ಇನ್ನು ನಗರದ ಸಿಟಿ ಬಸ್‌ಗಳಲ್ಲೂ ಟಿಕೆಟ್ ಚೆಕ್ಕಿಂಗ್‌ ವ್ಯವಸ್ಥೆ


Team Udayavani, Apr 26, 2019, 6:00 AM IST

2304MLR1-TICKET-CHECKING

ಸಿಟಿ ಬಸ್‌ಗಳಲ್ಲಿ ಟಿಕೆಟ್ ತಾಪಾಸಣೆ ನಡೆಸುತ್ತಿರುವುದು.

ಮಹಾನಗರ: ಸರಕಾರಿ ಬಸ್‌ಗಳಲ್ಲಿ ನಡೆಯುವ ಟಿಕೆಟ್ ತಪಾಸಣೆ ಇದೀಗ ನಗರದಲ್ಲಿ ಓಡಾಡುವ ಸಿಟಿ ಬಸ್‌ಗಳಿಗೂ ಬಂದಿದೆ.

ನಗರದಲ್ಲಿ ಪ್ರತಿದಿನ ಓಡಾಡುವ 300ಕ್ಕೂ ಹೆಚ್ಚಿನ ಸಿಟಿ ಬಸ್‌ಗಳ ಪೈಕಿ ಹೆಚ್ಚಿನ ಬಸ್‌ಗಳಲ್ಲಿ ನಿರ್ವಾಹಕರು ಟಿಕೆಟ್ ನೀಡುವುದಿಲ್ಲ. ಇದನ್ನು ತಡೆಯುವ ಉದ್ದೇಶದಿಂದ ಸಿಟಿ ಬಸ್‌ಗಳಲ್ಲಿ ಟಿಕೆಟ್ ತಾಪಾಸಣೆ ವ್ಯವಸ್ಥೆಯನ್ನು ಪರಿಚಯಿಸಲು ಸಿಟಿ ಬಸ್‌ ಮಾಲಕರ ಸಂಘ ತೀರ್ಮಾನಿಸಿದೆ.

ಸಿಟಿ ಬಸ್‌ ಸಂಪರ್ಕ ವ್ಯವಸ್ಥೆ ದಿನದಿಂದ ದಿನಕ್ಕೆ ಡಿಜಿಟಲೀಕೃತವಾಗುತ್ತಿದೆ. ಮೊನ್ನೆಯಷ್ಟೇ ‘ಚಲೋ’ ಎಂಬ ಆ್ಯಪ್‌ ಬಿಡುಗಡೆಗೊಂಡಿದ್ದು, ನಗರದಲ್ಲಿ ಓಡಾಡುವ ಎಲ್ಲ ಬಸ್‌ಗಳಿಗೆ ಜಿಪಿಎಸ್‌ ಅಳವಡಿಕೆ ಅನುಷ್ಠಾನದಲ್ಲಿದೆ. ಸಾರಿಗೆ ವ್ಯವಸ್ಥೆಯಲ್ಲಿ ಇಷ್ಟೆಲ್ಲ ಹೊಸತನ ತಂದರೂ, ಟಿಕೆಟ್ ನೀಡದಿರುವ ಸಮಸ್ಯೆಗೆ ಮಾತ್ರ ಈವರೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ಇದೀಗ ಸಿಟಿ ಬಸ್‌ಗಳಲ್ಲಿ ಟಿಕೆಟ್ ಚೆಕ್ಕಿಂಗ್‌ ಮಂದಿ ಓಡಾಡಲಿದ್ದಾರೆ.

ಸ್ಟೇಟ್ಬ್ಯಾಂಕ್‌-ಅತ್ತಾವರ-ಮಂಗಳಾದೇವಿ (ರೂಟ್ ನಂ.27) ರೂಟ್‌ನಲ್ಲಿ ಈಗಾಗಲೇ ಟಿಕೆಟ್ ಚೆಕ್ಕಿಂಗ್‌ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಕೆಲವೇ ದಿನಗಳಲ್ಲಿಯೇ ತಲಪಾಡಿ ಮತ್ತು ರಥಬೀದಿ ಕಡೆಗಳಲ್ಲಿ ಸಂಚರಿಸುವ ಬಸ್‌ಗಳಿಗೂ ಟಿಕೆಟ್ ಚೆಕ್ಕಿಂಗ್‌ ಮಂದಿಯನ್ನು ನಿಯೋಜಿಸಲಾಗುತ್ತಿದೆ. ಹಂತ ಹಂತವಾಗಿ ನಗರದ ಎಲ್ಲ ಸಿಟಿ ಬಸ್‌ ಮಾರ್ಗಗಳಲ್ಲೂ ನೂತನ ಯೋಜನೆ ಅನುಷ್ಠಾನಿಸಿ, ಬಸ್‌ ನಿರ್ವಾಹಕ ಪ್ರತಿ ಪ್ರಯಾಣಿಕರಿಗೂ ಟಿಕೆಟ್ ನೀಡುವಂತೆ ಮಾಡುವುದೇ ಇದರ ಉದ್ದೇಶ.

