ಶಿವಾನುಭವದಲ್ಲಿ ಅಕ್ಕಮಹಾದೇವಿ ಜಯಂತಿ


Team Udayavani, Apr 25, 2019, 2:42 PM IST

hub-5

ಉಪ್ಪಿನಬೆಟಗೇರಿ: ಪುರುಷ ಪ್ರಧಾನ ಸಮಾಜದಲ್ಲಿ ಮೊದಲ ಬಾರಿಗೆ ಸ್ತ್ರೀಯರಿಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಶ್ರೇಯಸ್ಸು ಶಿವಶರಣೆ ಅಕ್ಕಮಹಾದೇವಿ ಅವರಿಗೆ ಸಲ್ಲುತ್ತದೆ ಎಂದು ಸ್ಥಳೀಯ ಮೂರುಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಹೇಳಿದರು.

ಗ್ರಾಮದ ಮೂರು ಸಾವಿರ ವಿರಕ್ತಮಠದಲ್ಲಿ ನಡೆದ ಮಾಸಿಕ ಶಿವಾನುಭವ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ವೈರಾಗ್ಯದ ಖಣಿ ಶಿವಶರಣೆ ಅಕ್ಕಮಹಾದೇವಿಯವರ ಧರ್ಮ ನಿಷ್ಠೆ, ಅಚಲ ವಿಶ್ವಾಸ, ಆದರ್ಶ ವ್ಯಕ್ತಿತ್ವ ಪ್ರಪಂಚದ ಯಾವ ಮಹಿಳೆಯರಲ್ಲಿಯೂ ಸಿಗುವುದಿಲ್ಲ. ಅಕ್ಕಮಹಾದೇವಿಯು ಚನ್ನಮಲ್ಲಿಕಾರ್ಜುನನಲ್ಲಿ ಕೇಳಿದಂತೆ ನಾವು ಸಹ ಮಹಾನುಭವಿಗಳ, ಸತ್ಯವಂತರ, ಒಳ್ಳೆಯ ಗುರುವಿನ ಸಂಗ ನೀಡು ಎಂದು ಭಗವಂತನಲ್ಲಿ ಕೇಳಿಕೊಳ್ಳೋಣ ಎಂದರು.

ಹೊಲ-ಮನೆ, ಅಧಿಕಾರ-ಅಂತಸ್ತು ಎಂಬ ಲೌಕಿಕ ಸಂಪತ್ತಿಗಿಂತ, ಪಾಠ-ಪ್ರವಚನ, ಪೂಜಾ-ಕೈಂಕರ್ಯ ನಡೆಯುವ ಅಲೌಕಿಕ ಸಂಪತ್ತಿಗೆ ಈ ಲೋಕದಲ್ಲಿ ಬಹಳ ಬೆಲೆ ಇದೆ. ಶ್ರೀಮಠದಲ್ಲಿ ನಡೆಯುತ್ತಿರುವ ಮಾಸಿಕ ಶಿವಾನುಭವ ಗೋಷ್ಠಿ ಕೇವಲ ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ಅವಶ್ಯವಾಗಿದೆ. ಮಹಿಳೆಯರಂತೆ ಪುರುಷರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಮಾಸಿಕ ಶಿವಾನುಭವ ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ಜಯಂತಿ ಹಾಗೂ ಅಕ್ಕಮಹಾದೇವಿ ತೊಟ್ಟಿಲೋತ್ಸವ ಜರುಗಿತು. ಮಹಿಳೆಯರಿಂದ ಆಕರ್ಷಕ ಜಾನಪದ ಗೀತೆಗಳು ಹಾಗೂ ಮಕ್ಕಳಿಂದ ವಚನ ಕಂಠ ಪಾಠ ಜರುಗಿತು.

ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ನವಲಗುಂದ, ದಾಕ್ಷಾಯಣಿ ತೊಗ್ಗಿ, ಸುಮಿತ್ರಾ ಗೌರಿಮಠ, ಗೀತಾ ಅರಳೀಕಟ್ಟಿ, ಶೈಲಾ ಪೂಜಾರ, ಕಸ್ತೂರಿ ಬುದ್ನಿ, ಸುನಂದಾ ಮಡಿವಾಳರ, ಕಸ್ತೂರಿ ಯಲಿಗಾರ, ರೇಣುಕಾ ಲಗಮಣ್ಣವರ ಹಾಗೂ ಲಕ್ಷ್ತ್ರೀ ಮಡಿವಾಳರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಪುಷ್ಪಾ ದೊಡವಾಡ ಕಾರ್ಯಕ್ರಮ ನಿರ್ವಹಿಸಿದರು.

ಬಸವ ಜಯಂತಿಯ ಶುಭ ದಿನದಂದು ಶ್ರೀಮಠದಲ್ಲಿ ಸುಸಜ್ಜಿತ ಗ್ರಂಥಾಲಯ ಹಾಗೂ ಸಂಗೀತ ಪಾಠಶಾಲೆ ಪ್ರಾರಂಭಿಸಲಾಗುವುದು. ಗ್ರಂಥಾಲಯಕ್ಕೆ ಪುಸ್ತಕ ಸಂಗ್ರಹಿಸಲು ಗ್ರಾಮದಲ್ಲಿ ಸ್ವತಃ ನಾನೇ ಪುಸ್ತಕ ಜೋಳಿಗೆಯನ್ನು ಹಿಡಿದು ಮನೆ ಮನೆಗೆ ತೆರಳಿ ವಿಶೇಷ ಪುಸ್ತಕಗಳನ್ನು ಸಂಗ್ರಹಿಸಲು ನಿರ್ಧರಿಸಲಾಗಿದೆ. ದೇಶ ಸುತ್ತು ಕೋಶ ಓದು ಎಂಬ ನಾಣ್ಣುಡಿಯಂತೆ ಜನರಲ್ಲಿ ಓದುವ ಹವ್ಯಾಸ ಮತ್ತು ಸಂಗೀತದ ಸಂಸ್ಕೃತಿಯನ್ನು ಈ ಮೂಲಕ ಉಳಿಸಿ-ಬೆಳೆಸಲು ಯೋಚಿಸಲಾಗಿದೆ.
• ಕುಮಾರ ವಿರೂಪಾಕ್ಷ ಸ್ವಾಮೀಜಿ, ಮೂರುಸಾವಿರ ವಿರಕ್ತಮಠ, ಉಪ್ಪಿನಬೆಟಗೇರಿ

ಟಾಪ್ ನ್ಯೂಸ್

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.