ಎಲೆಕ್ಷನ್‌ ಎಫೆಕ್ಟ್: ಶೇ.23.62 ಮದ್ಯ ಮಾರಾಟ ಕುಸಿತ

ಮಾರ್ಚ್‌, ಏಪ್ರಿಲ್ನಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್‌ • ಅಬಕಾರಿ ಇಲಾಖೆಯಿಂದ ಸ್ವಯಂ ನಿಯಂತ್ರಣ

Team Udayavani, Apr 24, 2019, 12:50 PM IST

mandya-tdy-3

ಮಂಡ್ಯ: ಸಾಮಾನ್ಯ ದಿನಗಳಲ್ಲಿ ಮದ್ಯದ ಹೊಳೆಯೇ ಹರಿದಾಡುವ ಮಂಡ್ಯ ಜಿಲ್ಲೆಯೊಳಗೆ ಲೋಕಸಭಾ ಚುನಾವಣಾ ನೀತಿ ಸಂಹಿತೆಯಿಂದಾಗಿ ಮದ್ಯ ಮಾರಾಟಕ್ಕೆ ಹೊಡೆತ ಬಿದ್ದಿದೆ. ಮಾರ್ಚ್‌ ಹಾಗೂ ಏಪ್ರಿಲ್ ತಿಂಗಳಲ್ಲಿ ಶೇ.23..62ರಷ್ಟು ಮದ್ಯ ಮಾರಾಟ ಕುಸಿತ ಕಂಡಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಷದ ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಮದ್ಯ ಮಾರಾಟಕ್ಕೆ ತೀವ್ರ ತಡೆಯೊಡ್ಡಲಾಗಿತ್ತು. ಹೀಗಾಗಿ ಮಾರ್ಚ್‌ ತಿಂಗಳ ಗುರಿ 2,03,964 ಬಾಕ್ಸ್‌ಗಳಲ್ಲಿ 1,54,371(ಶೇ.75.69) ಮಾತ್ರ ಮದ್ಯದ ಬಾಕ್ಸ್‌ಗಳು ಮಾರಾಟ ವಾಗಿದ್ದು, ನಿಗದಿತ ಗುರಿಯಲ್ಲಿ ಶೇ.23.62 ಮದ್ಯದ ಮಾರಾಟಕ್ಕೆ ಹಿನ್ನಡೆಯಾಗಿದೆ. ಹಾಗೆಯೇ ಏಪ್ರಿಲ್ ತಿಂಗಳಲ್ಲಿ 1,24,369 ಬಾಕ್ಸ್‌ಗಳಿಗೆ 1,13,082 ಬಾಕ್ಸ್‌ಗಳು ಮಾರಾಟವಾಗಿದ್ದು, ಶೇ.90.92ರಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗಿದೆ.

ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆ: 2018ರ ಮಾರ್ಚ್‌ ತಿಂಗಳಲ್ಲಿ 1,86,557 ಬಾಕ್ಸ್‌ಗಳಿಗೆ 2,02,1209 ಬಾಕ್ಸ್‌ಗಳು ಮಾರಾಟದೊಂದಿಗೆ ಶೇ.108.34ರಷ್ಟು ಪ್ರಗತಿ ಸಾಧಿಸಲಾಗಿತ್ತು. ಏಪ್ರಿಲ್ನಲ್ಲಿ 1,31,149 ಬಾಕ್ಸ್‌ಗಳಿಗೆ 1,10,378 ಬಾಕ್ಸ್‌ಗಳು ಮಾರಾಟವಾಗಿ ಶೇ. ಶೇ.84.16 ಗುರಿ ಸಾಧಿಸಿತ್ತು. ಕಳೆದ ವರ್ಷವೂ ಏಪ್ರಿಲ್ನಲ್ಲೇ ವಿಧಾನಸಭೆ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಆ ತಿಂಗಳು ಮದ್ಯ ಮಾರಾಟ ನಿರೀಕ್ಷಿತ ಪ್ರಮಾಣಕ್ಕಿಂತಲೂ ಕಡಿಮೆಯಾಗಿತ್ತು.

