ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಮುಕ್ತಕ್ಕೆ ಡೀಸಿ ಕ್ರಮ

ಎಲ್ಲಾ ದೇವಾಲಯಗಳಿಗೆ ಜಿಲ್ಲಾಡಳಿತ ಆದೇಶ • ಬಟ್ಟೆ ಬ್ಯಾಗ್‌ ಕಡಿಮೆ ಬೆಲೆಗೆ ನೀಡಲು ಆದ್ಯತೆ

Team Udayavani, Apr 24, 2019, 1:48 PM IST

ramanagar tdy 1

ಮಾಗಡಿ: ಮುಜರಾಯಿ ದೇವಾಲಯಗಳಿಗೆ ಪ್ಲಾಸ್ಟಿಕ್‌ ಚೀಲದಲ್ಲಿ ಪೂಜಾ ಸಾಮಗ್ರಿ ಕೊಂಡೊಯ್ಯುವ ಭಕ್ತರಿಗೆ ಇನ್ನು ಮುಂದೆ ದೇವರ ದರ್ಶನ ಭಾಗ್ಯ ಸಿಗುವುದು ಕಷ್ಟ. ಪ್ರವಾಸಿ ತಾಣಗಳಲ್ಲಿ ಇನ್ನೂ ಕಷ್ಟ.

ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಿಗೆ ಜಿಲ್ಲಾಡಳಿತ, ಮುಜರಾಯಿ ಇಲಾಖೆ ದೇವಾಲಯದ ಆವರಣದಲ್ಲಿ ಪ್ಲಾಸ್ಟಿಕ್‌ ಚೀಲ ನಿಷೇಧಿಸಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಭಕ್ತರು ಹೂ, ಹಣ್ಣು, ಕಾಯಿ, ಕರ್ಪೂರ ಇತರೆ ಹಣ್ಣುಗಳನ್ನು ಪ್ಲಾಸ್ಟಿಕ್‌ ಚೀಲದಲ್ಲಿ ತಂದು ನಂತರ ಎಲ್ಲಂದರಲ್ಲಿ ಎಸೆದು ಹೋಗುತ್ತಾರೆ. ಇದರಿಂದ ದೇವಾಲಯಗಳ ಆವರಣ ಹಾಗೂ ಪ್ರವಾಸಿ ತಾಣದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಮಲೀನಗೊಳ್ಳುತ್ತದೆ. ಅದ್ದರಿಂದ ಮುಜರಾಯಿ ಇಲಾಖೆಗೆ ಸೇರಿದ ಬಹುತೇಕ ಎಲ್ಲಾ ದೇವಾಲಯಗಳಲ್ಲೂ ಪ್ಲಾಸ್ಟಿಕ್‌ ಚೀಲಗಳ ಸಂಪೂರ್ಣ ನಿಷೇಧಕ್ಕೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಹಸಿರು ನ್ಯಾಯ ಮಂಡಲಿ ಸೂಚನೆ: ಸಂರಕ್ಷಣೆ ಹಾಗೂ ತ್ಯಾಜ್ಯ ನಿರ್ವಹಣೆಗೆ ನಿವೃತ್ತ ನ್ಯಾಯಮೂರ್ತಿ ಸುಭಾಷ್‌ ಬಿ.ಅಡಿ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ರಾಜ್ಯ ಸಮಿತಿ ಇತ್ತೀಚೆಗೆ ಕರೆದಿದ್ದ ಸಭೆಯಲ್ಲಿ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಸಂಪೂರ್ಣ ನಿಷೇಧ ಹಾಗೂ ತ್ಯಾಜ್ಯ ಸಂಸ್ಕರಣೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವ ಹಿನ್ನೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳಗಳು ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳು ಹಾಗೂ ಮುಜರಾಯಿ ದೇವಾಲಯಗಳ ಆವರಣದಲ್ಲಿ ಪ್ಲಾಸ್ಟಿಕ್‌ ಮುಕ್ತ ಪ್ರದೇಶ ಎಂದು ಜಿಲ್ಲಾಡಳಿತ ಘೋಷಣೆ ಮಾಡಿದೆ. ಪ್ಲಾಸ್ಟಿಕ್‌ ಕಡ್ಡಾಯ ನಿಷೇಧಕ್ಕೆ ಆದೇಶ ಜಾರಿಯಿದ್ದು, ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ.

