ಪ್ರಯಾಣಿಕರಿಗೆ ಹೊರೆ ಮೆಟ್ರೋಗೆ ವರ!


Team Udayavani, Apr 24, 2019, 3:58 AM IST

prayanika

ಬೆಂಗಳೂರು: ಮೆಟ್ರೋ ನಿಗಮ ಮಾ.27ರಿಂದ ಜಾರಿಗೆ ತಂದಿರುವ ಸ್ಮಾರ್ಟ್‌ ಕಾರ್ಡ್‌ಗಳಲ್ಲಿ ಕನಿಷ್ಠ 50 ರೂ ಇರಲೇ ಬೇಕು ಎನ್ನುವ ನಿಯಮ ಸಾಮಾನ್ಯ ಪ್ರಯಾಣಿಕರಿಗೆ ತಲೆನೋವಾಗಿ ಪರಿಣಮಿಸಿದೆ. ಆದರೆ, ಈ ಆದೇಶದಿಂದ ಮೆಟ್ರೋ ನಿಗಮಕ್ಕೆ ಲಕ್ಷಾಂತರ ರೂಗಳು ಆದಾಯ ಏರಿಕೆಯಾಗಿದೆ.

ಸಾರ್ವಜನಿಕರ ತೀವ್ರ ವಿರೋಧ ನಡುವೆಯೂ ಮೆಟ್ರೋ ನಿಗಮ ಸ್ಮಾರ್ಟ್‌ ಕಾರ್ಡ್‌ಗಳಲ್ಲಿ ಕಡ್ಡಾಯವಾಗಿ 50ರೂ ಇರಬೇಕು ಎನ್ನುವ ಹೊಸ ನಿಯಮವನ್ನು ಜಾರಿ ಮಾಡಿತ್ತು. ನಿಗಮದ ಈ ನಿಲುವನ್ನು ಸಾಮಾಜಿಕ ಜಾಲತಾಣಗಳಲ್ಲೂ ಸಾರ್ವಜನಿಕರು ವಿರೋಧಿಸಿದ್ದರು. ವಿರೋಧಗಳಿಗೆ ಕಿವಿಗೊಡದ ಮೆಟ್ರೋ ನಿಗಮ ದರವನ್ನು ಮತ್ತೆ ಪರಿಷ್ಕರಿಸುವ ಗೋಜಿಗೇ ಹೋಗಿಲ್ಲ.

ಪ್ರತಿದಿನ ಮೆಟ್ರೋದಲ್ಲಿ ಲಕ್ಷಾಂತರ ಜನ ಪ್ರಯಾಣಿಸುತ್ತಾರೆ. ಸ್ಮಾರ್ಟ್‌ ಕಾರ್ಡ್‌ಗಳಲ್ಲಿ 50ರೂಗಳಿಗಿಂತ ಕಡಿಮೆ ಇದ್ದರೆ, ದ್ವಾರಗಳ ಬಾಗಿಲು ತಗೆದುಕೊಳ್ಳುವುದೇ ಇಲ್ಲ. ಹೀಗಾಗಿ ಅನಿವಾರ್ಯವಾಗಿ ಪ್ರಯಾಣಿಕರು ಈ ಮೊತ್ತವನ್ನು ಕಾರ್ಡ್‌ನಲ್ಲಿ ಇರಿಸಿಕೊಳ್ಳಬೇಕಾಗಿದೆ.

ಇದು ನಿಗಮಕ್ಕೆ ವರವಾಗಿ ಪರಿಣಮಿಸಿದ್ದು, ಲಕ್ಷಾಂತರೂಗಳ ಲಾಭವಾಗಿದೆ. ಸ್ಮಾರ್ಟ್‌ ಕಾರ್ಡ್‌ ಪರಿಚಯಿಸಿದ ಮುಖ್ಯ ಉದ್ದೇಶವೇ ಸಾರ್ವಜನಿಕರು ಸಾಲು ನಿಲ್ಲುವುದನ್ನು ತಪ್ಪಿಸುವುದಾಗಿತ್ತು. ಆದರೆ, ಈಗ ಮತ್ತೆ ಮೆಟ್ರೋ ನಿಲ್ದಾಣಗಳಲ್ಲಿ ಸಾರ್ವಜನಿಕರು ಸಾಲು ನಿಲ್ಲುವುದು ಸಾಮಾನ್ಯವಾಗಿದೆ.

