ದೇವತೆಗಳ ಪುನರ್ ಪ್ರತಿಷ್ಠಾಪನೆ
Team Udayavani, Apr 23, 2019, 3:02 PM IST
ಹೊನ್ನಾವರ: ತಾಲೂಕಿನ ಕೆಳಗಿನ ಇಡಗುಂಜಿ, ಮಾಳ್ಕೋಡ ಕುಮಾರರಾಮ, ಜೈನ ಜಟಗೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠೆ ಹಾಗೂ ಶಿಖರ ಪ್ರತಿಷ್ಠಾ ಮಹೋತ್ಸವ ಏ.23 ರಿಂದ 25ರ ವರೆಗೆ ನಡೆಯಲಿದೆ. ಹಾಗೂ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಮಠಾಧಿಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ.
ಪುರಾತನ ಕಾಲದಿಂದಲೂ ಪ್ರಸಿದ್ಧವಾದ ದೇವಾಲಯವನ್ನು ವಾಸ್ತು ಪ್ರಕಾರ ನಿರ್ಮಿಸಲಾಗಿದೆ. ಶಿಲಾಮಯ ವಾಸ್ತು ಇರುವ ನೂತನ ದೇವಾಲಯವನ್ನು ವೇ. ಜಯರಾಮ ಅಡಿಗಳ ಅಧ್ವರ್ಯದಲ್ಲಿ ಏ.23 ರಿಂದ 25ರ ವರೆಗೆ ನೆರವೇರಿಸಲಾಗುತ್ತಿದೆ. ಏ.24 ರಂದು ಕ್ಷೇತ್ರಪಾಲ, ಜಟಗೇಶ್ವರ, ಚೌಡೇಶ್ವರಿ, ಬೀರ, ಬಾಲರಾಮ. ಕಾಳರಾಮ, ಯಕ್ಷಿ, ನಾಗ, ಕಾಳು ದೇವತೆಗಳ ಪುನರ್ ಪ್ರತಿಷ್ಠಾಪನಾ ಹಾಗೂ ಶಿಖರ ಪ್ರತಿಷ್ಠೆ, ತತ್ವನ್ಯಾಸ ಪ್ರತಿಷ್ಠಾ ಹವನ, ಶಕ್ತಿ-ತತ್ವ ಕಲಾ ಪ್ರಾಣ ಪ್ರತಿಷ್ಠಾ ನಿರೀಕ್ಷೆ ಇತ್ಯಾದಿ ನಡೆಯಲಿದೆ.
ಏ.25 ರಂದು ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವ್ವಾಮೀಜಿ ಪುರ ಪ್ರವೇಶ, ಪೂರ್ಣಾಹುತಿ, ಮಹಾಮಂಗಳಾರತಿ, ಸಾಮೂಹಿಕ ಸತ್ಯನಾರಾಯಣ ಕಲಶ ಪೂಜೆ, ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವ್ವಾಮೀಜಿಗಳ ಪಾದಪೂಜೆಯೊಂದಿಗೆ ಗುರುವಂದನಾ ಕಾರ್ಯಕ್ರಮ. ಗುರುಗಳ ಆಶೀರ್ವಚನ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 7ರಿಂದ ಮಕ್ಕಳ ಮನರಂಜನಾ ಕಾರ್ಯಕ್ರಮ, ರಾತ್ರಿ 9ರಿಂದ ಯಕ್ಷಗಾನ ನಡೆಯಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಪ್ರತಿದಿನವೂ ಆಗಮಿಸಿ ತನು-ಮನ-ಧನಗಳಿಂದ ಸಹಾಯ ಸಹಕಾರ ನೀಡಿ ದೇವರ ಹಾಗೂ ಗುರುಗಳ ಕೃಪೆಗೆ ಪಾತ್ರರಾಗಬೇಕಾಗಿ ಸಮಿತಿ ವಿನಂತಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