ಯಾವ ರೀತಿ ನಿರ್ವಹಣೆ?
ಸಿಟಿ ಬಸ್‌ ಮಾಲಕರ ಸಂಘ ಮತ್ತು ‘ಚಲೋ’ ಆ್ಯಪ್‌ ಸಂಸ್ಥೆಯ ಸಹಯೋಗದೊಂದಿಗೆ ಈ ಕಾರ್ಯಾಚರಣೆ ನಡೆಯುತ್ತದೆ. ಟಿಕೆಟ್ ಚೆಕ್ಕಿಂಗ್‌ ಮಾಡುವ ಸಲುವಾಗಿ ನಾಲ್ಕರಿಂದ ಐದು ಮಂದಿಯನ್ನು ನಿಯೋಜಿಸಲಾಗುತ್ತದೆ. ಅವರು ಪ್ರತೀದಿನ ಬಸ್‌ ಸಂಚರಿಸುವ ವೇಳೆ ದಿಢೀರ್‌ ಆಗಮಿಸಿ, ಪ್ರಯಾಣಿಕರ ಟಿಕೆಟ್ ಪರಿಶೀಲನೆ ಮಾಡುತ್ತಾರೆ. ಒಂದು ವೇಳೆ ಪ್ರಯಾಣಿಕ ಟಿಕೆಟ್ ತೆಗೆದುಕೊಳ್ಳದಿದ್ದರೆ, ಟಿಕೆಟ್ ಬಗೆಗಿನ ಮಹತ್ವವನ್ನು ಹೇಳಲಾಗುತ್ತದೆ. ನಿರ್ವಾಹಕ ಟಿಕೆಟ್ ನೀಡದಿದ್ದರೆ ಅವರಿಗೆ ಎಚ್ಚರಿಕೆ ನೀಡಲಾಗುತ್ತದೆ.

ಸ್ಪಾಟ್ ಟಿಕೆಟಿಂಗ್‌ ವ್ಯವಸ್ಥೆ
ಟಿಕೆಟ್ ವ್ಯವಸ್ಥೆಯನ್ನು ಸುಗಮವಾಗಿ ನಿರ್ವಹಿಸಬೇಕು ಎಂಬ ಉದ್ದೇಶದಿಂದ ಸ್ಪಾಟ್ ಟಿಕೆಟಿಂಗ್‌ ವ್ಯವಸ್ಥೆ ಆರಂಭಿಸಲಾಗಿದೆ. ಮೊದಲನೇ ಹಂತವಾಗಿ ನಗರದ ಅತ್ತಾವರ ಬಸ್‌ ನಿಲ್ದಾಣದಲ್ಲಿ ಪ್ರಾರಂಭಿಸಲಾಗಿದೆ. ಈ ಬಸ್‌ ನಿಲ್ದಾಣದಲ್ಲಿ ಸದಾ ಜನಜಂಗುಳಿ ಇರುತ್ತದೆ. ಈ ಸಮಯದಲ್ಲಿ ಚಲೋ ಕಂಪೆನಿಯ ಅಧಿಕಾರಿಯೊಬ್ಬರು ಟಿಕೆಟ್ ವ್ಯವಸ್ಥೆಗೆಂದು ಬಸ್‌ ನಿಲ್ದಾಣದಲ್ಲಿ ನಿಂತಿರುತ್ತಾರೆ. ಪ್ರಯಾಣಿಕರಿಗೆ ಸ್ಥಳದಲ್ಲಿಯೇ ಟಿಕೆಟ್ ವ್ಯವಸ್ಥೆ ಕಲ್ಪಿಸುತ್ತಾರೆ.

ಟಿಕೆಟ್‌ನಲ್ಲೇ ಅರಿವು
ಮುಂದಿನ ದಿನಗಳಲ್ಲಿ ಸಿಟಿ ಬಸ್‌ಗಳಲ್ಲಿ ನೀಡುವ ಟಿಕೆಟ್‌ನಲ್ಲಿ ಪ್ರಯಾಣಿಕರು ದೂರುಗಳನ್ನು ನೀಡಲು ವಾಟ್ಸಾಪ್‌ ಸಂಖ್ಯೆ, ಜತೆಗೆ ಟಿಕೆಟ್ ತೆಗೆದುಕೊಳ್ಳುವ ಬಗ್ಗೆ ಅರಿವು ಮೂಡಿಸುವ ಸಂದೇಶ ಇರಲಿದೆ. ಈಗಾಗಲೇ ಅತ್ತಾವರ ರೂಟ್ ಬಸ್‌ ಟಿಕೆಟ್‌ನಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದೆ.

