ರಮೇಶ್‌ಗೌಡ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ


Team Udayavani, Apr 25, 2019, 4:48 PM IST

tumkur-5-tdy..

ತುಮಕೂರು: ಶ್ರೀಲಂಕಾದಲ್ಲಿ ಭಾನು ವಾರ ನಡೆದ ಬಾಂಬ್‌ ಸ್ಫೋಟದಲ್ಲಿ ತುಮಕೂರಿನ ಸ್ವರಸ್ಪತಿ ಪುರಂನ ಉದ್ಯಮಿ ಎಲ್.ರಮೇಶ್‌ಗೌಡ ರವರ ಪಾರ್ಥಿವ ಶರೀರ ನಗರದ ಅವರ ನಿವಾಸಕ್ಕೆ ತರುತ್ತಲೇ ಅವರ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ರಮೇಶ್‌ಗೌಡರ ಮೃತದೇಹ ಬುಧವಾರ ಸಂಜೆ ಅವರ ತುಮಕೂರಿನ ಸರಸ್ವತಿಪುರಂ ಮನೆಗೆ ಆಗಮಿಸಿತು. ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಗಮಿಸಿ, ರಮೇಶ್‌ಗೌಡ ಮೃತದೇಹವನ್ನು ಎಕ್ಸ್‌ಕಾರ್ಟ್‌ ಮೂಲಕ ನೆಲಮಂಗಲ ಮಾರ್ಗವಾಗಿ ತುಮಕೂರಿಗೆ ಸಂಜೆ 5-30ರ ವೇಳೆಗೆ ತಲುಪಿತು.ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಜಿಲ್ಲಾಡಳಿತ ವತಿಯಿಂದ ತಹಶೀಲ್ದಾರ್‌ ನಾಗರಾಜ್‌, ಶಿರ‌ಸ್ತೇದಾರ ಜಯ ಪ್ರಕಾಶ್‌, ಡಾ. ಎಸ್‌.ಶರತ್‌ಚಂದ್ರ ಅವರು ತುಮಕೂರು ಸರಸ್ವತಿ ಪುರಂ ನಲ್ಲಿರುವ ಅವರ ನಿವಾಸಕ್ಕೆ ತರಲಾಗಿತ್ತು. ತಾಯಿ ರತ್ನಮ್ಮ, ಪತ್ನಿ ಮಂಜುಳಾ, ಮಗಳು ದೀಕ್ಷಾ, ಮಗ ಶೋಭಿತ್‌, ಸಹೋದರ ಪ್ರಕಾಶ್‌ ಸೇರಿ ದಂತೆ ಅವರ ಕುಟುಂಬದವರು, ಸ್ನೇಹಿ ತರು ಸೇರಿದಂತೆ ಅವರ ಬಂಧುಗಳ ರೋದನೆ ಹೆಚ್ಚಾಗಿತ್ತು.

