ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ

ಜಿಗಿದ ಸಿಂಗಲ್‌ ಚೋಲ್‌, ಹೊಸ ಅಡಿಕೆ; ಡಬಲ್‌ ಚೋಲ್‌ ಸ್ಥಿರ

Team Udayavani, Apr 26, 2019, 6:23 AM IST

ARACNUT

ಸುಳ್ಯ: ಆರ್ಥಿಕ ವರ್ಷಾಂತ್ಯದಲ್ಲಿ ಸ್ಥಿರವಾಗಿದ್ದ ಹೊಸ ಅಡಿಕೆ, ಸಿಂಗಲ್‌ ಚೋಲ್‌ ಧಾರಣೆ ಈಗ ಏರಿಕೆ ಕಂಡಿದ್ದು, ಬೆಳೆಗಾರರಿಗೆ ಕೊಂಚ ನೆಮ್ಮದಿ ತಂದಿದೆ. ಡಬ್ಬಲ್‌ ಚೋಲ್‌ ಧಾರಣೆ ಸ್ಥಿರವಾಗಿದೆ.

ಹೊಸ ವರ್ಷದ ಆರಂಭದಲ್ಲಿ ಹೊಸ ಮತ್ತು ಹಳೆ ಅಡಿಕೆ ಧಾರಣೆ ಮುಮ್ಮುಖ ಮತ್ತು ಹಿಮ್ಮುಖವಾಗಿ ಚಲಿಸಿ ಸ್ಥಿರವಾಗಿ ನಿಲ್ಲದೆ ಬೆಳೆಗಾರರಿಗೆ ನಿರಾಶೆ ಮೂಡಿಸಿತ್ತು. ಆದರೆ ಎರಡು ದಿನಗಳ ಧಾರಣೆ ಬೆಳೆಗಾರರಿಗೆ ಆಶಾಕಿರಣ ಮೂಡಿಸಿದೆ.

ಧಾರಣೆ ಏರಿಕೆ
ಪುತ್ತೂರು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಬುಧವಾರ ಹೊಸ ಅಡಿಕೆ 230ರಿಂದ 235 ರೂ. ತನಕ ಖರೀದಿ ಯಾಗಿದೆ. ಸಿಂಗಲ್‌ ಚೋಲ್‌ 275ರಿಂದ 278 ರೂ. ತನಕ ಖರೀದಿಸಲಾಗಿದೆ. ಹೊಸ ಅಡಿಕೆ ಕೆ.ಜಿ.ಗೆ 5 ರೂ. ವೃದ್ಧಿಸಿಕೊಂಡರೆ ಸಿಂಗಲ್‌ ಚೋಲ್‌ ಕೂಡ 5 ರೂ.ಗಳಷ್ಟು ಏರಿದೆ. ಡಬ್ಬಲ್‌ ಚೋಲ್‌ 290ರಿಂದ 310 ರೂ.ಗಳಷ್ಟು ಧಾರಣೆ ಹೊಂದಿದ್ದು, ಸ್ಥಿರವಾಗಿದೆ. ಹೊಸ ಪಠೊರ 150 ರೂ.ಗಳಿಂದ 190 ರೂ., ಹಳೆ ಪಠೊರ 210 ರೂ., ಕರಿಗೋಟು 100 ರೂ.ಗಳಿಂದ 140 ರೂ. ಧಾರಣೆ ಹೊಂದಿದೆ.

ಬಾಹ್ಯ ಮಾರುಕಟ್ಟೆಯಲ್ಲಿ ಧಾರಣೆ ಮತ್ತಷ್ಟು ಹೆಚ್ಚಿದೆ. ಹೊಸತು 235ರಿಂದ 238 ರೂ. ತನಕ ಖರೀದಿಯಾಗಿದೆ. ಸಿಂಗಲ್‌ ಚೋಲ್‌ 275ರಿಂದ 280 ರೂ. ತನಕ ಬೇಡಿಕೆ ಇದೆ. ಆದರೆ ಡಬ್ಬಲ್‌ ಚೋಲ್‌ಗೆ ನಿರೀಕ್ಷಿತ ಬೇಡಿಕೆ ಸಿಕ್ಕಿಲ್ಲ ಅನ್ನುತ್ತಾರೆ ಬೆಳೆಗಾರರು.

ಮಾರುಕಟ್ಟೆ ತಂತ್ರದ ಭಾಗ
ಪ್ರತಿ ವರ್ಷದ ಧಾರಣೆ ಅಂಕಿ ಅಂಶದಂತೆ ಎಪ್ರಿಲ್‌ನಲ್ಲಿ ಅಡಿಕೆ ಧಾರಣೆ ಏರುತ್ತದೆ. ಇದು ಮಾರುಕಟ್ಟೆಯಲ್ಲಿ ನಡೆಯುವ ಒಂದು ತಂತ್ರಗಾರಿಕೆ. ಇದಕ್ಕೆ ವಿರುದ್ಧವಾಗಿ ಧಾರಣೆ ಇಳಿಸುವ ತಂತ್ರ ಫೆಬ್ರವರಿ, ಮಾರ್ಚ್‌ ತಿಂಗಳಲ್ಲಿ ನಡೆಯುತ್ತದೆ. ಮಾರ್ಚ್‌ನಲ್ಲಿ ಬ್ಯಾಂಕ್‌ ಸಾಲಗಳನ್ನು ಪಾವತಿಸಬೇಕಿರುವ ಹೆಚ್ಚಿನ ಬೆಳೆಗಾರರು ಸಿಕ್ಕಿದ ಧಾರಣೆಗೆ ಅಡಿಕೆ ಮಾರಾಟ ಮಾಡಲು ಮುಂದಾಗುತ್ತಾರೆ. ಈ ವೇಳೆ ಧಾರಣೆ ಇಳಿಸಿ, ಅಡಿಕೆ ಖರೀದಿಸಿ ಅನಂತರ ಹೆಚ್ಚು ಬೆಲೆಗೆ ಮಾರಾಟ ಮಾಡಿ ಲಾಭ ಮಾಡಿಕೊಳ್ಳುವ ತಂತ್ರ ಇದು. ಫೆಬ್ರವರಿ, ಮಾರ್ಚ್‌ನಲ್ಲಿಯೂ ಮಾರುಕಟ್ಟೆಗೆ ಬಾರದ ಅಡಿಕೆಯನ್ನು ಅನಂತರ ದರ ಏರಿಸಿ ಖರೀದಿಸಲಾಗುತ್ತದೆ. ಆಗ ಶಾಲಾ ಶುಲ್ಕ ಪಾವತಿ ಮೊದಲಾದ ಖರ್ಚುಗಳು ಬೆಳೆಗಾರರಿಗೆ ಇರುವುದರಿಂದ ಧಾರಣೆ ಏರಿಕೆಯಿಂದ ಸ್ವಲ್ಪ ನಷ್ಟ ಅನುಭವಿಸಿದರೂ ಅಡಿಕೆಯನ್ನು ಮಾರುಕಟ್ಟೆಯತ್ತ ಆಕರ್ಷಿಸುವ ತಂತ್ರವನ್ನು ವ್ಯಾಪಾರಸ್ಥರು ಹೂಡುತ್ತಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.