ಕರಾವಳಿಯಲ್ಲಿ ಬಿರುಸಿನ ಗಾಳಿ ಸಾಧ್ಯತೆ: ಕಡಲ್ಕೊರೆತ ಭೀತಿ


Team Udayavani, Apr 26, 2019, 6:20 AM IST

wind

ಕಾಸರಗೋಡು: ರಾಜ್ಯದ ಕರಾವಳಿಯಲ್ಲಿ ಕೆಲ ದಿನ ರಾತ್ರಿ ಕಾಲದಲ್ಲಿ ಬಿರುಸಿನ ಗಾಳಿ ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಹವಾಮಾನ ನಿಗಾ ಕೇಂದ್ರ ಸಲಹೆ ಮಾಡಿದೆ. ಮೀನುಗಾರಿಕೆಗೆ ಸಮುದ್ರಕ್ಕಿಳಿಯಬಾರದೆಂದೂ ಈಗಾ ಗಲೇ ಸಮುದ್ರಕ್ಕೆ ತೆರಳಿದ ಮಂದಿ ತತ್‌ಕ್ಷಣ ಮರಳುವಂತೆ ಮೀನುಗಾರಿಕೆ ಇಲಾಖೆ ಡೆಪ್ಯುಟಿ ಡೈರೆಕ್ಟರ್‌ ಮುನ್ಸೂಚನೆ ನೀಡಿದ್ದಾರೆ.

ಮೀನುಗಾರಿಕೆ ವಲಯಗಳ ಆರಾಧನಾಲಯಗಳಲ್ಲಿ, ಇನ್ನಿತರ ಸಾರ್ವಜನಿಕ ಸಂಸ್ಥೆಗಳಲ್ಲಿ ಈ ಸಂಬಂಧ ಎಚ್ಚರಿಕೆ ಘೋಷಣೆ ಮಾಡುವಂತೆ ತಿಳಿಸಲಾಗಿದೆ. ಇತರರು ಯಾವುದೇ ಕಾರಣಕ್ಕೂ ಮೀನುಗಾರಿಕೆಗೆ ತೆರಳದಂತೆ ಖಚಿತಪಡಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ಅವರು ಆದೇಶ ನೀಡಿದರು.
1.5 ಮೀಟರ್‌ನಿಂದ 2.2. ಮೀಟರ್‌ ವರೆಗಿನ ಎತ್ತರದಲ್ಲಿ ತೆರೆ ಅಪ್ಪಳಿಸುವ ಭೀತಿ ಸಹಿತ ಕಡಲ್ಕೊರೆತ ತಲೆದೋರುವ ಭೀತಿಯಿದೆ ಎಂದು ಸಂಸ್ಥೆ ತಿಳಿಸಿದೆ.

ಹಿಂದೂ ಮಹಾಸಾಗರದಲ್ಲಿ ಭೂಮಧ್ಯೆ ರೇಖೆ ಪ್ರದೇಶದಲ್ಲಿ ಪೂರ್ವ, ಪಶ್ಚಿಮ ಬಂಗಾಲ ಒಳಸಮುದ್ರ, ಶ್ರೀಲಂಕಾದ ತೆಂಕಣ ಮತ್ತು ಪೂರ್ವದಲ್ಲಿ 25 ರಷ್ಟು ಶೂನ್ಯ ಒತ್ತಡ ರಚನೆಗೊಳ್ಳಲಿದೆ ಎಂದು ಕೇಂದ್ರ ಹವಾಮಾನ ಸಂಸ್ಥೆ ತಿಳಿಸಿದೆ.

ಈ ಅವಧಿಯಲ್ಲಿ ಗಾಳಿಯ ಬೀಸುವಿಕೆ ತೀವ್ರವಾಗಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವರೆಗಿರುವುದು. ಎ.26ರಂದು ಗಾಳಿಯ ವೇಗ ಗಂಟೆಗೆ 40ರಿಂದ 50 ಕಿ.ಮೀ. ವರೆಗೆ ಹೆಚ್ಚಳಗೊಳ್ಳುವ ಸಾಧ್ಯತೆಯಿದೆ. ಎ.27 ರಂದು ಗಾಳಿಯ ವೇಗದ ತೀವ್ರತೆ ಗಂಟೆಗೆ 60ರಿಂದ 70 ಕಿ.ಮೀ. ಆಗಿ ತಲೆದೋರುವ ಸಾಧ್ಯತೆಯಿದೆ. ಎ.28ರಂದು ರಾಜ್ಯ ಕರಾವಳಿಯಲ್ಲಿ ಗಂಟೆಗೆ 80 ರಿಂದ 90 ಕಿ.ಮೀ., ತಮಿಳುನಾಡು ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವರೆಗೆ ವೇಗವಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಮೀನುಗಾರರು ಎ.27ರಿಂದ ಹಿಂದೂ ಮಹಾಸಾಗರ ಮಹಾಸಮುದ್ರದ ಭೂಮಧ್ಯ ರೇಖೆ ಪ್ರದೇಶ, ಅದರ ಬಳಿ ಪೂರ್ವ-ಪಶ್ಚಿಮ ಬಂಗಾಲ ಒಳಕಡಲು, ತಮಿಳುನಾಡು ಕರಾವಳಿ ಪ್ರದೇಶಗಳಲ್ಲಿ ಮೀನುಗಾರಿಕೆಗೆ ತೆರಳಬಾರದು ಎಂದು ಮುನ್ಸೂಚನೆ ನೀಡಲಾಗಿದೆ. ಕಡಲ್ಕೊರೆತ ತೀವ್ರಗೊಳ್ಳುವ ಭೀತಿಯಿರುವುದರಿಂದ, ಆಳಸಮುದ್ರಕ್ಕೆ ಈಗಾಗಲೇ ತೆರಳಿದವರು ಎ.27ರಂದು ಮಧ್ಯರಾತ್ರಿ 12 ಗಂಟೆಗೆ ಸಮೀಪದ ಯಾವುದಾದರೂ ದಡ ಸೇರುವಂತೆ ಸಲಹೆ ಮಾಡಲಾಗಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.