ತೀರಾ ಹದಗೆಟ್ಟಿದೆ ಪ್ರಾಥಮಿಕ ಆರೋಗ್ಯ ಕೇಂದ್ರ ರಸ್ತೆ

ಸಂಪೂರ್ಣ ಕಿತ್ತು ಹೋಗಿದೆ ಡಾಮರು

Team Udayavani, Apr 26, 2019, 5:55 AM IST

28

ಸಂಪಾಜೆ ಆರೋಗ್ಯ ಕೇಂದ್ರಕ್ಕೆ ತೆರಳುವ ರಸ್ತೆ ತೀರಾ ಹದಗೆಟ್ಟಿರುವುದು.

ಅರಂತೋಡು: ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವ ತೆರಳುವ ರಸ್ತೆಯ ಸ್ಥಿತಿ ತೀರಾ ಹದಗೆಟ್ಟಿದ್ದು, ವಾಹನಗಳಿಗೆ ಮಾತ್ರವಲ್ಲದೆ ಪಾದಚಾರಿಗಳೂ ನಡೆದಾಡಲು ಕಷ್ಟಪಡುವ ಸ್ಥಿತಿಗೆ ಬಂದು ತಲುಪಿದೆ. ಸಂಪಾಜೆ ಪ್ರಾಥಮಿಕ ಆರೋಗ್ಯದ ವ್ಯಾಪ್ತಿಗೆ ಸೇರಿದ ರಸ್ತೆಯ ಡಾಮರು ಸಂಪೂರ್ಣ ಕಿತ್ತು ಹೋಗಿದೆ. ಆಸ್ಪತ್ರೆಗೆ ವಾಹನದಲ್ಲಿ ತೆರಳುವ ರೋಗಿಗಳ ಗೋಳು ಹೇಳ ತೀರದಾಗಿದೆ. ರೋಗಿಗಳು ವಾಹನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದರೆ ಇಲ್ಲಿನ ಗುಂಡಿಗಳಲ್ಲಿ ವಾಹನಗಳು ಜಂಪ್‌ ಮೇಲೆ ಜಂಪ್‌ ಹೊಡೆಯುತ್ತವೆ. ಈ ಕಾರಣದಿಂದ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ.

ನಿರ್ವಹಣೆ ಖಾಸಗಿ ಸಂಸ್ಥೆಗೆ!
ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ಕಳೆದ ಎರಡು ಮೂರು ತಿಂಗಳ ಹಿಂದೆ ಸಿಬಂದಿ ಕೊರತೆಯಿಂದ ಸಮಸ್ಯೆಗೆ ಸಿಲುಕಿತ್ತು. ಇದರಿಂದ ಹೆಚ್ಚಿನ ರೋಗಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳದೆ ಇತರ ಆರೋಗ್ಯ ಕೇಂದ್ರ ಹಾಗೂ ಖಾಸಗಿ ಆಸ್ಪತ್ರೆಗೆ ತೆರಳುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಈ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೂರು ವರ್ಷಗಳ ತನಕ ಉದ್ಭವ ಎನ್ನುವ ಖಾಸಗಿ ಸಂಸ್ಥೆಗೆ ನಿರ್ವಹಣೆ ಮಾಡಲು ಉಸ್ತುವಾರಿ ನೀಡಲಾಗಿದೆ. ಇದರಿಂದ ಖಾಲಿ ಇದ್ದ ಎಲ್ಲ ಹುದ್ದೆಗಳನ್ನು ಸಂಸ್ಥೆ ತಾತ್ಕಾಲಿಕ ನೆಲೆಯಲ್ಲಿ ಭರ್ತಿ ಮಾಡಿಕೊಂಡಿದೆ. ಇದರಿಂದ ರೋಗಿಗಳಿಗೆ ಉತ್ತಮ ಸೇವೆ ನೀಡುತ್ತಿದ್ದಾರೆ.
ದಿನಕ್ಕೆ ಸರಾಸರಿ 40 ಮಂದಿ ರೋಗಿಗಳು ಹೊರರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಾರಕ್ಕೆ ಒಂದು ಬಾರಿ ಹಾಗೂ ಉಪಕೇಂದ್ರದಲ್ಲಿ ತಿಂಗಳಿಗೆ ಒಂದು ಬಾರಿ ಲಸಿಕೆ ಹಾಕಲಾಗುತ್ತಿದೆ.

ವಸತಿಗೃಹ ದುರಸ್ತಿ
ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎ.ಎನ್‌.ಎಮ್‌. ವಸತಿಗೃಹ ನಾದರಸ್ತಿಯಲ್ಲಿದೆ. ಇದರ ದುರಸ್ತಿ ಕಾರ್ಯ ಈಗ ಆರಂಭಗೊಂಡಿದೆ. ಇದೀಗ ಆಸ್ಪತ್ರೆಯಲ್ಲಿ ದಿನದ 24 ಗಂಟೆಗಳ ಆರೋಗ್ಯ ಸೇವೆ ಲಭ್ಯವಾಗುತ್ತಿದ್ದು, ಸಿಬಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಸತಿಗೃಹದಲ್ಲಿ ಉಳಿದುಕೊಳ್ಳುತ್ತಿದ್ದಾರೆ.

ಗಮನಕ್ಕೆ ತರಲಾಗಿದೆ
ಎ.ಎನ್‌.ಎಮ್‌. ವಸತಿಗೃಹದ ದುರಸ್ತಿ ಕಾರ್ಯ ಆರಂಭಗೊಂಡಿದೆ. ಮೇಲ್ಛಾವಣಿ ಕೆಲಸ ನಡೆದು ಬಣ್ಣ ಬಳಿಯಲಾಗುತ್ತಿದೆ. ಇಲ್ಲಿನ ರಸ್ತೆ ಮಾತ್ರ ದುರಸ್ತಿ ಆಗಿಲ್ಲ. ಈ ಸಮಸ್ಯೆಯ ಬಗ್ಗೆ ಗ್ರಾಮ ಪಂಚಾಯತ್‌ನ ಗಮನಕ್ಕೆ ತಂದು ಜಿಲ್ಲಾ ಪಂಚಾಯತ್‌ನಲ್ಲಿ ಮಾತನಾಡುತ್ತೇವೆ.
– ಡಾ| ವಿನುಫ್ ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ

ಅನುದಾನ ಬಿಡುಗಡೆ
ಪ್ರಾಥಮಿಕ ಆರೋಗ್ಯ ಕೇಂದ್ರದ ರಸ್ತೆ ಹದಗೆಟ್ಟಿರುವ ಬಗ್ಗೆ ತಿಳಿದಿದೆ. ಈ ರಸ್ತೆಯ ಅಭಿವೃದ್ಧಿಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಕೆಲಸ ಆರಂಭವಾಗಲಿದೆ.
– ಕುಮಾರ್‌ ಚಿದಾರ್‌ ಅಧ್ಯಕ್ಷರು, ಕೊಡಗು-ಸಂಪಾಜೆ ಗ್ರಾ.ಪಂ.

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.