ಸಮಸ್ಯೆ ಪರಿಹಾರದತ್ತ ನವೋದ್ಯಮಗಳ ಚಿಂತನೆ ಅಗತ್ಯ
Team Udayavani, Apr 27, 2019, 4:50 AM IST
ಬೆಂಗಳೂರು: ನವೋದ್ಯಮಗಳು ದೇಶದ ಗ್ರಾಮೀಣ ಸಮಸ್ಯೆಗಳ ಪರಿಹಾರದತ್ತ ಗಮನಹರಿಸಬೇಕಿದೆ ಎಂದು ನೀತಿ ಆಯೋಗದ ಅಟಲ್ ಇನ್ನೋವೇಷನ್ ಮಿಷನ್ ನಿರ್ದೇಶಕ ಆರ್. ರಮಣನ್ ತಿಳಿಸಿದರು.
ನಗರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (ಐಐಎಂಬಿ) ಸಭಾಂಗಣದಲ್ಲಿ ಸೆಲ್ಕೊ ಪ್ರತಿಷ್ಠಾನವು “ಸುಸ್ಥಿರ ಇಂಧನ ಮತ್ತು ಜೀವನೋಪಾಯ’ ಕುರಿತ ಎರಡು ದಿನಗಳ ಸಮಾವೇಶವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ದೇಶದಲ್ಲಿರುವ ಮೂಲಸೌಲಭ್ಯ ಕಲ್ಪಿಸುವಲ್ಲಿ ತಂತ್ರಜ್ಞಾನ ಆಧಾರಿತ ಅಭಿವೃದ್ಧಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ನವೋದ್ಯಮಗಳು ಗಂಭೀರ ಚಿಂತನೆ ನಡೆಸಬೇಕು ಎಂದು ಹೇಳಿದರು. ಶಾಲಾ ದಿನಗಳಲ್ಲಿಯೇ ವಿದ್ಯಾರ್ಥಿಗಳು ಸೌರವಿದ್ಯುತ್, ಘನತ್ಯಾಜ್ಯದ ಮರುಬಳಕೆ ಸೇರಿದಂತೆ ಹಲವು ಪ್ರಯೋಗಗಳನ್ನು ನಡೆಸುತ್ತಿದ್ದಾರೆ.
ಇದು ಭವಿಷ್ಯದಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಸಲಿದೆ ಎಂದು ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ಸೆಲ್ಕೊ ಸಂಸ್ಥೆ ಸಂಸ್ಥಾಪಕ ಡಾ.ಹರೀಶ್ ಹಂದೆ ಇತರರು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು