ದೇವಕಿ ಮೊಗದಲ್ಲಿ ನಗು

ಕನ್ನಡ - ತಮಿಳು ಭಾಷೆಯಲ್ಲಿ ತೆರೆಗೆ

Team Udayavani, Apr 23, 2019, 3:31 AM IST

Devaki-Priyanka

ಪ್ರಿಯಾಂಕ ಉಪೇಂದ್ರ ಅಭಿನಯದ “ದೇವಕಿ’ ಚಿತ್ರ ಇಷ್ಟರಲ್ಲೇ ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿದೆ. ಈ ಚಿತ್ರದಲ್ಲಿ ಸಾಕಷ್ಟು ವಿಶೇಷತೆಗಳಿವೆ. ಮೊದಲನೆಯದಾಗಿ ಪ್ರಿಯಾಂಕ ಉಪೇಂದ್ರ ಅವರ ಮಗಳು ಐಶ್ವರ್ಯಾ ಈ ಚಿತ್ರದಲ್ಲಿ ನಟಿಸಿದ್ದಾರೆ. ಅದರಲ್ಲೂ ಪ್ರಿಯಾಂಕ ಅವರ ಮಗಳಾಗಿಯೇ ಕಾಣಿಸಿಕೊಂಡಿರುವುದು ವಿಶೇಷ.

ಇನ್ನು, ಇಡೀ ಚಿತ್ರ ಪ್ರಿಯಾಂಕ ಅವರ ತವರೂರಾದ ಕೊಲ್ಕತ್ತಾದಲ್ಲೇ ಚಿತ್ರೀಕರಣವಾಗಿದೆ. ಇದರೊಂದಿಗೆ ಹೊಸ ಸುದ್ದಿಯೆಂದರೆ, ಮಹಿಳಾ ಪ್ರಧಾನ ಚಿತ್ರವೊಂದಕ್ಕೆ ಬಿಡುಗಡೆ ಮೊದಲೇ ವಿತರಣೆಯ ಹಕ್ಕು ಪಡೆಯಲು ಮುಂದಾಗಿರುವುದು. ಹೌದು, “ದೇವಕಿ’ ಚಿತ್ರದ ವಿತರಣೆ ಹಕ್ಕನ್ನು ಕಾರ್ತಿಕ್‌ಗೌಡ (ಕೆಜಿಎಫ್) ಅವರು ಪಡೆದಿದ್ದಾರೆ.

ಸಹಜವಾಗಿಯೇ ಇದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ ಎಂಬುದು ನಿರ್ದೇಶಕ ಲೋಹಿತ್‌ ಮಾತು. “ದೇವಕಿ’ ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿದೆ. ಈಗಾಗಲೇ ಕನ್ನಡದಲ್ಲಿ ಬಿಡುಗಡೆಯಾದ ಟೀಸರ್‌ಗೆ ಸಖತ್‌ ಮೆಚ್ಚುಗೆಯೂ ಸಿಕ್ಕಿದೆ. ಟೀಸರ್‌ ನೋಡಿದ ಕಾರ್ತಿಕ್‌ ಗೌಡ (ಕೆಜಿಎಫ್) ಅವರು ಕರ್ನಾಟಕದಲ್ಲಿ ವಿತರಣೆ ಮಾಡಲು ಮುಂದಾಗಿದ್ದಾರೆ.

ಒಂದು ಸಿನಿಮಾ ಮಾಡಿ ರಿಲೀಸ್‌ಗೂ ಸಾಕಷ್ಟು ಓಡಾಟ ನಡೆಸಬೇಕಾದ ಪರಿಸ್ಥಿತಿ ಇರುವಾಗ, “ದೇವಕಿ’ ಚಿತ್ರವನ್ನು ಸ್ವತಃ ಕಾರ್ತಿಕ್‌ ಗೌಡ ಅವರೇ, ಖರ್ಚು ವಹಿಸಿಕೊಂಡು ವಿತರಣೆ ಮಾಡಲು ಮುಂದಾಗಿದ್ದಾರೆ ಎಂಬುದು ನಿರ್ದೇಶಕ ಲೋಹಿತ್‌ ಹೇಳಿಕೆ. ನಿರ್ಮಾಪಕದ್ವಯರಾದ ರವೀಶ್‌ ಹಾಗೂ ಅಕ್ಷಯ್‌ ಇವರಿಬ್ಬರಿಗೂ ಇದು ಮೊದಲ ನಿರ್ಮಾಣದ ಚಿತ್ರ.

ಒಂದು ಸಿನಿಮಾ ಬಿಡುಗಡೆಗೆ ಮುನ್ನವೇ, ಅದರಲ್ಲೂ ಮಹಿಳಾ ಪ್ರಧಾನ ಚಿತ್ರಕ್ಕೆ ಇಂಥದ್ದೊಂದು ವಿತರಣೆ ಅವಕಾಶ ಸಿಕ್ಕಿರುವುದಕ್ಕೆ ಸಹಜವಾಗಿಯೇ ನಿರ್ಮಾಪಕರಿಗೂ ಅದು ಇನ್ನಷ್ಟು ಧೈರ್ಯ ಕೊಟ್ಟಿದೆ. ಚಿತ್ರ ಇದೀಗ ಹಿನ್ನೆಲೆ ಸಂಗೀತದ ಅಂತಿಮ ಕೆಲಸದಲ್ಲಿದೆ. ಈಗಾಗಲೇ “ದೇವಕಿ’ ಚಿತ್ರಕ್ಕೆ ಹಿಂದಿ ರೇಟ್ಸ್‌ ಕೂಡ ಕೇಳಲಾಗುತ್ತಿದೆ.

ಸೆನ್ಸಾರ್‌ಗೆ ಇನ್ನಷ್ಟೇ ಹೋಗಬೇಕಿದ್ದು, ಸೆನ್ಸಾರ್‌ ಬಳಿಕ ಆ ಬಗ್ಗೆ ಮಾತುಕತೆ ನಡೆಸಲಾಗುವುದು. ಎಲ್ಲವೂ ಅಂದುಕೊಂಡಂತೆ ನಡೆದರೆ ಮೇ ಅಂತ್ಯ ಇಲ್ಲವೇ ಜೂನ್‌ನಲ್ಲಿ “ದೇವಕಿ’ ಚಿತ್ರವನ್ನು ಬಿಡುಗಡೆ ಮಾಡಲಾಗುವುದು ಎಂದು ವಿವರ ಕೊಡುತ್ತಾರೆ ನಿರ್ದೇಶಕ ಲೋಹಿತ್‌.

ಚಿತ್ರದ ವಿಶೇಷ ಪಾತ್ರದಲ್ಲಿ ಕಿಶೋರ್‌, ಬಾಲಿವುಡ್‌ ನಟ ಸಂಜೀವ್‌ ಜೆಸ್ವಾಲ್‌ ಸೇರಿದಂತೆ ಬೆಂಗಾಲಿಯ ಬಹುತೇಕ ರಂಗಭೂಮಿ ಕಲಾವಿದರೂ ಸಹ ಚಿತ್ರದಲ್ಲಿ ನಟಿಸಿದ್ದಾರೆ. ಸುಮಾರು 32 ದಿನಗಳ ಕಾಲ ನಡೆದ ಚಿತ್ರೀಕರಣದಲ್ಲಿ ಬಹುತೇಕ ಭಾಗ ಕೊಲ್ಕತ್ತಾದಲ್ಲೇ ಚಿತ್ರೀಕರಿಸಲಾಗಿದೆ.

ಸಾಹಸ ನಿರ್ದೇಶಕ ರವಿವರ್ಮ ಅವರು, ರಾತ್ರಿ ವೇಳೆಯಲ್ಲೊಂದು ಅದ್ಧೂರಿ ವೆಚ್ಚದಲ್ಲಿ ಚೇಸಿಂಗ್‌ ದೃಶ್ಯವನ್ನು ಕಂಪೋಸ್‌ ಮಾಡಿದ್ದಾರೆ. ಉಳಿದಂತೆ ಚಿತ್ರಕ್ಕೆ ಎಚ್‌.ಸಿ.ವೇಣು ಅವರು ಛಾಯಾಗ್ರಾಹಕರು. ನೊಬಿನ್‌ ಪಾಲ್‌ ಅವರು ಸಂಗೀತ ನೀಡಿದ್ದಾರೆ. ರವಿಚಂದ್ರ ಅವರ ಸಂಕಲನವಿದೆ. ಬಹುತೇಕ “ಮಮ್ಮಿ’ ಟೀಮ್‌ ಇಲ್ಲಿ ಕೆಲಸ ಮಾಡಿದೆ ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.