ಮೆಟ್ರೋದಲ್ಲಿ ಪ್ರತಿದಿನ ಪ್ರಯಾಣಿಸುವ ಉದ್ಯೋಗಿಗಳು ಎರಡ ರಿಂದ ಮೂರು ಸಾವಿರ ರಿಚಾರ್ಜ್‌ ಮಾಡಿಸಿಕೊಳ್ಳುತ್ತಾರೆ. ಇಂತಹ ಪ್ರಯಾಣಿಕರಿಗೆ ಹೊಸ ನಿಯಮದಿಂದ ಯಾವುದೇ ತೊಂದರೆಯಾಗುವುದಿಲ್ಲ. ಆದರೆ, 100 ಅಥವಾ 50 ರಿಚಾರ್ಜ್‌ ಮಾಡಿಸಿಕೊಂಡು ಪ್ರಯಾಣಿಸುವ ಸಾಮಾನ್ಯ ಪ್ರಯಾಣಿಕರ ಮೇಲೆ ಇದು ನೇರ ಪರಿಣಾಮ ಬೀರಿದೆ.

ಮೆಟ್ರೋ ಗೋಡೆಗಳಿಗೆ ಐತಿಹಾಸಿಕ ಸೊಗಡು: ಮೆಟ್ರೋ ಕನ್ನಡ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿಲ್ಲ ಎನ್ನುವ ಆರೋಪಗಳು ಪದೇ ಪದೇ ಕೇಳಿ ಬಂದ ಹಿನ್ನೆಲೆಯಲ್ಲಿ ಮೆಟ್ರೋ ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಪ್ರಯತ್ನ ಮಾಡುತ್ತಿದೆ.

ಮೆಟ್ರೋ ರೈಲುಗಳ ಡಿಸ್‌ಪ್ಲೆಗಳಲ್ಲಿ ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳ ಬಗ್ಗೆ ಚಿತ್ರಸಹಿತವಾಗಿ ವಿವರಣೆ ನೀಡುವುದು, ಕನ್ನಡ ಸಾಹಿತ್ಯದ ಹಾಡುಗಳನ್ನು ಪ್ರಸಾರ ಮಾಡುವುದು ಮತ್ತು ಮೆಟ್ರೋದ ನಿಲ್ದಾಣಗಳಲ್ಲಿ ಕನ್ನಡ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿತ್ರಗಳನ್ನು ಕಲಾವಿದರಿಂದ ಬರೆಸುವ ಕೆಲಸವನ್ನು ಮಾಡುತ್ತಿದೆ. ಈ ಮೂಲಕ ಕನ್ನಡಿಗರಿಗೆ ಹತ್ತಿರವಾಗುವ ಪ್ರಯತ್ನ ಮಾಡುತ್ತಿದೆ.

ಆರ್ಥಿಕ ಹೊರೆ ತಪ್ಪಿಸುವ ಉದ್ದೇಶ: ಮೆಟ್ರೋ ನಿಗಮಕ್ಕೆ ಉಂಟಾಗಿರುವ ಆರ್ಥಿಕ ಸಂಕಷ್ಟ ಮತ್ತು ಪ್ರಯಾಣಿಕ ದರವನ್ನು ಹೆಚ್ಚಿಸುವ ಎರಡನ್ನು ಏಕಕಾಲಕ್ಕೆ ತಪ್ಪಿಸುವ ಉದ್ದೇಶದಿಂದ ಸ್ಮಾರ್ಟ್‌ಕಾರ್ಡ್‌ಗಳಲ್ಲಿ 50ರೂ ಕಡ್ಡಾಯ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.