ಬಟ್ಟೆ ಬ್ಯಾಗ್‌ ಮಾರಾಟಕ್ಕೆ ಅವಕಾಶ: ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಸಂಪೂರ್ಣ ನಿಷೇಧಿಸಬೇಕು. ದೇವಾಲಯದ ಬಾಗಿಲ ಬಳಿ ತಪಾಸಣೆ ನಡೆಸಬೇಕು. ದೇವಾಲಯದ ಆವರಣದಲ್ಲಿ ವ್ಯಾಪಾರಿಗಳು ಪ್ಲಾಸ್ಟಿಕ್‌ ಬಳಸದಂತೆ ಪರಿಶೀಲಿಸಬೇಕು. ಸ್ಥಳೀಯ ದೃಶ್ಯಮಾಧ್ಯಮ, ಪತ್ರಿಕೆಗಳು, ಕರಪತ್ರಗಳ ಮೂಲಕ ಜಾಗೃತಿ ಮೂಡಿಸಬೇಕು. ಸ್ಥಳೀಯ ಸ್ವಸಹಾಯ ಗುಂಪುಗಳಿಂದ ಬಟ್ಟೆ ಬ್ಯಾಗ್‌ಗಳನ್ನು ತಯಾರಿಸಿ ದೇವಾಲಯಗಳಿಂದಲೇ ಕಡಿಮೆ ಬೆಲೆಗೆ ಮಾರಾಟ ಮಾಡಲು ಆದ್ಯತೆ ನೀಡಬೇಕು.

ಒಬ್ಬರಿಗೊಂದು ಮತ್ತೂಬ್ಬರಿಗೊಂದು ಕಾನೂನು ಬೇಡ: ಪರಿಸರದ ಕಾಳಜಿ ದೃಷ್ಠಿಯಿಂದ ಪ್ಲಾಸ್ಟಿಕ್‌ ನಿಷೇಧ ಉತ್ತಮವಾಗಿದೆ. ಆದರೆ, ದೊಡ್ಡ ದೊಡ್ಡ ಕಂಪನಿಗಳು ಪ್ಲಾಸ್ಟಿಕ್‌ ಪ್ಯಾಕಿಂಗ್‌ ಮೂಲಕವೇ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. ಮೊದಲು ಪ್ಲಾಸ್ಟಿಕ್‌ ತಯಾರಿಕೆ ಕಂಪನಿಗಳಲ್ಲಿ ಪ್ಲಾಸ್ಟಿಕ್‌ ಕ್ವಾಲಿಟಿ ಕುರಿತು ಸರ್ಕಾರ ಎಚ್ಚರಿಕೆ ನೀಡಬೇಕು. ನಂದಿನಿ ಹಾಲಿನ ಪ್ಯಾಕ್‌ ಸಹ ಪ್ಲಾಸ್ಟಿಕ್‌ ಆಗಿದೆ. ಅದೇ ಮಾದರಿಯಲ್ಲಿ ಪೂಜಾ ಸಾಮಗ್ರಿಗಳನ್ನು ದೇವಸ್ಥಾನಕ್ಕೆ ಕೊಂಡೊಯ್ಯಲು ಅವಕಾಶ ಮಾಡಿಕೊಟ್ಡರೆ ಉತ್ತಮ. ಇಲ್ಲದಿದ್ದರೆ ಸಂಪೂಣವಾಗಿ ಪ್ಲಾಸ್ಟಿಕ್‌ ನಿಷೇಧಿಸಬೇಕು. ಒಬ್ಬರಿಗೊಂದು ಮತ್ತೂಬ್ಬರಿಗೊಂದು ಕಾನೂನು ಬೇಡ ಎಂದು ಭಕ್ತದಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಡೀಸಿ ಆದೇಶಕ್ಕೆ ಸಿಗುವುದೆ ಕಿಮ್ಮತ್ತು?

ರಾಮನಗರ ಜಿಲ್ಲೆಯ ಪ್ರಮುಖ ಧಾರ್ಮಿಕ ಸ್ಥಳಗಳು ಮತ್ತು ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ಕುರಿತು ಡೀಸಿ ಆದೇಶಕ್ಕೆ ಜಿಲ್ಲೆಯ ನಾಗರಿಕರು ಪ್ರತಿಕ್ರಿಯಿಸಿದ್ದಾರೆ. ಕೊನೆಗೂ ಜಿಲ್ಲಾಡಳಿತಕ್ಕ ಜ್ಞಾನೋದಯವಾಗಿದೆ ಎಂಬ ಪ್ರತಿಕ್ರಿಯೆ ಜೊತೆಗೆ ಈ ಆದೇಶ ಕೇವಲ ಕಡತಕ್ಕೆ ಸೀಮಿತವಾಗದಿರಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಪ್ಲಾಸ್ಟಿಕ್‌ ನಿಷೇಧದ ಆದೇಶ ಇದು ಮೊದಲೇನು ಅಲ್ಲ. ಸ್ಥಳೀಯ ಸಂಸ್ಥೆಗಳು ಸಹ ಅನೇಕ ಬಾರಿ ಆದೇಶಗಳುನ್ನು ಮಾಡಿವೆ. ಪ್ರತಿಬಾರಿಯೂ ಇಂತಹ ಆದೇಶ ಬಂದಾಗಲೆಲ್ಲ ಜಾಗೃತರಾಗುವ ಅಧಿಕಾರಿಗಳು ಕೆಲ ದಿನಗಳ ಕಾಲ ಕಟ್ಟುನಿಟ್ಟಾಗಿ ನಡೆದುಕೊಂಡು ನಂತರ ಸುಮ್ಮನಾಗುವುದು ಸಾಮಾನ್ಯವಾಗಿದೆ.

