬರುವುದೇ ಪುಸ್ತಕ ಓದುವುದರಿಂದ, ಓದು ನಮ್ಮ ಮನೋವೈಶಾಲ್ಯವನ್ನು ಹೆಚ್ಚಿಸುವ ಬಹುದೊಡ್ಡ ಸಾಧನ. ಈ ಆಧುನಿಕ ಕಾಲದಲ್ಲಿ ಇಂದಿನ ಯುವ ಜನತೆಯಲ್ಲಿ ಪುಸ್ತಕ ಪ್ರೇಮ ಕೊರತೆ ಬಹಳಷ್ಟಿದೆ. ಯುವ ಜನತೆಯಲ್ಲಿ ಪುಸ್ತಕ ಕುರಿತಾದ ಮಹತ್ವ ಹೆಚ್ಚಿಸಲು, ಪುಸ್ತಕ ಮಾರಾಟವನ್ನು ಹೆಚ್ಚಿಸುವ ಸಲುವಾಗಿ, ಪುಸ್ತಕದ ಉಳಿವಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.

ಕೃತಿಸ್ವಾಮ್ಯ ದಿನ
ಪುಸ್ತಕಗಳ ರಕ್ಷಕನಾಗಿ ಕೃತಿಸ್ವಾಮ್ಯ ಕೆಲಸ ಮಾಡುತ್ತದೆ. ಲೇಖಕರಿಗೆ ಪುಸ್ತಕಗಳೇ ಆಸ್ತಿ . ಈ ಆಸ್ತಿಯನ್ನು ಕದಿಯದಂತೆ ನೋಡುಕೊಳ್ಳುತ್ತದೆ ಕೃತಿಸ್ವಾಮ್ಯ ಕಾಯ್ದೆ. ಭಾರತ ಸಹಿತ ವಿಶ್ವ ದ ಅನೇಕ ರಾಷ್ಟ್ರಗಳಲ್ಲಿ ಕೃತಿ ಸ್ವಾಮ್ಯ ಕಾಯ್ದೆ ಇದೆ.

ಪುಸ್ತಕದ ಜತೆ ಸಂಗೀತ, ನಾಟಕ, ಸಿನೆಮಾ, ಛಾಯಾ ಚಿತ್ರ, ತಂತ್ರಜ್ಞಾನಕ್ಕೂ ಕೃತಿಸ್ವಾಮ್ಯ ಅನ್ವಯವಾಗುತ್ತದೆ. ಕೃತಿ ಸ್ವಾಮ್ಯದ ಅಪರಾಧಿ ಎಂದು ಸಾಬೀತಾದರೆ ದಂಡ ಮತ್ತ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.
ಪುಸ್ತಕ ಓದುವ ಹವ್ಯಾಸ ಇರುವವರೂ ಎಲ್ಲಿ ಬೇಕಾದರೂ ಸಂತೋಷವಾಗಿರುತ್ತಾರೆ ಎನ್ನುವುದು ಮಹಾತ್ಮಾ ಗಾಂಧೀಜಿ ಅವರ ಮಾತು.

ಓದು ನಮ್ಮಲ್ಲಿ ತಾಳ್ಮೆಯನ್ನು ಬೆಳೆಸುತ್ತದೆ. ಹಿಂದಿನ ಮತ್ತು ಭವಿಷ್ಯದ ಪೀಳಿಗೆ ನಡುವೆ ತಲೆಮಾರುಗಳ ಮತ್ತು ಸಂಸ್ಕೃತಿಗಳ ನಡುವಿನ ಸೇತುವೆಯಾಗಿ ಪುಸ್ತಕ ನಿಲ್ಲುತ್ತದೆ. ಪುಸ್ತಕಗಳ ಮಾರಾಟ ಸಂಖ್ಯೆ ಕಡಿಮೆಯಾಗಿರಬಹುದು ಆದರೆ ಅವುಗಳ ಪ್ರಕಟನೆಗಳು ಸ್ಥಿರವಾಗಿವೆ. ಇದು ಪುಸ್ತಕಗಳ ಜನಪ್ರಿಯತೆಗೆ ಸಾಕ್ಷಿ.

ಆಚರಣೆ ಹೇಗೆ ?
ವಿಶ್ವ ಪುಸ್ತಕ ದಿನವೂ ಪುಸ್ತಕ ಪ್ರೇಮಿಗಳು ಸಂಭ್ರಮಿಸುವ ದಿನ. ಹಾಗಾಗಿ ಪುಸ್ತಕ ಓದುವ ಹವ್ಯಾಸವಿರುವವರು, ಲೇಖಕರು, ಪ್ರಕಾಶರು ಮತ್ತು ಗ್ರಂಥಾಲಯಗಳಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಪುಸ್ತಕ ಮಾರಾಟ, ಗೋಷ್ಠಿಗಳು, ಉಚಿತ ಪುಸ್ತಕ ವಿತರಣೆ, ಕಥೆ, ಕವನ ಸ್ಪರ್ಧೆಗಳನ್ನು ನಡೆಸುವುದು, ಲೇಖಕರೊಂದಿಗೆ ಸಂವಾದಗಳನ್ನು ನಡೆಸಲಾಗುತ್ತದೆ. ಕಥೆಗಳನ್ನು ಹಂಚಿಕೊಳ್ಳಿ (ಶೇರ್‌ ಎ ಸ್ಟೋರಿ ) ಎಂಬ ಥೀಮ್‌ ಸಂದೇಶದೊಂದಿಗೆ ಈ ವರ್ಷದ ವಿಶ್ವ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನವನ್ನು ವಿಶ್ವದ 100ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ.

-  ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.