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮದ್ಯ ಮಾರಾಟದ ಗುರಿ ನಿಗದಿ ಹಾಗೂ ಮಾರಾಟ ಪ್ರಮಾಣವೂ ಹೆಚ್ಚಾಗುತ್ತಿದೆ. ಈ ವರ್ಷ ಫೆಬ್ರವರಿ ತಿಂಗಳವರೆಗೆ ಮದ್ಯ ಮಾರಾಟ ಜೋರಾಗಿತ್ತು. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಹಲವು ಕಾರಣಗಳಿಂದ ತೆರವಾದ ಕಾರಣಕ್ಕೆ ನಡೆದ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಉಪ ಚುನಾವಣೆಗಳ ಪರಿಣಾಮ ಹಿಂದಿನ ವರ್ಷಕ್ಕಿಂತ ಹೆಚ್ಚು ಮದ್ಯ ಮಾರಾಟವಾಗಿತ್ತು.

ಚುನಾವಣೆ ಪರಿಣಾಮ: ಚುನಾವಣೆಗಳು ಬಂತೆಂದರೆ ಹಣ ಮತ್ತು ಮದ್ಯದ ಹೊಳೆ ಹರಿಯುವುದು ಸಾಮಾನ್ಯ. ಆದರೆ, ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರದಲ್ಲಿ ಮದ್ಯ ಹೊಳೆ ಹರಿಯುವುದಿರಲಿ, ಮದ್ಯ ಮಾರಾಟದಲ್ಲೂ ನಿಗದಿತ ಗುರಿ ಸಾಧಿಸಲು ಸಾಧ್ಯವಾಗಲಿಲ್ಲ.

ಈ ಬಾರಿಯ ಲೋಕಸಭೆ ಸಾರ್ವತ್ರಿಕ ಚುನಾವಣೆ ಮದ್ಯ ಮಾರಾಟದ ಮೇಲೆ ನೇರ ಪರಿಣಾಮ ಬೀರಿದೆ. ಮಾ.10ರಿಂದಲೇ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದರಿಂದ ಅಕ್ರಮ ಮದ್ಯ ಮಾರಾಟ, ಸಾಗಾಣಿಕೆ, ಶೇಖರಣೆ ಮೇಲೆ ಬಿಗಿ ನಿಯಂತ್ರಣ ಹೇರಲಾಗಿತ್ತು. ಜಿಲ್ಲಾದ್ಯಂತ 2 ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ, ವಿಶೇಷವಾಗಿ ಅಕ್ರಮ ಮದ್ಯ ಸಾಗಾಣಿಕೆ ಮೇಲೆ ತೀವ್ರ ನಿಗಾ ವಹಿಸಲಾಗಿತ್ತು.

ಮದ್ಯ ಮಾರಾಟಕ್ಕೆ ಬ್ರೇಕ್‌: ಚುನಾವಣಾ ಸಮಯದಲ್ಲಿ ಮದ್ಯದ ಹೊಳೆಯನ್ನೇ ಹರಿಸಿ ಜನರಿಗೆ ವಿವಿಧ ಪಕ್ಷಗಳು ಹಾಗೂ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುವಂತೆ ಆಮಿಷವೊಡ್ಡಬಹುದು ಎಂಬ ಕಾರಣಕ್ಕೆ ಚುನಾವಣಾ ಆಯೋಗವೇ ಮದ್ಯ ಮಾರಾಟಕ್ಕೆ ಮೂಗುದಾರ ಹಾಕಿತ್ತು. ಅಬಕಾರಿ ಇಲಾಖೆಯೂ ಸಹ ಮದ್ಯ ಮಾರಾಟದ ಮೇಲೆ ಸ್ವಯಂ ನಿಯಂತ್ರಣ ವಿಧಿಸಿಕೊಂಡು ಹಿಂದಿನ ವರ್ಷಕ್ಕಿಂತ ಶೇ.110ಕ್ಕಿಂತ ಹೆಚ್ಚು ಪ್ರಮಾಣದ ಮದ್ಯ ಮಾರಾಟವಾಗದಂತೆ ಎಚ್ಚರ ವಹಿಸಿತ್ತು.