ಟಿಕೆಟ್ ತೆಗೆದುಕೊಳ್ಳದಿದ್ದರೆ ಏನಾಗುತ್ತೆ?

ಟಿಕೆಟ್ ಯಾಕೆ ತೆಗೆದುಕೊಳ್ಳಬೇಕು? ತೆಗೆದುಕೊಳ್ಳದಿದ್ದರೆ ಏನಾಗುತ್ತದೆ ಎಂಬ ಪ್ರಶ್ನೆ ಪ್ರಯಾಣಿಕರಲ್ಲಿ ಸಹಜವಾಗಿಯೇ ಮೂಡುತ್ತದೆ. ಒಂದು ವೇಳೆ ನೀವು ಪ್ರಯಾಣಿಸುವ ಬಸ್‌ ಅಪಘಾತಕ್ಕೆ ಒಳಗಾದರೆ ಆ ಸಮಯ ನಿಮಗೆ ಪರಿಹಾರ ಸಿಗಲು ಟಿಕೆಟ್ ಅತೀ ಅವಶ್ಯ. ಆ ವೇಳೆ ಇನ್ಶೂರೆನ್ಸ್‌ ಕಂಪೆನಿಯವರು ನಿಮಗೆ ನೀಡುವ ಪರಿಹಾರಕ್ಕೆ ಟಿಕೆಟ್ ಪರಿಗಣಿಸುತ್ತಾರೆ. ಒಂದು ವೇಳೆ ಕೈಯಲ್ಲಿ ಟಿಕೆಟ್ ಇಲ್ಲದಿದ್ದರೆ ಪರಿಹಾರ ಸಿಗುವುದಿಲ್ಲ. ಅಲ್ಲದೆ, ಕಾನೂನಿನ ರೀತಿಯೂ ಇದು ಅಪರಾಧವಾಗುತ್ತದೆ.

ಪ್ರಯಾಣಿಕರಿಗೂ ಅರಿವು
ನಿರ್ವಾಹಕರು ಪ್ರತಿಯೊಬ್ಬ ಪ್ರಯಾಣಿಕರಿಗೂ ಟಿಕೆಟ್ ನೀಡಬೇಕು ಎಂದು ಈಗಾಗಲೇ ಅಸೋಸಿಯೇಶನ್‌ಗೆ ತಿಳಿಸಿದ್ದೇವೆ. ಒಂದು ವೇಳೆ ಟಿಕೆಟ್ ನೀಡದಿದ್ದರೆ ಅವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಪ್ರಯಾಣಿಕರಿಗೆ ಟಿಕೆಟ್‌ನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈಗಾಗಲೇ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.

– ಜಾನ್‌ ಮಿಸ್ಕಿತ್‌
ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ)ಹೊಸ ವ್ಯವಸ್ಥೆ
ನಗರದಲ್ಲಿ ಸಂಚರಿಸುವ ಸಿಟಿ ಬಸ್‌ ನಿರ್ವಾಹಕರು ಪ್ರತಿಯೊಬ್ಬ ಪ್ರಯಾಣಿಕರಿಗೂ ಟಿಕೆಟ್ ನೀಡಬೇಕು. ಒಂದು ವೇಳೆ ನೀಡದಿದ್ದರೆ ಪ್ರಯಾಣಿಕ ನಿರ್ವಾಹಕರ ಬಳಿ ಟಿಕೆಟ್ ಕೇಳಿ ಪಡೆದುಕೊಳ್ಳಬೇಕು. ಟಿಕೆಟ್ ವ್ಯವಸ್ಥೆ ಸುಗಮವಾಗಿ ಸಾಗಲು ಟಿಕೆಟ್ ಚಕ್ಕಿಂಗ್‌ ವ್ಯವಸ್ಥೆ ಜಾರಿಗೊಳಿಸಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರೂಟ್‌ಗಳಿಗೆ ಪರಿಚಯಿಸುತ್ತೇವೆ.

– ದಿಲ್ರಾಜ್‌ ಆಳ್ವ, ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ
-ನವೀನ್‌ ಭಟ್ ಇಳಂತಿಲ

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.