ಬಿಸಿಲಿನ ತಾಪ ಹೆಚ್ಚಾದಂತೆ ತಾಟಿನಿಂಗು ವ್ಯಾಪಾರ ಜೋರು


Team Udayavani, Apr 27, 2019, 5:00 AM IST

bisilina

ದೇವನಹಳ್ಳಿ: ಬೇಸಿಗೆಯ ಬಿಸಿಲು ಹೆಚ್ಚಾದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ನಗರ ದೇವನಹಳ್ಳಿಯ ಬೀದಿಗಳಲ್ಲಿ ತಾಟಿನಿಂಗು ಮಾರಾಟ ಬಲು ಜೋರಾಗಿ ನಡೆಯುತ್ತಿದ್ದು, ಎತ್ತ ಕಣ್ಣಾಯಿಸಿದರೂ ತಾಟಿನಿಂಗುಗಳೇ ಕಾಣುತ್ತಿವೆ.

ತಮಿಳುನಾಡಿನ ಸೇಲಂ, ಧರ್ಮಪುರಿ, ಹೊಸೂರು, ಪುತ್ತಕೂರು ಮುಂತಾದ ಭಾಗಗಳಲ್ಲಿ ಹೇರಳವಾಗಿ ತಾಟಿನಿಂಗನ್ನು ಬೆಳೆಯುತ್ತಾರೆ. ಇತ್ತೀಚೆಗೆ ತಾಳೆಹಣ್ಣು (ತಾಟಿನಿಂಗು)ಜಿಲ್ಲೆಗೆ ಹೆಚ್ಚಿನ ಪ್ರಮಾಣದಲ್ಲಿ ಸರಬರಾಜಾಗುತ್ತಿದೆ. ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿರುವುದರಿಂದ ಬಾಯಾರಿಕೆಯು ಹೆಚ್ಚಾಗುತ್ತದೆ.

ಹಾಗಾಗಿ, ಜನರು ಎಳನೀರಿಗೆ ಪರ್ಯಾಯವಾಗಿ ತಾಟಿನಿಂಗು ಮೊರೆ ಹೋಗುವುದು ಸಹಜವಾಗಿದೆ. ಇದರಿಂದ, ತಾಟಿನಿಂಗುಗೆ ಬೇಡಿಕೆ ಹೆಚ್ಚಾಗಿ ಕಂಡುಬರುತ್ತಿದೆ. ಎಳ ನೀರಿನಷ್ಟೇ ಆರೋಗ್ಯಕರ ಗುಣಧರ್ಮವನ್ನು ಹೊಂದಿರುವ ತಾಟಿನಿಂಗುಗಳನ್ನು, ನಗರದ ಬೀದಿಗಳಲ್ಲಿ ತಳ್ಳುವ ಗಾಡಿಗಳ ಮೂಲಕ ಮಾರಾಟ ಮಾಡಲಾಗುತ್ತಿದೆ.

ತಮಿಳುನಾಡಿನ ತಾಟಿನಿಂಗು: ತಮಿಳುನಾಡಿನಲ್ಲಿ ಹೆಚ್ಚಾಗಿ ಬೆಳೆಯುವ ತಾಟಿನಿಂಗು ಬೇಸಿಗೆಯಲ್ಲಿ ಹೆಚ್ಚು ಮಾರಾಟವಾಗುತ್ತದೆ. ಬೇಸಿಗೆ ಪ್ರಾರಂಭದ ದಿನಗಳಿಂದ ನಿಧಾನವಾಗಿ ಮಾರುಕಟ್ಟೆಗಳಲ್ಲಿ ಲಗ್ಗೆಯಿಡುತ್ತದೆ. ಮಾರ್ಚ್‌, ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ತಮಿಳುನಾಡಿನಿಂದ ನಗರಗಳಿಗೆ ತಂದು ಮಾರಾಟ ಮಾಡಲಾಗುತ್ತದೆ.

ಒಂದು ಕಾಯಿಗೆ 30 ರೂ.: ತಾಟಿನಿಂಗಿನ ತೊಳೆಗಳು ಸಾಕಷ್ಟು ಪ್ರಮಾಣದಲ್ಲಿದ್ದು, ಶರ್ಕರ, ರಂಜಕ, ಕಬ್ಬಿಣ, ವಿಟಮಿನ್‌ “ಸಿ’ನಿಂದ ಕೂಡಿರುತ್ತದೆ. ಇದು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ. 35 ಕಾಯಿಗಳು ಇರುವ ಒಂದು ಗೊಂಚಲಿಗೆ 250 ರಿಂದ 300 ರೂ.ಗೆ ಖರೀದಿಸುತ್ತಿದ್ದೇವೆ. ಒಂದು ಕಾಯಿ 30 ರೂ.ಗೆ ಮಾರಾಟ ಮಾಡುತ್ತೇವೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಗ್ಯಾಸ್ಟ್ರಿಕ್‌ ಸಮಸ್ಯೆಗೆ ಮದ್ದು: ತಾಟಿನಿಂಗು ಸೇವನೆ ಹೊಟ್ಟೆಯುರಿ, ಗ್ಯಾಸ್ಟ್ರಿಕ್‌ ಸಮಸ್ಯೆಗಳಿಗೆ ಉತ್ತಮ ಮದ್ದಾಗಿದೆ. ಸಕ್ಕರೆ ಖಾಯಿಲೆ ಇರುವವರಿಗೆ ಇದೊಂದು ಉತ್ತಮ ಔಷಧಿಯಾಗಿದೆ. ಸಣ್ಣ ಗಾತ್ರದ ಕಾಯಿ ಎಳನೀರಿನಂತೆ ಕಂಡರೂ, ಇದನ್ನು ಕತ್ತರಿಸಿದರೆ ಒಳಗೆ ಎಳೆ ಕೊಬ್ಬರಿಯಂತೆ 3 ರಿಂದ 4 ತೊಳೆಗಳು ಇರುತ್ತವೆ. ಇದನ್ನು ತಿಂದರೆ ಎಳನೀರಿನ ಗಂಜಿಯನ್ನು ಸವಿದಂತೆ ಅನುಭವವಾಗುತ್ತದೆ. ತಾಟಿನಿಂಗಿನಲ್ಲಿರುವ ನೀರು ಸಿಹಿಯಾಗಿರುತ್ತದೆ. ಅದಕ್ಕಾಗಿ, ಜನರು ಬೇಸಿಗೆಯಲ್ಲಿ ಬಹಳ ಇಷ್ಟಪಟ್ಟು ತಿನ್ನುತ್ತಾರೆ.

