ಕನ್ನಡಿಯೊಳಗೆ ಬ್ಲೂವೇಲ್‌ : ಕರಾವಳಿ ಹುಡುಗ ಥ್ರಿಲ್ಲರ್‌ ಚಿತ್ರ


Team Udayavani, Apr 26, 2019, 11:13 AM IST

Suchi-Kannadi

ನಿಮಗೆ ಬ್ಲೂವೇಲ್‌ ಗೇಮ್‌ ಬಗ್ಗೆ ಗೊತ್ತಲ್ಲ. ಇಂಟರ್‌ನೆಟ್‌ ಮೂಲಕವೇ ವಿಶ್ವದಾದ್ಯಂತ ನೂರಾರು ಜನರ ಸಾವಿಗೆ ಕಾರಣವಾಗಿರುವ ಈ ಆನ್‌ಲೈನ್‌ ಗೇಮ್‌ಗೆ, ಭಾರತದಲ್ಲೂ ಅನೇಕರು ಬಲಿಯಾಗಿದ್ದಾರೆ. ಸದ್ಯ ಬ್ಲೂವೇಲ್‌ ತಡೆಗೆ ಸರ್ಕಾರಗಳು ತಲೆಕೆಡಿಸಿಕೊಂಡಿದ್ದು, ಇಂಥ ಅಪಾಯಕಾರಿ ಆನ್‌ಲೈನ್‌ ಗೇಮ್‌ಗಳ ವಿರುದ್ಧ, ಸರ್ಕಾರ, ಸಂಘ-ಸಂಸ್ಥೆಗಳು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿವೆ. ಈಗ ಇದೇ ಬ್ಲೂವೇಲ್‌ ವಿಷಯವನ್ನು ಇಟ್ಟುಕೊಂಡು ಕನ್ನಡದಲ್ಲಿ ಚಿತ್ರವೊಂದು ತೆರೆಗೆ ಬರುತ್ತಿದೆ.

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ “ಮಾಯಾ ಕನ್ನಡಿ’ ಎಂದು ಹೆಸರಿಡಲಾಗಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಅಂತಿಮ ಹಂತದಲ್ಲಿರುವ ಚಿತ್ರತಂಡ ಇತ್ತೀಚೆಗೆ ತನ್ನ ಮೊದಲ ಟೀಸರ್‌ ಬಿಡುಗಡೆ ಮಾಡಿದೆ. ಪ್ರಸ್ತುತ ಯುಎಇ ನಲ್ಲಿ ಏವಿಯೇಷನ್‌ ವೃತ್ತಿಯಲ್ಲಿರುವ, ದಕ್ಷಿಣ ಕನ್ನಡ ಮೂಲದ ಅನಿವಾಸಿ ಕನ್ನಡಿಗ, ವಿನೋದ್‌ ಪೂಜಾರಿ ಮಾಯಾ ಕನ್ನಡಿ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡಿದ ವಿನೋದ್‌ ಪೂಜಾರಿ, “ಇದೊಂದು ಸಸ್ಪೆನ್ಸ್‌-ಥ್ರಿಲ್ಲರ್‌ ಮತ್ತು ಕ್ರೈಂ ಕಥಾಹಂದರ ಹೊಂದಿರುವ ಚಿತ್ರ. ನಿಗೂಢವಾಗಿ ನಡೆಯುವ ಕೊಲೆಯ ಹಿಂದಿನ ಕಾರಣವೇನು, ಉದ್ದೇಶವೇನು ಎನ್ನುವುದು ಚಿತ್ರದ ಕಥೆಯ ಒಂದು ಎಳೆ. ಕೆಲವು ನೈಜ ಘಟನೆಗಳು ಈ ಚಿತ್ರಕ್ಕೆ ಸ್ಫೂರ್ತಿಯಾಗಿವೆ. ಬ್ಲೂವೇಲ್‌ ಗೇಮ್‌, ಕಾಲೇಜ್‌ ಕ್ಯಾಂಪಸ್‌, ಸ್ಟೂಡೆಂಟ್ಸ್‌ ಲೈಫ್, ಲವ್‌ ಹೀಗೆ ಹತ್ತರು ವಿಷಯಗಳು ಈ ಚಿತ್ರದಲ್ಲಿವೆ. ಸುಮಾರು ಒಂದೂವರೆ ವರ್ಷದ ಹಿಂದೆ ಪ್ರಾರಂಭವಾದ ಈ ಚಿತ್ರ ಈಗ ಅಂತಿಮ ಹಂತದಲ್ಲಿದ್ದೆ. ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲಿದ್ದೇವೆ’ ಎಂದರು.

“ಮಾಯಾ ಕನ್ನಡಿ’ ಚಿತ್ರದಲ್ಲಿ ಪ್ರಭು ಮುಂದಕೂರ್‌ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಕಾಜಲ್‌ ಕುಂದರ್‌ ಮತ್ತು ಅನ್ವಿಕಾ ಸಾಗರ್‌ ಇಬ್ಬರು ನಾಯಕಿಯರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಿರಿಯ ನಟ ಕೆ.ಎಸ್‌ ಶ್ರೀಧರ್‌ ಕಾಲೇಜ್‌ ಟ್ರಸ್ಟಿಯ ಪಾತ್ರದಲ್ಲಿ, ಅನೂಪ್‌ ಸಾಗರ್‌ ಖಳನಾಯಕನಾಗಿ, ಉಳಿದಂತೆ ಕಾರ್ತಿಕ್‌ ರಾವ್‌, ಅಶ್ವಿ‌ನ್‌ ರಾವ್‌, ಶ್ರೀ ಶ್ರೇಯಾ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸಪನಾ ಪಾಟೀಲ್‌, ರಂಜಿತ್‌ ಬಜ್ಪೆ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಮಣಿ ಕೋಕಲ್‌ ನಾಯರ್‌ ಛಾಯಾಗ್ರಹಣ, ಸುಜಿತ್‌ ನಾಯಕ್‌ ಸಂಕಲನ ಕಾರ್ಯವಿದೆ. ಚಿತ್ರದ ಹಾಡುಗಳಿಗೆ ಅಭಿಷೇಕ್‌ ಎಸ್‌.ಎನ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ದೃಶ್ಯಗಳಿಗೆ ಮ್ಯಾಂಡಿ ಮಂಜು ಸಂಭಾಷಣೆ ಬರೆದಿದ್ದಾರೆ.

ಸದ್ಯ ಟೀಸರ್‌ ಬಿಡುಗಡೆಯ ಮೂಲಕ ಚಿತ್ರದ ಪ್ರಮೋಷನ್‌ ಕೆಲಸಗಳಿಗೆ ಚಾಲನೆ ನೀಡಿರುವ “ಮಾಯಾ ಕನ್ನಡಿ’ ಚಿತ್ರತಂಡ, ಇದೇ ಮೇ ವೇಳೆಗೆ ಚಿತ್ರದ ಆಡಿಯೋವನ್ನು ಹೊರತರಲಿದೆ. ಚಿತ್ರತಂಡದ ಪ್ಲಾನ್‌ ಪ್ರಕಾರ ಎಲ್ಲವೂ ನಡೆದರೆ, ಇದೇ ಜೂನ್‌ ವೇಳೆಗೆ “ಮಾಯಾ ಕನ್ನಡಿ’ ಪ್ರೇಕ್ಷಕರ ಮುಂದೆ ಬರಲಿದೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.