ರಮೇಶ್ ಬಿಜೆಪಿ ಸೇರ್ಪಡೆ ಆಗುವುದರಿಂದ ಸರ್ಕಾರ ಬೀಳದು
Team Udayavani, Apr 24, 2019, 3:28 AM IST
ದಾವಣಗೆರೆ: ಶಾಸಕ ರಮೇಶ್ ಜಾರಕಿಹೊಳಿ ಪಕ್ಷ ಬಿಡುವುದರಿಂದ ಸರ್ಕಾರಕ್ಕೆ ಏನೂ ಆಗದು ಎಂದು ಹಿರಿಯ ಕಾಂಗ್ರೆಸ್ಸಿಗ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಯಾವಾಗಲಾದರೂ ಹೋಗಬೇಕಾದ ಖಾಯಂ ಗಿರಾಕಿ.
ಅಡ್ವಾನ್ಸ್ ತೆಗೆದುಕೊಂಡಿದ್ದಾರೆ. ಹಾಗಾಗಿ ಹೋಗಬೇಕು. ರಮೇಶ್ ಬಿಜೆಪಿಗೆ ಹೋಗುವುದರಿಂದ ಸರ್ಕಾರಕ್ಕೆ ಏನೂ ಆಗುವುದಿಲ್ಲ, ಮೈತ್ರಿ ಸರ್ಕಾರ 5 ವರ್ಷ ಇರಲಿದೆ ಎಂದರು. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಕಾಂಗ್ರೆಸ್ ಸಮುದ್ರ ಇದ್ದಂತೆ. ಯಾರಾದರೂ ಬರಬಹುದು. ಯಾರಾದರೂ ಹೋಗಬಹುದು. ರಮೇಶ್ ಹೋಗುವುದರಿಂದ ಸರ್ಕಾರಕ್ಕೆ ಏನೂ ಆಗುವುದಿಲ್ಲ ಎಂದಿದ್ದಾರೆ.
ನಾನೂ ಸಿಎಂ ಹುದ್ದೆ ಆಕಾಂಕ್ಷಿ: “ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದಿದ್ದಾರೆ. ನಾನೂ ಮುಖ್ಯಮಂತ್ರಿ ಆಗುತ್ತೇನೆ. ಅದರಲ್ಲಿ ತಪ್ಪೇನಿದೆ’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದಿದ್ದಾರಲ್ಲ ಎಂಬ ಪ್ರಶ್ನೆಗೆ, “ಸಿದ್ದರಾಮಯ್ಯ ಅವರಂತೆ ನಾನೂ ಮುಖ್ಯಮಂತ್ರಿ ಆಗುತ್ತೇನೆ ಎನ್ನುತ್ತೇನೆ. ತಪ್ಪೇನಿದೆ’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