ದುಬೈಗೆ ಹೋಗುತ್ತೇನೆ ಅಮ್ಮ ..
ರಮೇಶ್‌ಗೌಡ ಲೋಕಸಭಾ ಚುನಾವಣೆ ಮುಗಿಸಿಕೊಂಡು ಪ್ರವಾಸ ಮಾಡಲು ಶ್ರೀಲಂಕಾಕ್ಕೆ ತೆರಳಿದಿದ್ದರು. ಆದರೆ, ಶ್ರೀಲಂಕಾದಲ್ಲಿ ಸಂತಸದಿಂದ ಪ್ರವಾಸ ಮಾಡುವ ಮೊದಲೇ ಭಯೋತ್ಪಾದಕರ ಬಾಂಬ್‌ ಸ್ಫೋಟಕ್ಕೆ ಬಲಿಯಾಗಿದ್ದಾರೆ. ರಾಜ್ಯದಿಂದ ಪ್ರವಾಸಕ್ಕೆ ತೆರಳಿದ 7 ಜನರಲ್ಲಿ ಸರಸ್ವತಿಪುರಂ ನಿವಾಸಿ ರಮೇಶ್‌ ಗೌಡ ಒಬ್ಬರಾಗಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್‌ಗೌಡರ ತಾಯಿ ರತ್ನಮ್ಮ, ತನ್ನ ಒಡಲ ನೋವನ್ನು ತೊಡಿಕೊಂಡು ನನ್ನ ಮಗನಿಗೆ ಇಬ್ಬರು ಮಕ್ಕಳು ಇಬ್ಬರು ಮಕ್ಕಳೂ ತಬ್ಬಲಿಯಾಗಿ ಬಿಟ್ಟರು ಎಂದು ಕಣ್ಣೀರು ಹಾಕಿದ್ದು ಎಂಥವರ ಮನ ಕಲಕುತ್ತಿತು. ದುಬೈಗೆ ಹೋಗುತ್ತೇನೆ ಅಮ್ಮ ಎಂದು ಹೇಳಿ ಶ್ರೀಲಂಕಾಗೆ ಹೋಗಿದ್ದಾನೆ. ಶನಿವಾರ 3ಗಂಟೆಗೆ ಮನೆ ಬಿಟ್ಟವನು, ಸಂಜೆ 7ಗಂಟೆಗೆ ಅಲ್ಲಿ ತಲುಪಿದ್ದ, ಅದು ಆದ ಮೇಲೆ ಒಮ್ಮೆಯೂ ಕರೆ ಮಾಡಲಿಲ್ಲ ಎಂದು ಕಣ್ಣೀರು ಹಾಕಿದರು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌, ಸಚಿವ ಎಸ್‌.ಆರ್‌.ಶ್ರೀನಿವಾಸ್‌, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಶಾಸಕ ಜಿ.ಬಿ.ಜ್ಯೋತಿ ಗಣೇಶ್‌, ಸೇರಿದಂತೆ ಅಪರ ಬಂಧುಮಿತ್ರರು, ಸಾರ್ವಜನಿಕರು ಅವರ ಅಂತಿಮ ದರ್ಶನ ಪಡೆದರು. ಶ್ರೀಲಂಕಾದಲ್ಲಿ ನಡೆದ ಕೃತ್ಯ ಇಡೀ ವಿಶ್ವವೇ ಖಂಡಿಸುತ್ತಿದೆ. ಇಂಥ ಘಟನೆ ಎಲ್ಲಿಯೂ ನಡೆಯಬಾರದು. ವಿಧ್ವಂಸಕ ಕೃತ್ಯ ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು. ರಮೇಶ್‌ ಗೌಡ ಆತ್ಮಕ್ಕೆ ಶಾಂತಿ ಸಿಗಲಿಮ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದರು.

ತುಮಕೂರಿನ ಸರಸ್ವತಿ ಪುರಂನಿಂದ ಮೃತದೇಹವನ್ನು ಕುಣಿಗಲ್ನ ಅವರ ನಿವಾಸದಲ್ಲಿ ಸ್ವಲ್ಪ ಸಮಯ ಸಾರ್ವ ಜನಿಕರ ದರ್ಶನಕ್ಕಿಟ್ಟು ಅಲ್ಲಿಂದ ನಾಗಮಂಗಲ ತಾಲೂಕು ಬೆಳ್ಳೂರು ಹೋಬಳಿಯ ಅವರ ಸ್ವಗ್ರಾಮವಾದ ಬೆಟ್ಟದ ಕೋಟೆಯಲ್ಲಿ ಅಂತ್ಯಕ್ರಿಯೆ ಮೃತ ರಮೇಶ್‌ಗೌಡನ ತಂದೆಯ ಸಮಾಧಿ ಪಕ್ಕದಲ್ಲಿ ನೆರವೇರಿತು.

ಟಾಪ್ ನ್ಯೂಸ್

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.