ಇದಲ್ಲದೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಉತ್ಪಾದನಾ ಕಂಪನಿಗಳೂ ಸಹ ಮದ್ಯ ಉತ್ಪಾದಿಸುವ ಪ್ರಮಾಣವನ್ನು ಕಡಿಮೆ ಮಾಡಿದ್ದವು. ಕಂಪನಿಗಳು ಹಾಗೂ ಗೋದಾಮುಗಳಿಂದ ಅಬಕಾರಿ ಸನ್ನದ್ದು ಮಾರಾಟಗಾರರಿಗೆ ನಿಗದಿತ ಬೇಡಿಕೆಗಿಂತ ಕಡಿಮೆ ಪ್ರಮಾಣದ ಮದ್ಯ ಪೂರೈಸಿದ್ದವು. ಪರಿಣಾಮ ಮಾರ್ಚ್‌ ಮತ್ತು ಏಪ್ರಿಲ್ನಲ್ಲಿ ಗುರಿಗಿಂತಲೂ ಕಡಿಮೆ ಪ್ರಮಾಣದ ಮದ್ಯ ಮಾರಾಟವಾಗಿತ್ತು.

ಮದ್ಯ ಮಾರಾಟ ಹಿನ್ನಡೆ: ಆರ್ಥಿಕ ವರ್ಷಾಂತ್ಯದ ಮಾಸಗಳಾದ ಫೆಬ್ರವರಿ ಮತ್ತು ಮಾರ್ಚ್‌ಗಳಲ್ಲಿ ಗುರಿಗಿಂತಲೂ ಹೆಚ್ಚಿನ ಮದ್ಯ ಮಾರಾಟವಾಗುವುದು ಸಾಮಾನ್ಯವಾಗಿತ್ತು. ಜನರಿಂದ ಅಷ್ಟು ಪ್ರಮಾಣದ ಮದ್ಯ ಖರೀದಿಯಾಗಿದ್ದರೂ ಸನ್ನದ್ದುಗಾರರು, ಮುಂದಿನ ಆರ್ಥಿಕ ವರ್ಷದಲ್ಲಿ ಮದ್ಯದ ಬೆಲೆ ವ್ಯತ್ಯಾಸವಾಗುತ್ತಿದ್ದ ಕಾರಣಕ್ಕೆ ಮಾರ್ಚ್‌ ತಿಂಗಳಲ್ಲೇ ಹೆಚ್ಚಿನ ಪ್ರಮಾಣದ ಮದ್ಯದ ಬಾಕ್ಸ್‌ಗಳನ್ನು ಕಂಪನಿಗಳಿಂದ ಖರೀದಿಸಿ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದರು. ಆದರೆ, ಈ ಬಾರಿ ಮದ್ಯದ ಉತ್ಪಾದನೆ ಕಡಿಮೆಯಾಗುವುದರ ಜೊತೆಗೆ ಆರ್ಥಿಕ ವರ್ಷಾಂತ್ಯದಲ್ಲಿ ನಿಗದಿತ ಗುರಿ ಸಾಧಿಸಲಾಗದೆ ಮದ್ಯ ಮಾರಾಟ ಹಿನ್ನಡೆ ಕಂಡಿದೆ.

447 ಪ್ರಕರಣ ದಾಖಲು: ಲೋಕಸಭೆ ಚುನಾವಣಾ ನೀತಿ ಸಂಹಿತಿ ಅವಧಿಯಲ್ಲಿ 81 ಹೀನಸ್‌, 99 ಶಾಪ್‌ ಲೈಸೆನ್ಸ್‌ ಉಲ್ಲಂಘನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ, ಸಾಗಾಣಿಕೆ ಸಂಬಂಧ 447 ಪ್ರಕರಣಗಳನ್ನು ಅಬಕಾರಿ ಇಲಾಖೆ ದಾಖಲಾಗಿದೆ. 1.29 ಕೋಟಿ ರೂ. ಮೌಲ್ಯದ 16,988 ಲೀಟರ್‌ ಮದ್ಯ, 6506 ಲೀಟರ್‌ ಬಿಯರ್‌ನ್ನು ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.