ಅಂಬಿ ಹುಟ್ಟುಹಬ್ಬಕ್ಕೆ “ಅಂತ’
38 ವರ್ಷ ಬಳಿಕ ಹೊಸ ತಂತ್ರಜ್ಞಾನ ಸ್ಪರ್ಶ
Team Udayavani, Apr 23, 2019, 3:27 AM IST
ಅಂಬರೀಶ್ ಈಗಿಲ್ಲ. ಆದರೆ, ಅಂಬರೀಶ್ ಅಭಿಮಾನಿಗಳಿಗೆ ಮಾತ್ರ ತಮ್ಮ ಪ್ರೀತಿಯ ಹೀರೋ ಇಲ್ಲ ಎಂಬ ನೋವು ಎಂದಿಗೂ ಕಾಡಿಲ್ಲ. ಅವರ ಚಿತ್ರಗಳ ಮೂಲಕ ಸದಾ ಕಣ್ತುಂಬಿಕೊಳ್ಳುತ್ತಿರುವ ಅಭಿಮಾನಿಗಳಿಗೆ ಇಲ್ಲೊಂದು ಸಂತಸದ ಸುದ್ದಿ ಇದೆ. ಅಂಬರೀಶ್ ಅವರಿಲ್ಲದ ಮೊದಲ ಹುಟ್ಟುಹಬ್ಬ ಮೇ.29 ರಂದು ಆಚರಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಅಂಬರೀಶ್ ಅಭಿನಯದ “ಅಂತ’ ಚಿತ್ರವನ್ನು ಮರು ಬಿಡುಗಡೆ ಮಾಡಲು ನಿರ್ಮಾಪಕ ವೇಣುಗೋಪಾಲ್ ನಿರ್ಧರಿಸಿದ್ದಾರೆ. ಹೌದು, ಕಳೆದ 38 ವರ್ಷಗಳ ಹಿಂದೆ ತೆರೆಗೆ ಬಂದಿದ್ದ “ಅಂತ’ 80 ರ ದಶಕದಲ್ಲಿ ಭರ್ಜರಿ ಯಶಸ್ಸು ಪಡೆದಿತ್ತು.
ಆ ಕಾಲದಲ್ಲೇ ಹೊಸ ದಾಖಲೆ ಬರೆದಿದ್ದ “ಅಂತ’ ಇಂದಿಗೂ ಎವರ್ಗ್ರೀನ್ ಸಿನಿಮಾ ಎಂದೇ ಜನಪ್ರಿಯಗೊಂಡಿದೆ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರವನ್ನು ಎಚ್.ಎನ್.ಮಾರುತಿ ಮತ್ತು ವೇಣುಗೋಪಾಲ್ ನಿರ್ಮಾಣ ಮಾಡಿದ್ದರು.
ಹೆಚ್.ಕೆ.ಅನಂತರಾವ್ ಅವರ ಕಾದಂಬರಿ ಆಧರಿಸಿದ ಚಿತ್ರದಲ್ಲಿ ಅಂಬರೀಶ್ ಇನ್ಸ್ಪೆಕ್ಟರ್ ಸುಶೀಲ್ಕುಮಾರ್ ಪಾತ್ರದ ಮೂಲಕ ಗಮನಸೆಳೆದಿದ್ದರು. ಅಷ್ಟೇ ಅಲ್ಲ, ಆ ಚಿತ್ರದಲ್ಲಿ ಅವರು ಕನ್ವರ್ಲಾಲ್ ಎಂಬ ನೆಗೆಟಿವ್ ಪಾತ್ರವನ್ನೂ ನಿರ್ವಹಿಸಿ, ಮನೆಮಾತಾಗಿದ್ದರು.
ಆ ಚಿತ್ರದಲ್ಲಿ ಅವರು ನಿರ್ವಹಿಸಿದ್ದ ಕನ್ವರ್ಲಾಲ್ ಪಾತ್ರ ಇನ್ನೊಂದು ಚಿತ್ರ ನಿರ್ಮಾಣಕ್ಕೂ ಕಾರಣವಾಗಿತ್ತು. ಅಂಬರೀಶ್ ಅವರ ಸಿನಿಮಾ ವೃತ್ತಿ ಬದುಕಿನಲ್ಲಿ “ಅಂತ’ ಅದ್ಭುತ ಸಿನಿಮಾ. ಈಗ ಮತ್ತೂಮ್ಮೆ ಆ ಚಿತ್ರ ಹೊಸ ತಂತ್ರಜ್ಞಾನದೊಂದಿಗೆ ಪ್ರೇಕ್ಷಕರ ಮುಂದೆ ಬರಲಿದೆ.
ಮೇ.29 ರಂದು ಅಂಬರೀಶ್ ಅವರ ಹುಟ್ಟುಹಬ್ಬ. ಆ ಕಾರಣಕ್ಕೆ ನಿರ್ಮಾಪಕರು “ಅಂತ’ ಚಿತ್ರಕ್ಕೆ ತಂತ್ರಜ್ಞಾನದ ಹೊಸ ಸ್ಪರ್ಶ ನೀಡಿ ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರಕ್ಕೆ ಜಿ.ಕೆ. ವೆಂಕಟೇಶ್ ಅವರ ಸಂಗೀತವಿತ್ತು. ಹಾಡುಗಳು ಇಂದಿಗೂ ಜನರಲ್ಲಿ ಅಚ್ಚಳಿಯದೆ ಉಳಿದಿವೆ.
ಅಂದಹಾಗೆ, ಹೊಸ ರೂಪ ಪಡೆದ ಪ್ರೇಕ್ಷಕರ ಎದುರು ಬರುತ್ತಿರುವ “ಅಂತ’ ಚಿತ್ರ ರಾಜ್ಯಾದ್ಯಂತ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. “ಅಂತ’ ಚಿತ್ರದಲ್ಲಿ ಅಂಬರೀಶ್ ಜೊತೆ ಲಕ್ಷ್ಮೀ, ಜಯಮಾಲಾ, ಲತಾ, ಪಂಡರೀಬಾಯಿ, ವಜ್ರಮುನಿ, ಪ್ರಭಾಕರ್, ಸುಂದರ ಕೃಷ್ಣ ಅರಸ್, ಶಕ್ತಿ ಪ್ರಸಾದ್, ಲಕ್ಷ್ಮಣ್, ಸಿ.ಸೀತಾರಾಮ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್ ಕಾರ್ಯಕಾರಿ ರಾಜಧಾನಿ
Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು
Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