ನೀರಿಗಾಗಿ ಬೀದಿಗಿಳಿದ ನಾರಿಯರು


Team Udayavani, Apr 24, 2019, 3:12 AM IST

neerigagi

ಚಿಂತಾಮಣಿ: ನಾಲ್ಕು ತಿಂಗಳುಗಳಿಂದ ಗ್ರಾಮದಲ್ಲಿ ಕುಡಿಯುವ ನೀರು ಇಲ್ಲವೆಂದು ಉಪ್ಪರಪೇಟೆ ಗ್ರಾಪಂ ವ್ಯಾಪ್ತಿಯ ಬೊಮ್ಮೆಕಲ್ಲು ಗ್ರಾಮದ ಮಹಿಳೆಯರು ಬೀದಿಗೀಳಿದು ಪ್ರತಿಭಟನೆ ಮಾಡಿದ ಘಟನೆ ಮಂಗಳವಾರ ನಡೆಯಿತು.

ಅಧಿಕಾರಿಗಳ ನಿರ್ಲಕ್ಷ್ಯ: ಗ್ರಾಮದಲ್ಲಿ ಕಳೆದ 4 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರಿಗಾಗಿ ಪರದಾಡುವಂತ ಪರಿಸ್ಥಿತಿ ಬಂದೊದಗಿದ್ದು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಪಂ ವತಿಯಿಂದ ಒಬ್ಬ ವ್ಯಕ್ತಿಗೆ ಒಂದು ದಿನಕ್ಕೆ 40 ಲೀ. ನೀರು ಸರಬರಾಜು ಮಾಡಬೇಕು. ಆದರೆ ಗ್ರಾಪಂ ವತಿಯಿಂದ ಕನಿಷ್ಟ 5 ಲೀ. ನೀರು ಸಹ ಸರಬರಾಜು ಮಾಡುತ್ತಿಲ್ಲ ಎಂದು ದೂರಿದರು.

ಟ್ಯಾಂಕರ್‌ ನೀರು ಸರಬರಾಜು ಇಲ್ಲ: ಕಳೆದ ನಾಲ್ಕು ತಿಂಗಳ ಹಿಂದೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿದ್ದರೂ ಈಗ ಅದು ಸಹ ಇಲ್ಲ. ನಲ್ಲಿಗಳಿಂದಲೂ ನೀರು ಬರುತ್ತಿಲ್ಲ. ನೀರಿಗಾಗಿ ಖಾಸಗಿ ಕೊಳವೆ ಬಾವಿಗಳ ಬಳಿ ಹೋದರೆ ಮಾಲೀಕರು ಮನಬಂದಂತೆ ಬೈದು ಕಳುಹಿಸುತ್ತಾರೆ. ಸಾರ್ವಜನಿಕ ಕೊಳವೆ ಬಾವಿಯಲ್ಲಿ ನಿತ್ಯ ಬಳಕೆಗೆ ಫ್ಲೋರೈಡ್‌ ಮಿಶ್ರಿತ ನೀರು ಬರುತ್ತಿತ್ತು. ಆದರೆ ಕಳೆದ ಒಂದು ತಿಂಗಳಿನಿಂದ ಆ ನೀರು ಸಹ ಇಲ್ಲ. ಕುಡಿಯಲು ಮತ್ತು ಬಳಕೆಗೆ ನೀರಿಲ್ಲದೇ ಪರದಾಡುವಂತಾಗಿದೆ ಎಂದು ಪ್ರತಿಭಟನಕಾರರು ಅಳಲು ತೋಡಿಕೊಂಡರು.

ಗ್ರಾಮಕ್ಕೆ ಪಿಡಿಒ ಭೇಟಿ, ಭರವಸೆ: ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಉಪ್ಪರಪೇಟೆ ಗ್ರಾಪಂ ಪಿಡಿಒ ಶ್ರೀನಾಥ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಶೀಘ್ರವೇ ನೀರಿನ ಸಮಸ್ಯೆ ನೀಗಿಸುತ್ತೆವೆ ಎಂದು ಭರವಸೆ ನೀಡಿದ ನಂತರ ಮಹಿಳೆಯರು ಪ್ರತಿಭಟನೆ ಕೈಬಿಟ್ಟರು.

500 ರೂ. ಕೊಟ್ಟರು ಟ್ಯಾಂಕರ್‌ ಬರುತ್ತಿಲ್ಲ: ಇನ್ನೂ ಈಕುರಿತು ಪಿಡಿಒ ಶ್ರೀನಾಥ್‌ ಅವರನ್ನು ಸಂಪರ್ಕಿಸಿದಾಗ, ಬೊಮ್ಮೆಕಲ್ಲು ಗ್ರಾಮದಲ್ಲಿನ ಕೊಳವೆ ಬಾವಿಗಳು ಬತ್ತಿ ಹೋಗಿವೆ. ಆದ್ದರಿಂದ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಬೇಕೆಂದರೆ ಒಂದು ಟ್ಯಾಂಕರ್‌ ನೀರಿಗೆ 600 ರಿಂದ 700 ರೂ. ಕೇಳುತ್ತಾರೆ ಆದರೆ ಸರ್ಕಾರದಿಂದ ನಮಗೆ ನೀಡುವುದು ಕೇವಲ 500 ರೂ. ಮಾತ್ರ. ಹಾಗಾಗಿ ಟ್ಯಾಂಕರ್‌ ನೀರು ಸರಬರಾಜು ಮಾಡಲು ಕಷ್ಟವಾಗಿದೆ ಎಂದರು.

ಬೊಮ್ಮೆಕಲ್ಲು ಗ್ರಾಮದಲ್ಲಿರುವ ಎರಡು ಕೊಳವೆ ಬಾವಿಗಳ ಪೈಕಿ ಒಂದರಲ್ಲಿ ಫ್ಲೋರೈಡ್‌ ನೀರು ಹೆಚ್ಚಾಗಿ ಬರುತ್ತಿರುವುದರಿಂದ ಬಳಕೆ ಸಾಧ್ಯವಾಗುತ್ತಿಲ್ಲ. ಶುದ್ಧೀಕರಣ ಮಾಡೋಣ ಎಂದರೆ ಶೇ.60 ರಷ್ಟು ನೀರು ಪೋಲಾಗುತ್ತದೆ. ಈ ಹಿನ್ನೆಲೆಯಲ್ಲಿ ನೀರು ಸರಬರಾಜು ನಿಲ್ಲಿಸಿದ್ದೇವೆ. ಉಳಿದ ಶುದ್ಧ ನೀರಿನ ಕೊಳವೆ ಬಾವಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ನೂತನ ಕೊಳವೆ ಬಾವಿ ಕೊರೆಸಬೇಕು, ಇಲ್ಲವಾದರೆ ಮಳೆ ಬರುವವರೆಗೂ ನೀರಿನ ಸಮಸ್ಯೆ ನೀಗಿಸಲು ಕಷ್ಟ.
-ಶ್ರೀನಾಥ, ಪಿಡಿಒ ಉಪ್ಪರಪೇಟೆ ಗ್ರಾಪಂ

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.