ಶಾಲೆಯೇ ಚುಕುಬುಕು ರೈಲು!


Team Udayavani, Apr 26, 2019, 3:40 PM IST

bel-2

ಬೆಟಗೇರಿ: ರೈಲು ಡಬ್ಬಿಯಲ್ಲಿ ಪಾಠ ಹೇಳುವ ಮೇಷ್ಟ್ರು, ರೈಲಿನಲ್ಲಿ ಕುಳಿತು ಪಾಠ ಕೇಳುವ ಮಕ್ಕಳು, ಆಟದೊಂದಿಗೆ ಪಾಠಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೇ? ಇದು ಗೋಕಾಕ ಶೈಕ್ಷಣಿಕ ವಲಯ ವ್ಯಾಪ್ತಿಯ ಹೂಲಿಕಟ್ಟಿ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ. ಇಲ್ಲಿ ಶಾಲಾ ಕೊಠಡಿಗಳಿಗೆ ರೈಲು ಚಿತ್ರ ಬಿಡಿಸಿ ಥೇಟ್ ರೈಲು ಗಾಡಿಯಂತೆಯೇ ಮಾಡಿದ್ದಾರೆ.

ಸರ್ಕಾರ ಹತ್ತು ಹಲವು ಯೋಜನೆಗಳ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯಲು ನಾನಾ ಕಸರತ್ತು ಮಾಡುತ್ತಿದೆ. ಆದರೆ ಈ ಶಾಲೆಗೆ ವಿಶಿಷ್ಟ ರೀತಿಯ ಬಣ್ಣ ಬಳಿದು, ರೈಲು ಚಿತ್ರ ಬಿಡಿಸಿ, ಶಾಲೆಯ ಚಿತ್ರಣವನ್ನು ಬದಲಿಸಿ ಆಕರ್ಷಣಿಯವಾಗಿ ಕಾಣುವಂತೆ ಮಾಡಿ, ಶಾಲಾ ವಂಚಿತ ಮಕ್ಕಳನ್ನು ಸಹ ಶಾಲೆಯತ್ತ ಸೆಳೆಯಲು ಶಿಕ್ಷಕರು ಹಾಗೂ ಸ್ಥಳೀಯ ಶಿಕ್ಷಣಪ್ರೇಮಿಗಳು ಪ್ರಯತ್ನ ನಡೆಸಿದ್ದಾರೆ.

ಇಂದಿನ ಖಾಸಗಿ ಶಾಲೆಗಳಿಗಳಿಗಿಂತ ತಾವೇನೂ ಕಡಿಮೇ ಇಲ್ಲ ಎನ್ನುವಂತೆ ಈ ಸರಕಾರಿ ಕನ್ನಡ ಶಾಲೆ ಇಂದು ಮಕ್ಕಳನ್ನು ತನ್ನತ್ತ ಸೆಳೆಯುತ್ತಿದೆ. ತುಸು ದೂರದಲ್ಲಿಯೇ ಎರಡ್ಮೂರು ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದರೂ ಈ ಶಾಲೆಯಲ್ಲಿ 1-7ನೇ ತರಗತಿವರೆಗೆ ಒಟ್ಟು 75 ಜನ ವಿದ್ಯಾರ್ಥಿಗಳಿದ್ದು, ನಾಲ್ಕು ಶಾಲಾ ಕೊಠಡಿಗಳಿವೆ, ಮೂವರು ಶಿಕ್ಷಕರಿದ್ದಾರೆ. ಆಟದ ಮೈದಾನವೂ ಚಿಕ್ಕದಿದೆ. ಆದರೂ ಶಾಲಾ ಮಕ್ಕಳ ಹಾಜರಾತಿ ಹೆಚ್ಚಿಸಲು ಆಗಾಗ ಸಿಹಿ ಸಿಹಿಯಾದ ವಿವಿಧ ಖಾದ್ಯಗಳನ್ನು ಮಾಡಿ ತರತರಹದ ಬಿಸಿಯೂಟ ನೀಡುತ್ತಿದ್ದು, ಜೊತೆಗೆ ಶಾಲೆಯ ನಲಿಕಲಿ ತರಗತಿಯ ಕೊಠಡಿಯಲ್ಲಿ ವಿಶಿಷ್ಟವಾಗಿ ಪಠ್ಯದ ವಿವಿಧ ಕಲಿಕಾ ಚಿತ್ರ ಬಿಡಿಸಿರುವುದು ಮಕ್ಕಳ ಕಲಿಕೆಗೆ ಪೂರಕವಾಗಿದೆ.

ಶಾಲೆಯ ಶಿಕ್ಷಕರಾದ ಎಸ್‌.ಕೆ.ಮಲ್ಲೇಶ, ಪಿ.ಎಂ.ಬಡ್ಲಿ, ಅತಿಥಿ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಪ್ಪ ಹಾದಿಮನಿ ಮತ್ತು ಸದಸ್ಯರು, ಪಾಲಕರು, ಸ್ಥಳೀಯ ಶಿಕ್ಷಣಪ್ರೇಮಿಗಳ ನಿರ್ಧಾರ, ಹಾಗೂ ಅವರ ಸಹಾಯ, ಸಹಕಾರದ ಕೊಡುಗೆಯಿಂದ ಶಾಲೆಗೆ ಹೊಸ ಬಣ್ಣ ಬಳಿದು ಶಾಲೆಯ ಕೊಠಡಿಗಳ ಮುಂಭಾಗದ ಚಿತ್ರಣವನ್ನು ಒಂದು ರೈಲು ಬೋಗಿಯಂತೆ ಚಿತ್ರಿಸಿ ಬಣ್ಣ ಬಳಿಯಲಾಗಿದೆ. ಶಾಲೆಯನ್ನು ಆಕರ್ಷಕ ರೈಲಿನಂತೆ ಮಾಡುವುದರಿಂದ ಶಾಲೆಯ ಮಕ್ಕಳ ಹಾಜರಾತಿ ಹೆಚ್ಚುತ್ತಿದೆ. ಅಲ್ಲದೇ ಮಕ್ಕಳು ಹೊಸ ಹುರುಪಿನಿಂದ ಲವಲವಿಕೆಯಿಂದ ಓಡಾಡುತ್ತಿದ್ದಾರೆ. ಶಾಲೆಗೆ ಹೊಸತೊಂದನ್ನು ಮಾಡಬೇಕೆಂದು ಆಲೊಚಿಸಿ ರೈಲು ಇಂಜಿನ್‌ ಮತ್ತು ಡಬ್ಬಿಗಳ ತರಹ ಚಿತ್ರ ಬಿಡಿಸಿದ್ದೆವೆ. ಈಗ ನಿತ್ಯ ಮಕ್ಕಳು ರೈಲು ಹತ್ತಿ ಇಳಿದಂತೆ ಖುಷಿ ಪಡುತ್ತಿದ್ದಾರೆ ಎಂದು ಶಾಲೆಯ ಮುಖ್ಯಶಿಕ್ಷಕ ಎಸ್‌.ಎಲ್.ಗುಂಡಕಲ್ಲಿ ಅವರು ಹೇಳುತ್ತಾರೆ.

ಇಲ್ಲಿಯ ಹೂಲಿಕಟ್ಟಿ ತೋಟದ ಶಾಲೆಯ ಸಮಗ್ರ ಅಭಿವೃದ್ಧಿಗೆ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷ-ಸದಸ್ಯರು, ಪಾಲಕರು, ಸ್ಥಳೀಯ ಶಿಕ್ಷಣ ಪ್ರೇಮಿಗಳು ನೀಡುತ್ತಿರುವ ಸಹಾಯ, ಸಹಕಾರ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿದೆ. ಶಿಕ್ಷಕರ ಪ್ರಾಮಾಣಿಕ ಸೇವೆಯಿಂದ ಶಾಲೆಯ ಸಮಗ್ರ ಪ್ರಗತಿ, ಮಕ್ಕಳ ದಾಖಲಾತಿಯೂ ಹೆಚ್ಚಾಗುವುದರಲ್ಲಿ ಎರಡು ಮಾತಿಲ್ಲ ಅಂಬುವುದು ಶಿಕ್ಷಣ ಪ್ರೇಮಿಗಳ ಅನಿಸಿಕೆ.

ನಮ್ಮ ಶಾಲೆಗೆ ರೈಲು ತರಹ ಹಚ್ಚಿದ ಬಣ್ಣ ನೋಡಾಕ್‌ ಬಾಳ್‌ ಖುಷಿ ತಂದಿದೆ. ನಮಗೂ ರೈಲಿನಲ್ಲಿ ಹತ್ತಿ ಇಳಿದಂತೆ ಮನಸ್ಸಿಗೆ ಒಂಥರಾ ತುಂಬಾ ಖುಷಿ ಅನಸ್ತ್ತ್ರೈತಿ.
•ಶಿವಾನಂದ ಕೋಣಿ 7ನೇ ತರಗತಿ ಶಾಲೆಯ ವಿದ್ಯಾರ್ಥಿ
ಸರ್ಕಾರಿ ಕನ್ನಡ ಶಾಲೆಗೆ ಮಕ್ಕಳನ್ನು ಸೆಳೆಯುವ ಉದ್ದೇಶದಿಂದ ನಾವು ಇಂತಹ ವಿನೂತನ ಪ್ರಯತ್ನ ಮಾಡಿದ್ದೇವೆ. ಸ್ಥಳೀಯ ಶಿಕ್ಷಣಪ್ರೇಮಿಗಳು, ಗ್ರಾಮಸ್ಥರು ಹಾಗೂ ಶಾಲೆಯ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಆಟದ ಮೈದಾನ ಹಾಗೂ ಶಾಲಾ ಕೊಠಡಿಗಳ ಕೊರತೆಯಿಂದ ಸ್ವಲ್ಪ ಸಮಸ್ಯೆ ಎದುರಾಗುತ್ತಿದೆ.
•ಎಸ್‌.ಎಲ್.ಗುಂಡಕಲ್ಲಿ, ಮುಖ್ಯ ಶಿಕ್ಷಕ
ಶಾಲೆಯ ಶಿಕ್ಷಕರ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ-ಸದಸ್ಯರು ಹಾಗೂ ಶಿಕ್ಷಣಪ್ರೇಮಿಗಳ ಸಹಾಯ ಸಹಕಾರ ಮೆಚ್ಚುವಂತದು. ಶಾಲೆಯು ಅಚ್ಚುಕಟ್ಟಾಗಿ ಅಂದವಾಗಿದ್ದರೆ ಮಕ್ಕಳ ಕಲಿಕೆಗೆ ಪೂರಕವಾಗುತ್ತದೆ. ಈ ಶಾಲೆಗೆ ಇನ್ನೂ ಅವಶ್ಯಕ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು.
•ಜಿ.ಬಿ. ಬಳಿಗಾರ, ಬಿಇಒ ಗೋಕಾಕ ಶೈಕ್ಷಣಿಕ ವಲಯ.
ಅಡಿವೇಶ ಮುಧೋಳ

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.