ಕರಾವಳಿ ತೀರದಲ್ಲಿ ಚಿಗುರೊಡೆದಿದೆ ಪರಿಸರ ರಕ್ಷಕ ಕಾಂಡ್ಲ ಕಾಡು

ಗುಂಡ್ಮಿ-ಪಾರಂಪಳ್ಳಿಯ 15ಹೆಕ್ಟೇರ್‌ ಪ್ರದೇಶದಲ್ಲಿ ಯಶಸ್ವಿ ಕೃಷಿ

Team Udayavani, Apr 27, 2019, 6:05 AM IST

2504KOTA1E

ಬೆಳೆದುನಿಂತ ಕಾಂಡ್ಲ ಗಿಡಗಳ ನಡುವೆ ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯರು.

ಕೋಟ: ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕಾಂಡ್ಲ ಕಾಡು ಇದೀಗ ನಶಿಸುತ್ತಿದೆ. ಇದರ ರಕ್ಷಣೆ ಮತ್ತು ಬೆಳೆಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸ್ಥಳೀಯರ ಮೂಲಕ ಕಾಂಡ್ಲ ವನಗಳ ನಿರ್ಮಾಣಕ್ಕೆ ಮುಂದಾಗಿದೆ. ವರ್ಷದ ಹಿಂದೆ ಗುಂಡ್ಮಿ, ಪಾರಂಪಳ್ಳಿ ಹೊಳೆಯ ಸುಮಾರು 15 ಹೆಕ್ಟೇರ್‌ ಪ್ರದೇಶದ ಹಿನ್ನೀರಿನಲ್ಲಿ ನಾಟಿ ಮಾಡಿದ ಕಾಂಡ್ಲ ಸಸಿಗಳಲ್ಲಿ ಶೇ.80ರಿಂದ ಶೇ.90ರಷ್ಟು ಬೆಳೆದು ನಿಂತಿದೆ.

4 ತಿಂಗಳು ನಾಟಿ
ಅರಣ್ಯ ಇಲಾಖೆ ಸಹಕಾರದಲ್ಲಿ ಒಂದು ವರ್ಷದ ಹಿಂದೆ ಸಾಸ್ತಾನ ಸಮೀಪ ಕೋಡಿಕನ್ಯಾಣ ಸೇತುವೆಯಿಂದ ಉತ್ತರಕ್ಕೆ ಗುಂಡ್ಮಿ ಬಡಾಅಲಿತೋಟ ಮೂಲಕ ಪಾರಂಪಳ್ಳಿ ಸೇತುವೆ ತನಕ ಸ್ಥಳೀಯರು 4ತಿಂಗಳುಗಳ ಕಾಲ ಕಾರ್ಯ ನಿರ್ವಹಿಸಿ 15ಹೆಕ್ಟೇರ್‌ ಪ್ರದೇಶದ ಹೊಳೆಯಲ್ಲಿ ಕಾಂಡ್ಲ ಗಿಡಗಳನ್ನು ನಾಟಿ ಮಾಡಿದ್ದರು.

ಪರಿಸರ ಸಂರಕ್ಷಕ
ಕಾಂಡ್ಲದಲ್ಲಿ ಸುಮಾರು 25ಕ್ಕೆ ಹೆಚ್ಚಿನ ಪ್ರಭೇದಗಳಿವೆ. ಇದರ ಬೇರುಗಳು ತೀರಪ್ರದೇಶದ ಮಣ್ಣನ್ನು ಬಿಗಿಯಾಗಿ ಹಿಡಿಯುವುದರಿಂದ ಸಮುದ್ರ ಹಾಗೂ ಭೂ ಕೊರೆತಕ್ಕೆ ತಡೆಯಾಗುತ್ತದೆ. ಮರಗಳು ತಡೆಗೋಡೆಯಂತೆ ಬೆಳೆದು ನಿಲ್ಲುವುದರಿಂದ ಬಿರುಗಾಳಿ, ಚಂಡಮಾರುತ, ಪ್ರವಾಹ, ಕಡಲ್ಕೊರೆತ, ಸುನಾಮಿಯಂಥ ಪ್ರಕೃತಿ ವಿಕೋಪದ ಜತೆಗೆ ಸಮುದ್ರದ ತೀರದಲ್ಲಿ ಉಂಟಾಗುವ ವಿನಾಶವನ್ನು ತಡೆಯುತ್ತದೆ. ಇದರ ದಪ್ಪ ಹಸುರು ಎಲೆಗಳು ಅಧಿಕ ಅಧಿಕ ಪ್ರಮಾಣದಲ್ಲಿ ಆಮ್ಲಜನಕ ಬಿಡುಗಡೆ ಮಾಡುತ್ತವೆ. ನದಿಗಳಿಂದ ಬರುವ ಸಾರಾಂಶವನ್ನು ಹಿಡಿದಿಟ್ಟು ಆ ಪ್ರದೇಶವನ್ನು ಸಮೃದ್ಧಗೊಳಿಸಲು ಇವು ಸಹಕಾರಿ. ಪ್ರಾಣಿ, ಪಕ್ಷಿ ಹಾಗೂ ಜಲಚರಗಳಾದ ಮೀನು, ಏಡಿ, ಕಪ್ಪೆ ಇತ್ಯಾದಿಗಳು ಮರಿಮೊಟ್ಟೆಗಳ ಸಂತಾನಾಭಿವೃದ್ಧಿ ಆಹಾರಕ್ಕಾಗಿ ಇದನ್ನು ಆಶ್ರಯಿಸುತ್ತವೆ.

