ಮಡಿಕೇರಿಯಲ್ಲಿ ಶಂಕಿತ ನಕ್ಸಲರು
Team Udayavani, Apr 26, 2019, 6:00 AM IST
ಸಾಂದರ್ಭಿಕ ಚಿತ್ರ
ಮಡಿಕೇರಿ: ತಾಲೂಕಿನ ಯವಕಪಾಡಿ ಗ್ರಾಮದ ತಡಿಯಂಡಮೋಳ್ ಬೆಟ್ಟ ಪ್ರದೇಶದಲ್ಲಿ ಇಬ್ಬರು ಅಪರಿಚಿತರು ಕಂಡು ಬಂದಿದ್ದು, ನಕ್ಸಲರಿರಬಹುದು ಎಂದು ಶಂಕಿಸಲಾಗಿದೆ. ಮನೆಯೊಂದಕ್ಕೆ ನುಗ್ಗಿ ಅಕ್ಕಿ ಮತ್ತು ಮಹಿಳೆಯೊಬ್ಬರ ಕೈಯಿಂದ ಮೊಬೈಲ್ ಫೋನನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಮೊಬೈಲ್ನ್ನು ಸ್ವಲ್ಪ ದೂರದಲ್ಲಿ ಎಸೆಯಲಾಗಿದೆ. ಗುರುವಾರ ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಯುವಕಪಾಡಿ ಗ್ರಾಮದ ಕಾರ್ಯಪ್ಪ ಅವರ ಪತ್ನಿ ಕೆ.ಕೆ.ಅನಿತಾ ಮಕ್ಕಳೊಂದಿಗೆ ಮನೆಯಲ್ಲಿದ್ದರು. ಪತಿ ಕಾರ್ಯಪ್ಪ ಅವರಿಗೆ ಫೋನ್ ಮಾಡಲೆಂದು ಅಂಗಳಕ್ಕೆ ಬಂದಾಗ ಕಾಫಿ ಗಿಡಗಳ ಮರೆಯಿಂದ ಚೂಡಿದಾರ್ ಹಾಗೂ ಓವರ್ ಕೋಟ್ ಧರಿಸಿದ್ದ ಸುಮಾರು 40ರ ಹರೆಯದ ಓರ್ವ ಮಹಿಳೆ ಹಾಗೂ ಕಪ್ಪು ಬಣ್ಣದ ಜರ್ಕಿನ್ ಮತ್ತು ಕಪ್ಪು ಬಣ್ಣದ ಬ್ಯಾಗ್ ಹಿಡಿದಿದ್ದ ಪುರುಷ ಇದ್ದಕ್ಕಿದ್ದಂತೆ ಹೊರ ಬಂದರು. ಮಹಿಳೆ, ಅನಿತಾ ಕೈಯಿಂದ ಮೊಬೈಲ್ ಕಸಿದು ಯಾರಿಗಾದರೂ ಮಾಹಿತಿ ನೀಡಿದರೆ ಹತ್ಯೆ ಮಾಡು ವುದಾಗಿ ಬೆದರಿಕೆ ಹಾಕಿ ತೆರಳಿದರು. ಸಮೀಪದ ರಾಜೇಶ್ ಅವರ ಮನೆಯಿಂದ ಇದೇ ಸಂದರ್ಭ ದಲ್ಲಿ ರೇಷನ್ ಅಕ್ಕಿ ಕಾಣೆಯಾಗಿದ್ದು, ಅದನ್ನು ಈ ಅಪರಿಚಿತರು ಕದ್ದೊಯ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ನಕ್ಸಲ್ ನಿಗ್ರಹ ದಳ ಮತ್ತು ಕೊಡಗು ಜಿಲ್ಲಾ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