ಯಾವ ಕ್ರಮ ಕೈಗೊಳ್ಳಲಿಲ್ಲ: ಕಳೆದ ಗಣಪತಿ ಹಬ್ಬದ ವೇಳೆ ಮಣ್ಣಿನಿಂದ ಮಾಡಿದ ಗಣಪ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಡೀಸಿ ಆದೇಶ ಹೊರೆಡಿಸಿದ್ದರು. ಸ್ಥಳೀಯ ಸಂಸ್ಥೆಗಳು ಸಹ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದವು. ಆದರೆ, ಇಡೀ ಜಿಲ್ಲೆಯಲ್ಲಿ ಪರಿಸರ ವಿರೋಧಿ ವಸ್ತುಗಳಿಂದ ತಯಾರಾದ ಗಣಪ ಮೂರ್ತಿಗಳು ಮಾರಾಟವಾಗಿದ್ದವು. ಜಿಲ್ಲೆಯ ಸ್ಥಳೀಯ ಸಂಸ್ಥೆಗಳಾಗಲಿ, ಮಾಲಿನ್ಯ ನಿಯಂತ್ರಣ ಮಂಡಳಿಯಾಗಲಿ ಯಾವ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ನಾಗರಿಕರು ಹರಿಹಾಯ್ದಿದ್ದಾರೆ.

ವ್ಯಾಪಾರಿಗಳ ಮೇಲೆ ಕ್ರಮ ಕೈಗೊಳ್ಳಿ: ಕಳಪೆ ಪ್ಲಾಸ್ಟಿಕ್‌ ಕೈಚೀಲಗಳು ಇಂದಿಗೂ ಕೆಲವು ವ್ಯಾಪಾರಿಗಳ ಬಳಿ ಸಿಗುತ್ತಿದೆ. ರಸ್ತೆಬದಿ ವ್ಯಾಪಾರಿಗಳು ಇಂತಹದ್ದೆ ಪ್ಲಾಸ್ಟಿಕ್‌ ಚೀಲಗಳನ್ನು ಬಳಸುತ್ತಿದ್ದಾರೆ. ನೀರಿನ ಲೋಟ, ಕಾಫಿ ಲೋಟ, ಕಳಪೆ ಗುಣಮಟ್ಟದ ಪ್ಲಾಸ್ಟಿಕ್‌ ಸ್ಪೂನ್‌ಗಳು, ಪ್ಲಾಸ್ಟಿಕ್‌ ಹಾಳೆಗಳು ಯಥೇಚ್ಚವಾಗಿ ಮಾರಾಟವಾಗುತ್ತಿದೆ. ಹೀಗೆ ಮಾರಾಟ ಮಾಡುವ ವ್ಯಾಪಾರಿ ಮಳಿಗೆಗಳ ಮೇಲೆ ಕ್ರಮ ಜರುಗಿಸದ ಹೊರತು ಪ್ಲಾಸ್ಟಿಕ್‌ ನಿಷೇಧ ಮಾಡಿ ಉಪಯೋಗವೇನು ಎಂದು ಸಾಮಾನ್ಯ ಜನತೆ ಪ್ರಶ್ನಿಸಿದ್ದಾರೆ.

ಜಿಲ್ಲೆಯಲ್ಲಿರುವ ಕಲ್ಯಾಣ ಮಂದಿರಗಳು, ಸಭಾಂಗಣಗಳು, ಸಮುದಾಯ ಕೇಂದ್ರಗಳಲ್ಲಿ ಆಹಾರ ವಿತರಣೆಗೆ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಿಲ್ಲ ಎಂಬುದು ಕಟು ಸತ್ಯ. ಇಂತಹ ಮಂದಿರಗಳ ಮಾಲೀಕರ ವಿರುದ್ಧ ಸ್ಥಳೀಯ ಸಂಸ್ಥೆಗಳು ತೆಗೆದು ಕೊಂಡ ಕಾನೂನು ಕ್ರಮಗಳೇನು ಎಂದು ನಾಗರಿಕರು ಪ್ರಶ್ನಿಸಿದ್ದಾರೆ. ಡೀಸಿ ಅವರು ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಪ್ಲಾಸ್ಟಿಕ್‌ ಮುಕ್ತ ಪ್ರದೇಶಗಳು ಎಂದು ಘೋಷಿಸಿರುವುದರನ್ನು ಸ್ವಾಗತಿಸಿರುವ ನಾಗರಿಕರು, ಈ ಆದೇಶವನ್ನು ಕಡ್ಡಾಯವಾಗಿ ಜಾರಿ ಮಾಡುವಂತೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.