ಮತದಾನ: ಸೊರಬದಲ್ಲಿ ಜಾಸ್ತಿ, ಮಾನ್ವಿಯಲ್ಲಿ ಕಡಿಮೆ


Team Udayavani, Apr 25, 2019, 3:35 AM IST

soraba

ಬೆಂಗಳೂರು: ಎರಡನೇ ಹಂತದಲ್ಲಿ ಮಂಗಳವಾರ ಮತದಾನ ನಡೆದ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಒಟ್ಟು 112 ವಿಧಾನಸಭಾ ಕ್ಷೇತ್ರಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.82.59ರಷ್ಟು ಮತದಾನ ಆಗಿದ್ದರೆ, ರಾಯಚೂರು ಲೋಕಸಭೆ ವ್ಯಾಪ್ತಿಗೆ ಬರುವ ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.55.50ರಷ್ಟು ಮತದಾನ ಆಗಿದೆ.

ಉಳಿದಂತೆ ಈ 14 ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 112 ವಿಧಾನಸಭಾ ಕ್ಷೇತ್ರಗಳ ಪೈಕಿ ಚಿಕ್ಕೋಡಿ-ಸದಲಗಾ ಶೇ.80.79, ಹಾನಗಲ್‌ ಶೇ.80.80, ತೀರ್ಥಹಳ್ಳಿ ಶೇ.80.59, ಶಿಕಾರಿಪುರದಲ್ಲಿ ಶೇ.80.64ರಂತೆ ಅತಿ ಹೆಚ್ಚು ಮತದಾನ ಆಗಿದೆ. ಅದೇ ರೀತಿ, ರಾಯಚೂರು ನಗರ ಶೇ.55.54, ಯಾದಗಿರಿ ಶೇ.56.20, ಕಲಬುರಗಿ ಉತ್ತರ ಶೇ.56.89, ವಿಜಯಪುರ ನಗರ ಶೇ.56.89, ಕಲಬುರಗಿ ದಕ್ಷಿಣ ಶೇ.57.04, ಆಳಂದ ಶೇ.57.01ರಂತೆ ಅತಿ ಕಡಿಮೆ ಮತದಾನ ಆಗಿದೆ.

ಎರಡನೇ ಹಂತದಲ್ಲಿ ಶೇ.68.43ರಷ್ಟು ಮತದಾನ: ಎರಡನೇ ಹಂತದಲ್ಲಿ ಮತದಾನ ನಡೆದ 14 ಲೋಕಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ ಸರಾಸರಿ ಶೇ.68.43ರಷ್ಟು ಮತದಾನ ದಾಖಲಾಗಿದೆ. ಈ 14 ಕ್ಷೇತ್ರಗಳಲ್ಲಿ 2014ರ ಲೋಕಸಭಾ ಚುನಾವಣೆಯ ಶೇಕಡವಾರು ಮತ ಪ್ರಮಾಣಕ್ಕೆ ಹೊಲಿಕೆ ಮಾಡಿದರೆ ಶೇ.2.39ಷ್ಟು ಮತ ಪ್ರಮಾಣ ಹೆಚ್ಚಾಗಿದೆ. ಕಳೆದ ಬಾರಿ ಈ ಕ್ಷೇತ್ರಗಳಲ್ಲಿ ಶೇ.66.82ರಷ್ಟು ಮತದಾನ ಆಗಿತ್ತು.

ಶಿವಮೊಗ್ಗದಲ್ಲಿ ಅತಿ ಹೆಚ್ಚು ಶೇ.76.43ರಷ್ಟು ಮತದಾನ ಆಗಿದ್ದರೆ, ರಾಯಚೂರಿನಲ್ಲಿ ಅತಿ ಕಡಿಮೆ ಶೇ.57.91ರಷ್ಟು ಮತದಾನ ಆಗಿದೆ. ಈ 14 ಕ್ಷೇತ್ರಗಳಲ್ಲಿ 2014ರಲ್ಲಿ ಚಿಕ್ಕೋಡಿ ಅತಿ ಹೆಚ್ಚು ಶೇ.74.29 ಹಾಗೂ ಕಲಬುರಗಿಯಲ್ಲಿ ಅತಿ ಕಡಿಮೆ ಶೇ.57.96ರಷ್ಟು ಮತದಾನ ಆಗಿತ್ತು.

ಮೊದಲ ಹಂತದಲ್ಲಿ ಮತದಾನ ನಡೆದಿದ್ದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.68.81ರಷ್ಟು ಮತದಾನ ಆಗಿತ್ತು. ಈ ಕ್ಷೇತ್ರಗಳಿಗೆ ಹೊಲಿಸಿದರೆ 2ನೇ ಹಂತದ ಕ್ಷೇತ್ರಗಳಲ್ಲಿ ಶೇ.0.37ರಷ್ಟು ಕಡಿಮೆ ಮತದಾನ ಆಗಿದೆ. ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ 2.43 ಕೋಟಿ ಮತದಾರರ ಪೈಕಿ 85.94 ಲಕ್ಷ ಪುರುಷರು ಹಾಗೂ 80.33 ಲಕ್ಷ ಮಹಿಳೆಯರು ಸೇರಿ ಒಟ್ಟು 1.66 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಎರಡನೇ ಹಂತದ ಅಂತಿಮ ಮತ ಪ್ರಮಾಣ
ಕ್ಷೇತ್ರ ಶೇಕಡವಾರು ಮತ
ಚಿಕ್ಕೋಡಿ- ಶೇ.75.52
ಬೆಳಗಾವಿ- ಶೇ.67.31
ಬಾಗಲಕೋಟೆ- ಶೇ.70.59
ವಿಜಯಪುರ- ಶೇ.61.70
ಕಲಬುರಗಿ- ಶೇ.60.88
ರಾಯಚೂರು- ಶೇ.57.91
ಬೀದರ- ಶೇ.62.69
ಕೊಪ್ಪಳ- ಶೇ.68.41
ಬಳ್ಳಾರಿ- ಶೇ.69.59
ಹಾವೇರಿ- ಶೇ.73.99
ಧಾರವಾಡ- ಶೇ.70.13
ಉತ್ತರ ಕನ್ನಡ- ಶೇ.74.10
ದಾವಣಗೆರೆ- ಶೇ.73.03
ಶಿವಮೊಗ್ಗ- ಶೇ.76.43

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.