ನಕಲು ತನಿಖೆಗೆ ಹಿಂಜರಿದ ಮೇಜರ್‌


Team Udayavani, Apr 26, 2019, 1:35 PM IST

hub-3

ಬಾಗಲಕೋಟೆ: ಮಕ್ಕಳ ಶೈಕ್ಷಣಿಕ ಹಂತದ ಮಹತ್ವದ ಘಟ್ಟ ಎಂದೇ ಹೇಳಲಾಗುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆದ ಕುರಿತ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಗಂಭೀರ ಕ್ರಮಕ್ಕೆ ಮುಂದಾಗಿದ್ದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡದ ಆಯುಕ್ತರು ಇದೀಗ ತಮ್ಮ ನಿಲುವು ಸಡಿಲಿಸಿದ್ದಾರೆ.

ಧಾರವಾಡ ಆಯುಕ್ತರ ಕಚೇರಿ ವ್ಯಾಪ್ತಿಯ ಏಳು ಜಿಲ್ಲೆಗಳ 596 ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದು, ಸಿಸಿ ಟಿವಿ ಫುಟೇಜ್‌ ಅನ್ನು ಕಡ್ಡಾಯವಾಗಿ ಒಪ್ಪಿಸಲು ಆಯುಕ್ತರು ಕಳೆದ ಮಾ.30ರಂದು ಎಲ್ಲ ಜಿಲ್ಲೆಗಳ ಡಿಡಿಪಿಐ ಹಾಗೂ ಬಿಇಒಗಳಿಗೆ ಆದೇಶ ಹೊರಡಿಸಿದ್ದರು. ಇದರಿಂದ ಸಾಮೂಹಿಕ ನಕಲು ನಡೆಸಿದ್ದರು ಎನ್ನಲಾದ ಕೆಲ ಪರೀಕ್ಷೆ ಕೇಂದ್ರಗಳ ಅಧೀಕ್ಷರು, ಶಿಸ್ತುಕ್ರಮದ ಭೀತಿಯಲ್ಲಿದ್ದರು. ಆದರೆ, ಏ.25ರಂದು ಆಯುಕ್ತರು ಪರಿಷ್ಕೃತ ಆದೇಶ ಹೊರಡಿಸಿ, ಸಿಸಿಟಿವಿ ಫುಟೇಜ್‌ ಸದ್ಯಕ್ಕೆ ಪಡೆಯುವುದನ್ನು ತಡೆ ಹಿಡಿದ್ದಾರೆ. ಹೀಗಾಗಿ ಬಹುತೇಕರು ನಿರಾಳರಾಗಿದ್ದಾರೆ.

ಏನಿದು ಫುಟೇಜ್‌?: ಕಳೆದ ಮಾರ್ಚ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಬಹುತೇಕ ಕೇಂದ್ರಗಳಲ್ಲಿ ಸಾಮೂಹಿಕ ನಕಲು ನಡೆದಿವೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಕೆಲ ಪರೀಕ್ಷೆ ಕೇಂದ್ರಗಳಿಗೆ ಸ್ವತಃ ಆಯುಕ್ತರೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೇ ವೇಳೆ ಕೆಲ ಸಿಬ್ಬಂದಿಯನ್ನು ಪರೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಿದ್ದರು. ಇದಾದ ಬಳಿಕ ಧಾರವಾಡ ಆಯುಕ್ತರ ಕಚೇರಿ ವ್ಯಾಪ್ತಿಯ ಎಲ್ಲಾ ಏಳು ಜಿಲ್ಲೆಗಳ ಪರೀಕ್ಷೆ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ನಡೆದ ಎಲ್ಲ ಚಟುವಟಿಕೆ ಪರಿಶೀಲಿಸಿ ಸಿಸಿಟಿವಿ ಫುಟೇಜ್‌ ನೀಡಲು ಆದೇಶಿಸಿದ್ದರು. ಜತೆಗೆ ಆಯಾ ಜಿಲ್ಲೆಗಳ ಡಿಡಿಪಿಐ, ಬಿಇಒಗಳು, ತಮ್ಮ ವ್ಯಾಪ್ತಿಯ ಪರೀಕ್ಷೆ ಕೇಂದ್ರಗಳ ಫುಟೇಜ್‌ಗಳನ್ನು ಒಂದು ಪೆನ್‌ಡ್ರೈನ್‌ನಲ್ಲಿ ಹಾಕಿಕೊಂಡು ಬರಲು ಸೂಚಿಸಿ, ಪರಿಶೀಲನೆಗೆ ದಿನಾಂಕ ನಿಗದಿಪಡಿಸಿದ್ದರು.

