“ಶಿಬಿರಗಳು ವ್ಯಕ್ತಿತ್ವ ಬೆಳವಣಿಗೆಗೆ ಪೂರಕ’


Team Udayavani, Apr 27, 2019, 6:00 AM IST

x-5

ಬಂಟ್ವಾಳ: ರಜಾಕಾಲದ ಶಿಬಿರಗಳು ಮಕ್ಕಳ ಮಾನಸಿಕ ವಿಕಸನ ಮಾಡುವುದರೊಂದಿಗೆ ಅಗತ್ಯ ಸಾಮಾಜಿಕ ಜಾಗೃತಿ ಹಾಗೂ ಜೀವನ ಶಿಕ್ಷಣ ನೀಡುತ್ತದೆ ಎಂದು ಅರ್ಕುಳ ಚಾರಿಟೆಬಲ್‌ ಟ್ರಸ್ಟಿನ ಕಾರ್ಯದರ್ಶಿ ಡಾ| ಅರ್ಕುಳ ಬೀಡು ಜಯಕುಮಾರ ಶೆಟ್ಟಿ ಹೇಳಿದರು.

ಅವರು ಅರ್ಕುಳ ಚಾರಿಟೆಬಲ್‌ ಟ್ರಸ್ಟಿನ ಆಶ್ರಯದಲ್ಲಿ ಸ್ಥಳೀಯ ದ್ವಾರ ಸಮಿತಿ ಹಾಗೂ ಶ್ರೀದೇವಿ ಬಯಲಾಟ ಸಮಿತಿಯ ಸಹಯೋಗದೊಂದಿಗೆ ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಆವರಣದಲ್ಲಿ ಆಯೋಜಿಸಿದ ರಜಾಕಾಲದ ಶಿಬಿರ ವಿಕಾಸ-2019 ಅನ್ನು ಉದ್ಘಾಟಿಸಿ, ಮಾನಸಿಕ ಹಾಗೂ ಬೌದ್ಧಿಕ ವಿಕಸನಕ್ಕೆ ಪೂರಕವಾದ ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಕ್ಕಳು ತಮ್ಮ ರಜಾ ದಿನಗಳನ್ನು ಸದುಪಯೋಗಿಸಿಕೊಳ್ಳಬೇಕು ಎಂದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿದ್ದ ರಾಜ್ಯ ತರಬೇತಿದಾರ ಮಂಜು ವಿಟ್ಲ ಮಾತ ನಾಡಿ, ರಜಾಕಾಲದ ಶಿಬಿರಗಳು ಮಕ್ಕಳಲ್ಲಿ ಉತ್ತಮ ಆಸಕ್ತಿ ಬೆಳೆಸುವುದರೊಂದಿಗೆ ಬುದ್ಧಿಯ ವಿಕಾಸಕ್ಕೆ ಪೂರಕವಾಗಿದೆ. ಮಕ್ಕಳ ಬೌದ್ಧಿಕ ವಿಕಸನಕ್ಕೆ ಪೂರಕವಾದ ಪರಿಸರವನ್ನು ಒದಗಿಸುವ ಬೇಸಗೆ ಶಿಬಿರಗಳು ಅತೀ ಅಗತ್ಯ ಎಂದರು.

ಅರ್ಕುಳ ಅಡ್ಯಾರ್‌ ಗ್ರಾ.ಪಂ. ಉಪಾದ್ಯಕ್ಷೆ ಆಶಾ ಪ್ರಕಾಶ್‌, ಸದಸ್ಯರಾದ ಪವಿತ್ರಾ, ಸಂತೋಷ್‌ ತುಪ್ಪೆಕಲ್ಲು ಉಪಸ್ಥಿತರಿದ್ದರು. ವಿಕಾಸ ಶಿಬಿರದಲ್ಲಿ ಬಿಎಸ್‌ಎನ್‌ಎಲ್‌ ಮಾರುಕಟ್ಟೆ ಅಧಿಕಾರಿ ಕಂಪ ಸದಾನಂದ ಆಳ್ವ, ಮಂಟಮೆ ದಿನಕರ ಕರ್ಕೇರ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ, ಆಶಾ, ಶೋಭಾ ಮೊದಲಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

ಈ ಶಿಬಿರದಲ್ಲಿ ಸ್ಥಳೀಯ 69 ಮಕ್ಕಳು ಭಾಗವಹಿಸಿದ್ದರು. ಮಕ್ಕಳಿಗೆ ರಂಗ ಕಲೆ, ಭಾಷಣ ಕಲೆ, ಗುಂಪು ಚಟುವಟಿಕೆಗಳು, ಜೀವನ ಮೌಲ್ಯಗಳು ಹಾಗೂ ಪೌರತ್ವದ ಬಗ್ಗೆ ತರಬೇತಿ ನೀಡಲಾಯಿತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.