“ನಮ್ಮ ಗುರುನಿಷ್ಠೆ ನಮ್ಮನ್ನು ಸದಾ ಕಾಪಾಡುತ್ತದೆ’


Team Udayavani, Apr 24, 2019, 6:25 AM IST

gurugalu

ಕಾಸರಗೋಡು: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಶ್ರೀಮಜ್ಜಗದ್ಗುರು ಶಂಕರಾ ಚಾರ್ಯ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಆಶ್ರಯದಲ್ಲಿರುವ ಮುಳ್ಳೇರಿಯ ಹವ್ಯಕ ಮಂಡಲದ ಮಾಸಿಕ ಸಭೆಯು ಮಡಿಕೇರಿಯಲ್ಲಿ ಕೊಡಗು ಹವ್ಯಕ ವಲಯ ಕಾರ್ಯದರ್ಶಿ ಡಾ|ರಾಜಾರಾಮ ಭಟ್‌ ಅವರ ನಿವಾಸದಲ್ಲಿ ಜರಗಿತು.

ದೀಪಜ್ವಲನ, ಧ್ವಜಾರೋಹಣ, ಶಂಖನಾದ, ಗುರುವಂದನೆ, ಗೋಸ್ತುತಿಯೊಂದಿಗೆ ಸಭೆ ಪ್ರಾರಂಭವಾಯಿತು.

ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ಭಟ್‌ ಸರ್ಪಮಲೆಯವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಗತಸಭೆಯ ವರದಿ ನೀಡಿದರು. ವಲಯ ಪದಾಧಿಕಾರಿಗಳು ವಲಯ ವರದಿಗಳನ್ನಿತ್ತರು. ವಿಭಾಗ ಪ್ರಧಾನರು ಆಯಾ ವಿಭಾಗಗಳ ವರದಿ ನೀಡಿ ಮಾಹಿತಿಗಳನ್ನಿತ್ತರು. ಸಭೆಯಲ್ಲಿ ಶ್ರೀಮಠದ ಮಾರ್ಗದರ್ಶನದಲ್ಲಿ ಜರಗಿದ ವಿವಿಧ ಸಮಾರಂಭಗಳ ಕುರಿತು ಅವಲೋಕನೆ ಮಾಡಲಾಯಿತು.

ಶ್ರೀ ಮಠದ ಸಕ್ರಿಯ ಕಾರ್ಯಕರ್ತೆ, ಮಹಿಳಾ ಸಬಲೀಕರಣದತ್ತ ವಿಶೇಷ ಕಾರ್ಯಚಟುವಟಿಕೆ, ಸೀತಾಮಾತೆಯ ಆದರ್ಶಗಳನ್ನು ಪಾಲಿಸುತ್ತಾ ಸಾಮಾಜಿಕವಾಗಿ ವಿಶೇಷ ಸಾಧನೆಗೈದ ಮಾತೆಗೆ ಶ್ರೀರಾಮಚಂದ್ರಾಪುರ ಮಠ ರಾಮೋತ್ಸವದ ಸಂದರ್ಭದಲ್ಲಿ ಶ್ರೀ ಸಂಸ್ಥಾನದವರಿಂದ ಪ್ರದಾನಿಸುವ ಶ್ರೀಮಾತಾ ಪ್ರಶಸ್ತಿ ಅನುಗ್ರಹ ಪಡೆದ ಮಹಾಮಂಡ ಲಾಧ್ಯಕ್ಷೆ ಈಶ್ವರಿ ಬೇರ್ಕಡವು ಅವರನ್ನು ಶಾಲು ಹೊದೆಸಿ ಫಲವನ್ನಿತ್ತು ಗೌರವಿಸಲಾಯಿತು.

ಗುರುಗಳ ಆದೇಶವನ್ನನುಸರಿಸಿ ಅದರಂತೆ ನಡೆದರೆ ಉನ್ನತಿ ಪ್ರಾಪ್ತಿಯಾಗುವುದೆಂಬುದಕ್ಕೆ ನಾನೇ ಉದಾಹರಣೆ. ನಮ್ಮ ಗುರುನಿಷ್ಠೆ ನಮ್ಮನ್ನು ಸದಾ ಕಾಪಾಡುತ್ತೆ. ಆದ್ದರಿಂದ ಪೂರ್ಣ ಶರಣಾಗತಿಯೊಂದಿಗೆ ಗುರುಸೇವೆ ಮಾಡಿದಲ್ಲಿ ಗುರುಗಳು ನಮ್ಮನ್ನು ಗುರಿ ತಲಪಿಸುತ್ತಾರೆ.