ಆರೋಗ್ಯ ಸಮಸ್ಯೆಗೆ ಉತ್ತಮ: ಸಾಮಾನ್ಯವಾಗಿ ಕರಾವಳಿ ಪ್ರದೇಶಗಳಲ್ಲಿ ಬೆಳೆಯುವ ತಾಟಿನಿಂಗು ಬಳಸಿ ಬೆಲ್ಲ ತಯಾರಿಸುತ್ತಾರೆ. ಈ ಬೆಲ್ಲವನ್ನು ಬಾಣಂತಿಯರು ಸೇವಿಸಬಹುದು. ಮುಟ್ಟಿನ ತೊಂದರೆ ಇರುವವರಿಗೆ ಇದು ಒಳ್ಳೆಯ ಔಷಧಿಯಾಗಿದೆ. ಇದರಲ್ಲಿ ಪೊಟಸಿಯಮ್‌ ಮತ್ತು ನಾರಿನ ಅಂಶ ಹೆಚ್ಚಾಗಿದೆ. ಹಾಗಾಗಿ, ಕಿಡ್ನಿಯಲ್ಲಿನ ಕಲ್ಲುಗಳ ಸಮಸ್ಯೆ ನಿವಾರಣೆಗೆ ತುಂಬಾ ಸಹಕಾರಿಯಾಗಿದೆ. ಇದನ್ನು ದಿನನಿತ್ಯ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ಹಿರಿಯರು ಹೇಳುತ್ತಾರೆ.

ಒಂದು ಕಾಯಿಗೆ 5ರೂ.ಲಾಭ: ಹೆಚ್ಚಾಗಿ ತಮಿಳುನಾಡಿನಿಂದ ತಾಟಿನಿಂಗು ಕಾಯಿಗಳನ್ನು ತರುತ್ತೇವೆ. ಒಂದು ವಾರಕ್ಕೆ ಒಂದು ಲೋಡ್‌ ತಾಟಿನಿಂಗು ತರಿಸುತ್ತೇವೆ. ಒಂದು ಕಾಯಿಗೆ 5 ರಿಂದ 6 ರೂ. ಲಾಭ ಸಿಗುತ್ತದೆ. 4ರಿಂದ 5 ವ್ಯಾಪಾರಸ್ಥರು ಲಾರಿಯಲ್ಲಿ ತರಿಸಿ ನಗರದಲ್ಲಿ ತಳ್ಳುವ ಗಾಡಿಗಳ ಮೂಲಕ ಮಾರಾಟ ಮಾಡುತ್ತೇವೆ. ಒಂದು ದಿನಕ್ಕೆ ಖರ್ಚು ಕಳೆದರೆ 400 ರೂ. ಲಾಭ ಸಿಗುತ್ತದೆ. ಎಲ್ಲೆಡೆ ಈ ಕಾಯಿಗೆ ಬೇಡಿಕೆಯಿದೆ ಎಂದು ವ್ಯಾಪಾರಸ್ಥ ಮುರುಗನ್‌ ತಿಳಿಸಿದರು.

ಬಾಯಾರಿಕೆ ನೀಗಿಸಲು ಸಹಕಾರಿ: ಹಲವಾರು ದಿನಗಳಿಂದ ತಾಟಿನಿಂಗುಗೆ ಬೇಡಿಕೆ ಇರಲಿಲ್ಲ. ದಿಢೀರನೆ ಹೆಚ್ಚಿನ ಬೇಡಿಕೆ ಬಂದಿದೆ. ಆಗಿನ ದಿನಗಳಲ್ಲಿ ಇದು 10 ರೂ.ಗೆ ಸಿಗುತ್ತಿತ್ತು. ಈಗ 30 ರೂ. ಇದೆ. ಬೇಸಿಗೆಯಲ್ಲಿ ಬಾಯಾರಿಕೆ ನೀಗುಸುವಲ್ಲಿ ಎಳನೀರಿನಂತೆ ತಾಟಿನಿಂಗು ಸಹ ಸಹಕಾರಿಯಾಗಿದೆ ಎಂದು ನಾಗರಿಕ ಕಾರಹಳ್ಳಿ ಕೆಂಪಣ್ಣ ಹೇಳಿದರು.

* ಎಸ್‌ ಮಹೇಶ್‌

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.