ಉಪ್ಪಿನಂಗಡಿ: ವಿದ್ಯುತ್‌ ಸಬ್‌ಸ್ಟೇಶನ್‌ಗೆ ಗ್ರಹಣ

ಜಾಗ ಕೊಡಲು ಅರಣ್ಯ ಇಲಾಖೆಯೇ ಅಡ್ಡಿ?

Team Udayavani, Apr 25, 2019, 5:50 AM IST

12

ಉಪ್ಪಿನಂಗಡಿ: ವಿದ್ಯುತ್‌ ಸಮಸ್ಯೆ ನೀಗಿಸುವ ಸಲುವಾಗಿ ಉಪ್ಪಿನಂಗಡಿಯಲ್ಲಿ ವಿದ್ಯುತ್‌ ಸಬ್‌ಸ್ಟೇಶನ್‌ ನಿರ್ಮಿ ಸಲು ಕಳೆದ 12 ವರ್ಷಗಳಿಂದ ಬೇಡಿಕೆ ಇದ್ದು, ಮೆಸ್ಕಾಂ ಮುಂದೆ ಬಂದಿತ್ತು. ಆದರೆ ಜಾಗ ನೀಡಲು ಅರಣ್ಯ ಇಲಾಖೆ ಇಲ್ಲಿ ಅಡ್ಡಿಯಾಗಿದೆ.

ಪಟ್ಟಣದ ವಿದ್ಯುತ್‌ ಸಮಸ್ಯೆ ನಿವಾರಣೆಗೆ ಈ ಹಿಂದೆಯೇ ಸಬ್‌ಸ್ಟೇಶನ್‌ಗಾಗಿ ಗ್ರಾಹಕ ವೇದಿಕೆ ಸಂಘಟನೆಗಳು ರಸ್ತೆ ತಡೆ ಮೆಸ್ಕಾಂಗೆ ನೆರವು ಮುಂತಾದ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಮೆಸ್ಕಾಂಗೆ ಬಿಸಿ ಮುಟ್ಟಿಸಿತ್ತು. ಮೆಸ್ಕಾಂ ಸಬ್‌ಸ್ಟೇಶನ್‌ ಆವಶ್ಯವೆಂದು ಪರಿಗಣಿಸಿ 2007ರಿಂದಲೂ ಕಂದಾಯ ಇಲಾಖೆಗೆ ನಿವೇಶನ ಕೋರಿ ಮನವಿ ಸಲ್ಲಿಸುತ್ತಲೇ ಇತ್ತು. ಇದರಿಂದ ಕಂದಾಯ ಇಲಾಖೆಗೆ ಉಪ್ಪಿನಂಗಡಿ ಕಸಬಾದ ಮಠ ಹಿರ್ತಡ್ಕದಲ್ಲಿ ಸರ್ವೇ ನಂ. 170/ಪಿ1ರಲ್ಲಿ ಒಂದು ಎಕ್ರೆ 30 ಸೆಂಟ್ಸ್‌ ಜಾಗದ ಕೋರಿಕೆಯನ್ನು ಮೆಸ್ಕಾಂ ಸಲ್ಲಿಸಿತ್ತು.

ಇಲಾಖಾ ನಿಯಮದಂತೆ ಅಕ್ಕಪಕ್ಕದ ಸರಕಾರಿ ಇಲಾಖೆಗಳಾದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಅರಣ್ಯ ಇಲಾಖೆಗಳ ನಿರಾಕ್ಷೇಪಣೆ ಪತ್ರಕ್ಕಾಗಿ ಕಂದಾಯ ಅಧಿಕಾರಿಗಳು ಪತ್ರ ಕಳುಹಿಸಿದ್ದರು. ಹೆದ್ದಾರಿ ಇಲಾಖೆ ಸಮ್ಮತಿಸಿದ್ದರೂ, ಅರಣ್ಯ ಇಲಾಖೆ ಎರಡು ಬಾರಿ ವಿವಿಧ ಕಾರಣಗಳಿಂದ ಮೆಸ್ಕಾಂಗೆ ನಿರಾಕ್ಷೇಪಣೆ ನೀಡಲು ತಡೆಯಾಗಿದೆ.