ಆಯುಕ್ತರ ಹಳೆಯ ಆದೇಶದ ನಿರ್ಧಾರದಂತೆ ಏ.26 ಮತ್ತು 27ರಂದು ಬಾಗಲಕೋಟೆ (96 ಪರೀಕ್ಷೆ ಕೇಂದ್ರ), ಏ.29 ಮತ್ತು 30ರಂದು ವಿಜಯಪುರ (101 ಕೇಂದ್ರ), ಮೇ 2, 3 ಮತ್ತು 4ರಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (130 ಕೇಂದ್ರ), ಮೇ 8 ಮತ್ತು 9ರಂದು ಬೆಳಗಾವಿ (104 ಕೇಂದ್ರ), ಮೇ 13 ಮತ್ತು 14ರಂದು ಹಾವೇರಿ (73 ಕೇಂದ್ರ), ಮೇ 15 ಮತ್ತು 16ರಂದು ಧಾರವಾಡ ಜಿಲ್ಲೆ (92 ಕೇಂದ್ರ) ಹಾಗೂ ಮೇ 17 ಮತ್ತು 18ರಂದು ಕಾರವಾರ ಹಾಗೂ ಶಿರಸಿ (38 ಮತ್ತು 35) ಶೈಕ್ಷಣಿಕ ಜಿಲ್ಲೆಗಳ ಪರೀಕ್ಷೆ ಕೇಂದ್ರಗಳಲ್ಲಿ ನಡೆದಿದೆ ಎನ್ನಲಾದ ಪರೀಕ್ಷೆ ಅಕ್ರಮ ಕುರಿತು ಪರಿಶೀಲನೆಗೆ ಮುಂದಾಗಿದ್ದರು.

ನಿರ್ಧಾರ ಕೈಬಿಟ್ಟ ಆಯುಕ್ತರು: ಆದರೆ, ಈ ನಿರ್ಧಾರದಿಂದ ಸದ್ಯ ಆಯುಕ್ತರು ಹಿಂದೆ ಸರಿದಿದ್ದಾರೆ. ವಿಭಾಗದ ಎಲ್ಲ ಪರೀಕ್ಷೆ ಕೇಂದ್ರಗಳ ಸಿಸಿಟಿವಿ ಫುಟೇಜ್‌ ಪರಿಶೀಲನೆ ಮಾಡಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಂದ ಈ ಪ್ರಕ್ರಿಯೆ ಕೈ ಬಿಡಲಾಗಿದೆ. ಪರೀಕ್ಷೆ ಕೇಂದ್ರಗಳ ಸಿಸಿ ಕ್ಯಾಮರಾ ಫುಟೇಜ್‌ ಕಾಯ್ದಿರಿಸುವುದು ಆಯಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಕರ್ತವ್ಯ. ಆದ್ದರಿಂದ ಪರೀಕ್ಷೆ ಕೇಂದ್ರದ ಮುಖ್ಯ ಅಧೀಕ್ಷಕರು, ತಮ್ಮ ಕೇಂದ್ರಗಳ ಸಿಸಿ ಕ್ಯಾಮರಾಗಳ ಫುಟೇಜ್‌ಗಳನ್ನು ತಮ್ಮ ಹಂತದಲ್ಲಿ ಕಡ್ಡಾಯವಾಗಿ ಸಂಗ್ರಹಿಸಿಟ್ಟುಕೊಳ್ಳಬೇಕು. ಮುಂದೆ ಕೈಗೊಳ್ಳಬಹುದಾದ ಶೈಕ್ಷಣಿಕ ಸಂಶೋಧನೆ, ಅಧ್ಯಯನಕ್ಕಾಗಿ ಆಯ್ದ ಪರೀಕ್ಷೆ ಕೇಂದ್ರಗಳ ಫುಟೇಜ್‌ಗಳನ್ನು ಮತ್ತು ದೂರು ಸಲ್ಲಿಕೆಯಾದ, ಅಕ್ರಮ ನಡೆದಂತಹ ಕೇಂದ್ರಗಳ ಫುಟೇಜ್‌ಗಳನ್ನು ಪರಿಶೀಲನೆಗೆ ಒಳಪಡಿಸಲಾಗುವುದು ಎಂದು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಅವರು ಗುರುವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಶ್ರೀಶೈಲ ಕೆ. ಬಿರಾದಾರ

 

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.