ಚಿಂಚೋಳಿ,ಕುಂದಗೋಳ ಉಪಚುನಾವಣೆ ; ಬಿಜೆಪಿಯಲ್ಲಿ ಟಿಕೆಟ್ ಫೈಟ್
Team Udayavani, Apr 24, 2019, 2:52 PM IST
ಬೆಂಗಳೂರು : ಮೇ 19 ರಂದು ನಡೆಯುವ ಚಿಂಚೋಳಿ ಮೀಸಲು ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಾಗಿ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಆರಂಭವಾಗಿದೆ.
ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಕಾರಣ ಚಿಂಚೋಳಿಯಲ್ಲಿ ಚುನಾವಣೆ ಎದುರಾಗಿದೆ. ಸಚಿವ ಸಿ.ಎಸ್.ಶಿವಳ್ಳಿ ಅವರು ಆಕಾಲಿಕ ನಿಧನ ಹೊಂದಿದ ಕಾರಣ ಕುಂದಗೋಳದಲ್ಲಿ ಉಪಚುನಾವಣೆ ಎದುರಾಗಿದೆ.
ಕುಂದೋಗಳ ಕ್ಷೇತ್ರದಲ್ಲಿ 2018 ರಲ್ಲಿ ಅಭ್ಯರ್ಥಿಯಾಗಿದ್ದ ಚಿಕ್ಕನಗೌಡ್ರು ಮತ್ತು ಎಂ.ಆರ್.ಪಾಟೀಲ್ ನಡುವೆ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಯುತ್ತಿದ್ದು, ರಾಜ್ಯ ಬಿಜೆಪಿ ನಾಯಕರ ಬಳಿ ಇಬ್ಬರೂ ಲಾಬಿ ನಡೆಸುತ್ತಿದ್ದಾರೆ. ಚಿಕ್ಕನಗೌಡ್ರ ಯಡಿಯೂರಪ್ಪ ಅವರ ಸಂಬಂಧಿಕರಾಗಿದ್ದಾರೆ.
ಚಿಂಚೋಳಿಯಲ್ಲಿ ಟಿಕೆಟ್ಗಾಗಿ ಮಾಜಿ ಶಾಸಕ, ಬಿ.ಎಸ್.ಯಡಿಯೂರಪ್ಪ ಆಪ್ತ ಸುನೀಲ್ ವಲ್ಯಾಪುರೆ ಮತ್ತು ಡಾ.ಉಮೇಶ್ ಜಾಧವ್ ಕುಟುಂಬಸ್ಥರ ನಡೆವೆ ಪೈಪೋಟಿ ಆರಂಭವಾಗಿದೆ. ಸುನೀಲ್ ಮತ್ತುಜಾಧವ್ ಇಬ್ಬರೂ ಬೆಂಗಳೂರಿನಲ್ಲಿದ್ದು ಬಿಜೆಪಿ ನಾಯಕರ ಬಳಿ ಟಿಕೆಟ್ ಗಿಟ್ಟಿಸಿಕೊಳ್ಳಲು ಕಸರತ್ತುನಡೆಸುತ್ತಿದ್ದಾರೆ.
ಇನ್ನೊಂದೆಡೆ ಬಿಜೆಪಿ ಚಿಂಚೋಳಿಯಿಂದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ ಎಂದು ಹೇಳಲಾಗಿದೆ.
ಮೇ 23 ರಂದು ಲೋಕಸಭಾ ಚುನಾವಣಾ ಫಲಿತಾಂಶದೊಂದಿಗೆ ಎರಡೂ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