ಮೆಸ್ಕಾಂ ಸಬ್‌ಸ್ಟೇಶನ್‌ ನಿರ್ಮಾಣಕ್ಕೆ ಕೋಟಿಗೂ ಮಿಕ್ಕಿದ ಅಂದಾಜು ಪಟ್ಟಿಯನ್ನು ತಯಾರಿಸಲಾಗಿದೆ. ವರ್ಷದ ಹಿಂದೆ ಮಳೆಗಾಲದಲ್ಲಿ ನದಿಗಳ ನೀರು ಹಲವು ಮನೆಗಳಿಗೆ ಹರಿದು ವಿದ್ಯುತ್‌ ಸಮಸ್ಯೆ ಉದ್ಭವಿಸಿದ ಪರಿಣಾಮ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮೆಸ್ಕಾಂ ಸಬ್‌ಸ್ಟೇಶನ್‌ ನಿರ್ಮಾಣ ಕಡತ ಮರುಪರಿಶೀಲನೆ ನಡೆಸುವಂತೆ ತಾಲೂಕು ದಂಡಾಧಿಕಾರಿಗಳಿಗೆ ಸೂಚನೆ ನೀಡಿದ್ದರು.

ರಾಷ್ಟ್ರೀಯ ಹೆದ್ದಾರಿ ಇಲಾಖೆ ನಿರಾಕ್ಷೇಪಣೆ ಪತ್ರ ನೀಡಿದ್ದರೂ, ಅರಣ್ಯ ಇಲಾಖೆ 170/ಪಿ1ರಲ್ಲಿ ಗೋಮಾಳ ಮಾತ್ರವಲ್ಲದೆ ಬಜತ್ತೂರು ಗ್ರಾಮಕ್ಕೆ ತಾಗಿದ್ದು ಅರಣ್ಯ ಇಲಾಖಾ 7.063 ಎಕ್ರೆ ಜಾಗ ಬರುತ್ತಿದ್ದು, ಅದನ್ನು ಪ್ರತ್ಯೇಕವಾಗಿ ವಿಂಗಡಿಸಿ ಅಳತೆ ಕಾರ್ಯ ನಡೆಸಿ ಪಹಣಿ ಪತ್ರ ಒದಗಿಸಿದ ಬಳಿಕ ನಿರಾಕ್ಷೇಪಣೆ ಪತ್ರ ನೀಡಬಹುದು ಎಂದಿದೆ. ಅರಣ್ಯ ಇಲಾಖೆ ಹೇಳುವಂತೆ ಆಗಬೇಕಾದರೆ ಇನ್ನೂ ಹಲವು ವರ್ಷಗಳೇ ಉರುಳಬಹುದು. ಸ್ಥಳೀಯ ಅರಣ್ಯಾಧಿಕಾರಿಗಳು ಮೆಸ್ಕಾಂಗೆ ಮಂಜೂರಾತಿ ನೀಡಲು ಸಮ್ಮತಿಸಿ ಅಭಿಪ್ರಾಯದ ವರದಿ ನೀಡಿದ್ದರೂ, ಮೇಲಾಧಿಕಾರಿಗಳು ತಾಂತ್ರಿಕ ಕಾರಣಗಳಿಂದ ತಡೆ ಹಿಡಿದಿದ್ದಾರೆ.

ಒಟ್ಟಿನಲ್ಲಿ ಮೆಸ್ಕಾಂ ಸಬ್‌ಸ್ಟೇಶನ್‌ ನಿರ್ಮಾಣಕ್ಕೆ ನಿವೇಶನ ಮರೀಚಿಕೆಯಾಗಿದೆ. ಉಪ್ಪಿನಂಗಡಿಯಲ್ಲಿ 33 ಕೆ.ವಿ. ಸಬ್‌ಸ್ಟೇಶನ್‌ ನಿರ್ಮಾಣವಾದರೆ ಉಪ್ಪಿನಂಗಡಿ, 34 ನೆಕ್ಕಿಲಾಡಿ, ಬಜತ್ತೂರು ಹಿರೆಬಂಡಾಡಿ, ಕೊçಲ, ರಾಮಕುಂಜ ಸೇರಿದಂತೆ ಏಳು ಗ್ರಾಮಗಳಿಗೆ ಅನುಕೂಲವಾಗಲಿದೆ ಎನ್ನುವುದು ಸ್ವತಃ ಮೆಸ್ಕಾಂ ಅಧಿಕಾರಿಗಳ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.