ಮುಳ್ಳೇರಿಯಾ ಮಂಡಲ ನನ್ನ ಮನೆ. ನನ್ನ ಮನೆ ಮಂದಿಯ ಕಾರ್ಯಕರ್ತರ ಸರ್ವ ಸಹಕಾರದಿಂದ ನನಗೆ ಈ ಪ್ರಶಸ್ತಿ ಬಂದಿದೆ. ಇದು ನಮಗೆಲ್ಲರಿಗೂ ಸಂದ ಪ್ರಶಸ್ತಿ ಎಂಬುದಾಗಿ ಸಮ್ಮಾನಿತರಾದ ಈಶ್ವರಿ ಬೇರ್ಕಡವು ಮಾರ್ಮಿಕ ನುಡಿಗಳನ್ನಾಡಿದರು.

ಪಿಯುಸಿ ವಾಣಿಜ್ಯ ವಿಭಾಗಲ್ಲಿ ಶೇ.96.4 ಅಂಕವನ್ನು ಗಳಿಸಿ ವಿಶೇಷ ಸಾಧನೆ ಮಾಡಿದ ವಿರಾಜಪೇಟೆ ಗುರಿಕ್ಕಾರರಾದ ಕೆ.ಶ್ಯಾಮ ಮತ್ತು ಉಷಾ ದಂಪತಿ ಪುತ್ರಿ ಕೆ.ಪಾವನಿ ಅವರನ್ನು ಶಾಲುಹೊದೆಸಿ ಫಲಪುಷ್ಪ ನೀಡಿ ಅಭಿನಂದಿಸಲಾಯಿತು.

ಮಂಡಲ ಗುರಿಕ್ಕಾರ ಸತ್ಯನಾರಾಯಣ ಭಟ್‌ ಮೊಗ್ರ ಅವರು ಮಹಾ ಪಾದುಕಾ ಪೂಜೆಯ ಯಶಸ್ವಿಗಾಗಿ ಕಾರ್ಯಕರ್ತರನ್ನು ಅಭಿನಂದಿಸಿ ಮುಂದೆಯೂ ಗುರುಸೇವೆಯಲ್ಲಿ ಮುಂಚೂಣಿಯಲ್ಲಿದ್ದು ಕಾರ್ಯ ನಿರತರಾಗೋಣ ಎಂದರು.

ಮಂಡಲಾಧ್ಯಕ್ಷರಾದ ಪ್ರೊ|ಶ್ರೀಕೃಷ್ಣ ಭಟ್‌ ಅವರು ಅಧ್ಯಕ್ಷೀಯ ಮಾತುಗಳನ್ನಾಡಿದರು. ಸಾಮೂಹಿಕ ರಾಮಜಪ, ಶಾಂತಿಮಂತ್ರ, ಧ್ವಜಾವರೋಹಣ ಶಂಖನಾದವಾಗಿ ಸಭೆ ಮುಕ್ತಾಯವಾಯಿತು.

ಭದ್ರಅಡಿಪಾಯ
ಸಭೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ಕೀರ್ತಿಗೆ ಭಾಜನರಾದ ಕಾಸರಗೋಡಿನ ಪೆರಡಾಲ ಕಡಪ್ಪು ಶ್ರೀಕೃಷ್ಣ ಶರ್ಮ ಅವರನ್ನು ಶಾಲುಹೊದೆಸಿ ಫಲಪುಷ್ಪ ನೀಡಿ ಅಭಿನಂದಿಸಲಾಯಿತು. ಅಭಿನಂದನೆಗೆ ಧನ್ಯತೆಯಿಂದ ಉತ್ತರಿಸುತ್ತಾ ಶ್ರೀಕೃಷ್ಣ ಶರ್ಮ ಯಾವುದೇ ಕಟ್ಟಡ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಬೇಕು.

ನನ್ನ ಜೀವನದಲ್ಲಿ ಶ್ರೀಭಾರತೀ ವಿದ್ಯಾಪೀಠದ ಮೂಲಕ ನನಗೆ ಈ ಭದ್ರತೆಯು ಲಭಿಸಿದೆ. ಶ್ರೀಸಂಸ್ಥಾನದ ಶ್ರೀರಕ್ಷೆ ನನಗೊದಗಿ ಬಂದುದರಿಂದ ಈ ಸಾಧನೆ ಸಾಧ್ಯವಾಯಿತು. ಮುಂದೆಯೂ ಶ್ರೀಚರಣ ಸೇವಕನಾಗಿರುತೇ¤ನೆ ಎಂದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.