ಕಾಂಡ್ಲ ವನ ನಿರ್ಮಾಣ ಹೇಗೆ ?
ಕಾಂಡ್ಲದ ಕಾಯಿ, ಕೋಡುಗಳೇ ಈ ಸಸ್ಯದ ಪರಂಪರೆಯ ಕೊಂಡಿ.ಮರದಿಂದ ಬೇರ್ಪಟ್ಟು, ನೀರಿನ ತಳದ ಕೆಸರಿಗೆ ಅಡಿಮುಖವಾಗಿ ಇಳಿಯುವ ಕೋಡುಗಳು, ಗಿಡಗಳಾಗಿ ರೂಪ ಪಡೆಯುತ್ತವೆ. ಇಂತಹ ಲಕ್ಷಾಂತರ ಕೋಡುಗಳನ್ನು ಸಂಗ್ರಹಿಸಿ ನಾಟಿ ಮಾಡಿ ಕಾಂಡ್ಲಾ ವನ ನಿರ್ಮಿಸಲಾಗುತ್ತದೆ.

ಸ್ಥಳೀಯರು, ಅರಣ್ಯಾಧಿಕಾರಿಗಳ ಮೆಚ್ಚುಗೆ
ಕರಾವಳಿ ಭಾಗದಲ್ಲಿ ಈ ಹಿಂದೆ ಕಾಂಡ್ಲ ಕೃಷಿ ಕೈಗೊಂಡಾಗ ಇಲ್ಲಿನ ವಾತಾವರಣಕ್ಕೆ ಕೇವಲ ಶೇ.50-60ರಷ್ಟು ಸಸಿಗಳು ಬದುಕುಳಿಯುತ್ತಿದ್ದವು. ಆದರೆ ಇಷ್ಟೊಂದು ಹೇರಳ ಪ್ರಮಾಣದಲ್ಲಿ ಗಿಡಗಳು ಬದುಕಿರುವುದಕ್ಕೆ ಸ್ಥಳೀಯರು ಮತ್ತು ಇಲ್ಲಿಗೆ ಭೇಟಿ ನೀಡಿದ ಮಂಗಳೂರು ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್‌ ಎಸ್‌. ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಪ್ರಭಾಕರನ್‌ ಹಾಗೂ ಸಿಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಂಡ್ಲ ವನ ರಕ್ಷಣೆಯಲ್ಲಿ ಕೈಜೋಡಿಸಿ
ಸಾಸ್ತಾನ ಸಮೀಪ ಗುಂಡ್ಮಿಯಲ್ಲಿ ಸ್ಥಳೀಯರ ಮೂಲಕ 15ಹೆಕ್ಟೇರ್‌ ಪ್ರದೇಶದಲ್ಲಿ ಕಾಂಡ್ಲವನ ನಿರ್ಮಿಸಲಾಗಿದೆ ಇದು ಪರಿಸರ ರಕ್ಷಣೆಗೆ ಸಹಕಾರಿಯಾಗಿದೆ. ಇದರ ರಕ್ಷಣೆಗೆ ಸ್ಥಳೀಯರು ಸಹಕಾರ ನೀಡಬೇಕು ಹಾಗೂ ಕಾಂಡ್ಲ ಗಿಡಗಳನ್ನು ನಾಶಪಡಿಸುವುದು ಅರಣ್ಯ ಕಾಯಿದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ.
-ಜೀವನದಾಸ್‌ ಶೆಟ್ಟಿ, ಉಪವಲಯ ಅರಣ್ಯಾಧಿಕಾರಿಗಳು, ಬ್ರಹ್ಮಾವರ

-ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.