ಅಚ್ಚರಿ ತಂದ ಪರಂ ಖಾನಾಪುರ ಭೇಟಿ
Team Udayavani, Apr 27, 2019, 4:30 AM IST
ಖಾನಾಪುರ: ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಠಾತ್ತನೇ ಪಟ್ಟಣಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಭೇಟಿ ಚರ್ಚೆಗೆ ಕಾರಣವಾಯಿತು. ಪಟ್ಟಣದಲ್ಲಿರುವ ಜ್ಯೋತಿಷ್ಯ ಶಾಸ್ತ್ರಿಗಳ ಮಕ್ಕಳ ಮದುವೆಗೆ ಪರಮೇಶ್ವರ್ ಕುಟುಂಬ ಸಮೇತ ಆಗಮಿಸಿ ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾದರು.
ಕಾಂಗ್ರೆಸ್ ಶಾಸಕ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಬಹುದಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನ ಪರಮೇಶ್ವರ್ ಅವರಿಗೆ ಒಲಿದು ಬರಲಿದೆ ಎನ್ನುವ ಊಹಾಪೋಹ ಹರಿದಾಡುತ್ತಿದ್ದು, ಅದಕ್ಕಾಗಿ ಇಲ್ಲಿ ಬರುತ್ತಿರಬಹುದು ಎನ್ನುವ ಚರ್ಚೆ ಕೂಡ ನಡೆಯಿತು. ಈ ಸಂದರ್ಭದಲ್ಲಿ ಶಾಸಕಿ ಡಾ. ಅಂಜಲಿ ನಿಂಬಾಳಕರ ಮತ್ತು ರಫೀಕ ಖಾನಾಪುರಿ ನಿವಾಸಕ್ಕೆ ಭೇಟಿ ನೀಡಿದರು.
ಕಳೆದ ವಿಧಾನಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಪರಮೇಶ್ವರ್ ಇದೇ ಶಾಸ್ತ್ರಿಯವರ ಮನೆಗೆ ತೆರಳಿ ತಮ್ಮ ರಾಜಕೀಯ ಭವಿಷ್ಯ ಕುರಿತು ಕೇಳಿ ತಿಳಿದು ಕೊಂಡಿದ್ದರು. ಶಾಸ್ತ್ರಿಯವರ ಭವಿಷ್ಯದ ಮೇಲೆ ಅಪಾರ ನಂಬಿಕೆ ಇಟ್ಟಿರುವ ಉಪಮುಖ್ಯಮಂತ್ರಿ ಅವರ ಮಕ್ಕಳ ಮದುವೆಗೆ ಹಾಜರಾಗಿದ್ದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !